AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವಿಗಿಂತ ಹೆಚ್ಚು ಮನುಷ್ಯನೇ ವಿಷಕಾರಿಯೇ?, ವ್ಯಕ್ತಿಯನ್ನು ಕಚ್ಚಿದ ಮರುಕ್ಷಣವೇ ಕಾಳಿಂಗಸರ್ಪ ಸಾವು

ವ್ಯಕ್ತಿಯನ್ನು ಕಚ್ಚಿದ ಮರು ಕ್ಷಣವೇ ಹಾವೊಂದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾಳಿಂಗಸರ್ಪ ಕಾಣಿಸಿಕೊಂಡಾದ ಉರಗತಜ್ಞರನ್ನು ಕರೆಸಲಾಗಿತ್ತು. ಇನ್ನೇನು ಅದನ್ನು ಚೀಲಕ್ಕೆ ತುಂಬಬೇಕು ಅನ್ನುವಷ್ಟರಲ್ಲಿ ಹಾವು ಕಚ್ಚಿತ್ತು.

ಹಾವಿಗಿಂತ ಹೆಚ್ಚು ಮನುಷ್ಯನೇ ವಿಷಕಾರಿಯೇ?, ವ್ಯಕ್ತಿಯನ್ನು ಕಚ್ಚಿದ ಮರುಕ್ಷಣವೇ ಕಾಳಿಂಗಸರ್ಪ ಸಾವು
ಕಾಳಿಂಗ ಸರ್ಪImage Credit source: Roundglass sustain
ನಯನಾ ರಾಜೀವ್
|

Updated on:Aug 04, 2024 | 11:21 AM

Share

ಭಾರತದ ಅತ್ಯಂತ ಅಪಾಯಕಾರಿ ಹಾವೆಂದರೆ ಅದು ಕಾಳಿಂಗಸರ್ಪ ಆದರೆ ಈ ಹಾವಿಗಿಂತ ಮನುಷ್ಯನೇ ಹೆಚ್ಚು ವಿಷಯಕಾರಿಯೇ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ. ಮಧ್ಯಪ್ರದೇಶದಲ್ಲಿ ವ್ಯಕ್ತಿಯನ್ನು ಕಚ್ಚಿದ ಮರುಕ್ಷಣವೇ ಕಾಳಿಂಗಸರ್ಪ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ಹಾವು ಕಚ್ಚಿದ ಬಳಿಕ ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾರೆ ಆದರೆ ಹಾವು ಮೃತಪಟ್ಟಿದೆ. ಈ ವಿಚಿತ್ರ ಪ್ರಕರಣವು ಸಾಗರದ ನಾರಾಯಾವಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ.ಕಾಳಿಂಗಸರ್ಪ  ಕಚ್ಚಿದರೆ ವ್ಯಕ್ತಿ ನೀರು ಕೇಳುವಷ್ಟರೊಳಗೆ ವಿಷವು ದೇಹದೊಳಗೆ ಏರುತ್ತದೆ. ಆದರೆ ಈಗ ಹಾವೇ ಸತ್ತಿರುವುದು ಆಚ್ಚರಿಯನ್ನುಂಟು ಮಾಡಿದೆ.

ಸಾಗರ-ಖುರೈ ರಸ್ತೆಯ ನಾರಾಯಣಾವಳಿಯ ಮುಖ್ಯ ರಸ್ತೆಯ ತಡೆಗೋಡೆಯ ಬಳಿ ಕಾಳಿಂಗಸರ್ಪ  ಕಾಣಿಸಿಕೊಂಡಾಗ, ಜನರು ಹಾವು ಹಿಡಿಯುವವ ಚಂದ್ರಕುಮಾರ್ ಅಹಿರ್ವಾರ್ಗೆ ಕರೆ ಮಾಡಿದರು.

ಮತ್ತಷ್ಟು ಓದಿ: ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ

ಚಂದ್ರಕುಮಾರ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ಹಿಡಿದರು, ಆದರೆ ರಕ್ಷಣೆಯ ಸಂದರ್ಭದಲ್ಲಿ ಕಾಳಿಂಗಸರ್ಪ ಅವರ ಮೇಲೆ ದಾಳಿ ಮಾಡಿತು ಮತ್ತು ಅವರ ಎರಡು ಕೈಗಳ ಹೆಬ್ಬರನ್ನು ಕಚ್ಚಿದೆ.

ಹಾವು ಕಚ್ಚಿದ ನಂತರ ಮನೆಯವರು ಚಂದ್ರಕುಮಾರ್ ಅವರನ್ನು ಚಿಕಿತ್ಸೆಗಾಗಿ ಭಾಗ್ಯೋದಯ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡ ನಂತರ ಚಂದ್ರಕುಮಾರ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಹಾವು ಸತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:21 am, Sun, 4 August 24

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ