AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ

ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರು ತಮ್ಮ ಮೊಬೈಲ್​ನಲ್ಲಿ ಹಾವಿನ ಚಿತ್ರವನ್ನು ಸೆರೆ ಹಿಡಿದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯೊಂದಿಗೆ ಹಂಚಿಕೊಂಡಿದ್ದಾರೆ. ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಾವಿನ ಕುರುಹುಗಳು ಪತ್ತೆಯಾಗಿದೆ.

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ
ಸಾಂದರ್ಭಿಕ ಚಿತ್ರ
shruti hegde
|

Updated on: Jun 06, 2021 | 3:43 PM

Share

ವಿಶ್ವದ ಅತಿ ಉದ್ದದ ವಿಷಕಾರಿ ಹಾವು ಕಿಂಗ್​ಕೋಬ್ರಾ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದೆ. ಅರಣ್ಯ ಮತ್ತು ವನ್ಯವಿಭಾಗದಲ್ಲಿ ನಿನ್ನೆ (ಶನಿವಾರ) ಕಿಂಗ್​ ಕೊಬ್ರಾ ಪತ್ತೆಯಾಗಿರುವುದು ದಾಖಲಾಗಿದೆ. ವಿಶ್ವದ ಅತಿ ಉದ್ದದ ಹಾವು ಮತ್ತು ವಿಷಕಾರಿ ಹಾವು ಎಂದು ಗುರುತಿಸಲ್ಪಡುವ ಈ ಹಾವು ಹಲ್ಲಿಗಳಂತಹ ಕೀಟಗಳನ್ನು ಹಿಡಿದು ತಿನ್ನುತ್ತವೆ. ಹಿಮಾಚಲದ ಸಿರ್ಮೌರ್​ ಜಿಲ್ಲೆಯ​ ಅರಣ್ಯದ ಪಕ್ಕದಲ್ಲಿರುವ  ಶಿವಾಲಿಕ್​ ಬೆಟ್ಟದಲ್ಲಿ ಹಾವನ್ನು ಗುರುತಿಸಲಾಗಿದೆ.

ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರು ತಮ್ಮ ಮೊಬೈಲ್​ನಲ್ಲಿ ಹಾವಿನ ಚಿತ್ರವನ್ನು ಸೆರೆ ಹಿಡಿದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯೊಂದಿಗೆ ಹಂಚಿಕೊಂಡಿದ್ದಾರೆ. ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಾವಿನ ಕುರುಹುಗಳು ಪತ್ತೆಯಾಗಿದೆ.

ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿದೆ. ಕಿಂಗ್​ ಕೋಬ್ರಾವನ್ನು ಹಿಂದೆಂದೂ ಹಿಮಾಚಲ ಪ್ರದೇಶದಲ್ಲಿ ನೋಡಿಲ್ಲ. ಮತ್ತು ಇಲಾಖೆಯಲ್ಲಿ ದಾಖಲಾಗಿಲ್ಲ. ಹಿಮಾಚಲದ ಶಿವಾಲಿಕ್​ ಬೆಟ್ಟಗಳಲ್ಲಿ ಮೊದಲ ಬಾರಿಗೆ ಹಾವನ್ನು ಗುರುತಿಸಲಾಗಿದೆ. ಈಗ ಹಿಮಾಚಲ ಪ್ರದೇಶದಲ್ಲಿ ನೋಡುತ್ತಿರುವುದು ಮಹತ್ವದ್ದಾಗಿದೆ ಎಂದು ಹಿಮಾಚಲದ ಪ್ರಧಾನ ಸಂರಕ್ಷಣಾಧಿಕಾರಿ ಅರ್ಚನಾ ಶರ್ಮಾ ಹೇಳಿದ್ದಾರೆ. ಈ ಕುರಿತಾಗಿ ದಿ ಇಂಡಿಯನ್​ ಎಕ್ಸ್​ಪ್ರೆಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಥಳೀಯ ನಿವಾಸಿ ಪ್ರವೀಣ್​​ ಠಾಕೂರ್​ ಅವರು ಈ ವಿಷಪೂರಿತ ಹಾವಿನ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಅವರಿಗೆ ಈ ಹಾವು ಕಿಂಗ್​ ಕೋಬ್ರಾ ಎಂಬುದು ತಿಳಿದಿರಲಿಲ್ಲ. ತಮ್ಮ ಸ್ನೇಹಿತರೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರಲ್ಲಿ ಯಾರೋ ಅರಣ್ಯ ಮತ್ತು ವನ್ಯಜೀವಿ ವಿಭಾಗಕ್ಕೆ ಫೋಟೋ ಕಳುಕಿಸಿದ್ದಾರೆ.

ಪರಿಶೀಲನೆಯ ಬಳಿಕ ಹಾವು ಕಿಂಗ್ ಕೋಬ್ರಾ ಎಂಬುದು ತಿಳಿದು ಬಂದಿದೆ. ನಾವು ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರ ಸಂಪರ್ಕದಲ್ಲಿದ್ದೇವೆ. ಕಾಡುಗಳಲ್ಲಿರುವ ಪ್ರದೇಶವನ್ನು ಪರಿಶೀಲಿಸುತ್ತಿದ್ದೇವೆ ಎಂದು ಡಿಎಫ್​ಒ ಕುನಾಲ್​ ಆಂಗ್ರಿಶ್​ ಹೇಳಿದ್ದಾರೆ.

ಇದನ್ನೂ ಓದಿ: 

15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!

ಕೊಡಗಿನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!