Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯ ಸಿಗದ ವಿನಃ ಹಣಕಾಸಿನ ನೆರವು ಬೇಡ, ಎಎಫ್​ಎಸ್​ಪಿಎ ಕಾಯ್ದೆ ಹಿಂಪಡೆಯಿರಿ; ನಾಗಾಲ್ಯಾಂಡ್​ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಗ್ರಹ

ಡಿಸೆಂಬರ್​ 4ರಂದು ನಾಗಾಲ್ಯಾಂಡ್​​ನಲ್ಲಿ ಒಂದು ದುರಂತ ನಡೆದಿತ್ತು. ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಕೆಲಸ ಮಾಡಿ, ವಾಹನವೊಂದರಲ್ಲಿ ಹಿಂದಿರುಗುತ್ತಿದ್ದ ಕಾರ್ಮಿಕರನ್ನು, ನಾಗಾಲ್ಯಾಂಡ್​ ಬಂಡುಕೋರರು ಎಂದು ಭಾವಿಸಿದ ಭಾರತೀಯ ಸೇನಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದರು.

ನ್ಯಾಯ ಸಿಗದ ವಿನಃ ಹಣಕಾಸಿನ ನೆರವು ಬೇಡ, ಎಎಫ್​ಎಸ್​ಪಿಎ ಕಾಯ್ದೆ ಹಿಂಪಡೆಯಿರಿ; ನಾಗಾಲ್ಯಾಂಡ್​ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಗ್ರಹ
ನಾಗಾಲ್ಯಾಂಡ್​ನಲ್ಲಿ ಪ್ರತಿಭಟನೆ
Follow us
TV9 Web
| Updated By: Lakshmi Hegde

Updated on:Dec 13, 2021 | 10:04 AM

ಇತ್ತೀಚೆಗೆ ನಾಗಾಲ್ಯಾಂಡ್​ನ ಓಟಿಂಗ್​ ಗ್ರಾಮದ ಬಳಿ ಸೇನೆಯ ಗುಂಡಿನ ದಾಳಿಗೆ 14 ನಾಗರಿಕರು ಮೃತಪಟ್ಟಿದ್ದರು. ಈ ಬಗ್ಗೆ ಸೇನೆ ಪಶ್ಚಾತ್ತಾಪ ವ್ಯಕ್ತಪಡಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರಗಳು ಮುಂದಾಗಿದ್ದವು. ಆದರೆ ರಾಜ್ಯ ಸರ್ಕಾರ ನಮಗೆ ಯಾವುದೇ ಹಣಕಾಸು ನೆರವು ನೀಡುವುದು ಬೇಡ ಎಂದು ಮೃತರ ಕುಟುಂಬಸ್ಥರು ಹೇಳಿದ್ದಾರೆ. ಹಾಗೇ, ಈ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. 

ಈ ಬಗ್ಗೆ ಓಟಿಂಗ್​ ಗ್ರಾಮದ ಕೌನ್ಸಿಲ್​​ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಕೂಲಿ ಕಾರ್ಮಿಕರು ಕೆಲಸ ಮುಗಿಸಿ ಬರುತ್ತಿರುವ ವೇಳೆ ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.  ಮೃತರ ಸಾವಿಗೆ ಸೂಕ್ತ ನ್ಯಾಯ ಸಿಗದ ಹೊರತು ನಾವು ಯಾವುದೇ ಹಣಕಾಸಿನ ನೆರವನ್ನೂ ಸ್ವೀಕಾರ ಮಾಡುವುದಿಲ್ಲ. ಇಡೀ ಈಶಾನ್ಯ ರಾಜ್ಯದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (AFSPA)ಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಸಚಿವ ಪೈವಾಂಗ್​ ಕೊನ್ಯಾಕ್​ ಮತ್ತು ಮೋನ್​ ಜಿಲ್ಲಾಧಿಕಾರಿ ನಮ್ಮೆದುರು ಡಿ.5ರಂದು 18,30,000 ರೂಪಾಯಿ ತಂದು ಕೊಡಲು ಯತ್ನಿಸಿದರು. ಇದು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಲು ತಂದ ಹಣ ಎಂದು ಗೊತ್ತಾಗುತ್ತಿದ್ದಂತೆ ಅದನ್ನು ತಿರಸ್ಕರಿಸಲಾಯಿತು. ಅಂದು ಕೂಲಿಕಾರ್ಮಿಕರ ಮೇಲೆ ಫೈರಿಂಗ್ ಮಾಡಿದ 21 ಪ್ಯಾರಾ ಕಮಾಂಡೋಗಳಿಗೆ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾ ನಿರತರು ಪಟ್ಟುಹಿಡಿದಿದ್ದಾರೆ.

ಡಿಸೆಂಬರ್​ 4ರಂದು ನಾಗಾಲ್ಯಾಂಡ್​​ನಲ್ಲಿ ಒಂದು ದುರಂತ ನಡೆದಿತ್ತು. ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಕೆಲಸ ಮಾಡಿ, ವಾಹನವೊಂದರಲ್ಲಿ ಹಿಂದಿರುಗುತ್ತಿದ್ದ ಕಾರ್ಮಿಕರನ್ನು, ನಾಗಾಲ್ಯಾಂಡ್​ ಬಂಡುಕೋರರು ಎಂದು ಭಾವಿಸಿದ ಭಾರತೀಯ ಸೇನಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದರು. ಇದು ಕಣ್ತಪ್ಪಿನಿಂದ ಆದ ಘಟನೆಯಾದರೂ 14 ನಾಗರಿಕರ ಪ್ರಾಣ ಹೋಗಿತ್ತು. ಅದಾದ ಬಳಿಕ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.ನೀಡುವುದಾಗಿ ಘೋಷಿಸಿತ್ತು. ಕೇಂದ್ರ ಸರ್ಕಾರ ಮೃತರ ಕುಟುಂಬಗಳಿಗೆ 11 ಲಕ್ಷ ರೂ.ನೀಡಲಾಗುವುದು ಮತ್ತು ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಹೇಳಿತ್ತು.

ಇದನ್ನೂ ಓದಿ: Kashi Vishwanath Corridor ವಿಶ್ವವಿಖ್ಯಾತ ಪ್ರವಾಸಿ ತಾಣ ಕಾಶಿ ಇನ್ಮುಂದೆ ಮತ್ತಷ್ಟು ಹೈಟೆಕ್; ಈ ಕಾರಿಡಾರ್ ವಿನ್ಯಾಸ ಎಂಥಾದ್ದು? ಏನಿದರ ವಿಶೇಷತೆ?

Published On - 7:53 am, Mon, 13 December 21

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ