AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ

ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರು ತಮ್ಮ ಮೊಬೈಲ್​ನಲ್ಲಿ ಹಾವಿನ ಚಿತ್ರವನ್ನು ಸೆರೆ ಹಿಡಿದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯೊಂದಿಗೆ ಹಂಚಿಕೊಂಡಿದ್ದಾರೆ. ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಾವಿನ ಕುರುಹುಗಳು ಪತ್ತೆಯಾಗಿದೆ.

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ
ಸಾಂದರ್ಭಿಕ ಚಿತ್ರ
shruti hegde
|

Updated on: Jun 06, 2021 | 3:43 PM

Share

ವಿಶ್ವದ ಅತಿ ಉದ್ದದ ವಿಷಕಾರಿ ಹಾವು ಕಿಂಗ್​ಕೋಬ್ರಾ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದೆ. ಅರಣ್ಯ ಮತ್ತು ವನ್ಯವಿಭಾಗದಲ್ಲಿ ನಿನ್ನೆ (ಶನಿವಾರ) ಕಿಂಗ್​ ಕೊಬ್ರಾ ಪತ್ತೆಯಾಗಿರುವುದು ದಾಖಲಾಗಿದೆ. ವಿಶ್ವದ ಅತಿ ಉದ್ದದ ಹಾವು ಮತ್ತು ವಿಷಕಾರಿ ಹಾವು ಎಂದು ಗುರುತಿಸಲ್ಪಡುವ ಈ ಹಾವು ಹಲ್ಲಿಗಳಂತಹ ಕೀಟಗಳನ್ನು ಹಿಡಿದು ತಿನ್ನುತ್ತವೆ. ಹಿಮಾಚಲದ ಸಿರ್ಮೌರ್​ ಜಿಲ್ಲೆಯ​ ಅರಣ್ಯದ ಪಕ್ಕದಲ್ಲಿರುವ  ಶಿವಾಲಿಕ್​ ಬೆಟ್ಟದಲ್ಲಿ ಹಾವನ್ನು ಗುರುತಿಸಲಾಗಿದೆ.

ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರು ತಮ್ಮ ಮೊಬೈಲ್​ನಲ್ಲಿ ಹಾವಿನ ಚಿತ್ರವನ್ನು ಸೆರೆ ಹಿಡಿದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯೊಂದಿಗೆ ಹಂಚಿಕೊಂಡಿದ್ದಾರೆ. ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಾವಿನ ಕುರುಹುಗಳು ಪತ್ತೆಯಾಗಿದೆ.

ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿದೆ. ಕಿಂಗ್​ ಕೋಬ್ರಾವನ್ನು ಹಿಂದೆಂದೂ ಹಿಮಾಚಲ ಪ್ರದೇಶದಲ್ಲಿ ನೋಡಿಲ್ಲ. ಮತ್ತು ಇಲಾಖೆಯಲ್ಲಿ ದಾಖಲಾಗಿಲ್ಲ. ಹಿಮಾಚಲದ ಶಿವಾಲಿಕ್​ ಬೆಟ್ಟಗಳಲ್ಲಿ ಮೊದಲ ಬಾರಿಗೆ ಹಾವನ್ನು ಗುರುತಿಸಲಾಗಿದೆ. ಈಗ ಹಿಮಾಚಲ ಪ್ರದೇಶದಲ್ಲಿ ನೋಡುತ್ತಿರುವುದು ಮಹತ್ವದ್ದಾಗಿದೆ ಎಂದು ಹಿಮಾಚಲದ ಪ್ರಧಾನ ಸಂರಕ್ಷಣಾಧಿಕಾರಿ ಅರ್ಚನಾ ಶರ್ಮಾ ಹೇಳಿದ್ದಾರೆ. ಈ ಕುರಿತಾಗಿ ದಿ ಇಂಡಿಯನ್​ ಎಕ್ಸ್​ಪ್ರೆಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಥಳೀಯ ನಿವಾಸಿ ಪ್ರವೀಣ್​​ ಠಾಕೂರ್​ ಅವರು ಈ ವಿಷಪೂರಿತ ಹಾವಿನ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಅವರಿಗೆ ಈ ಹಾವು ಕಿಂಗ್​ ಕೋಬ್ರಾ ಎಂಬುದು ತಿಳಿದಿರಲಿಲ್ಲ. ತಮ್ಮ ಸ್ನೇಹಿತರೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರಲ್ಲಿ ಯಾರೋ ಅರಣ್ಯ ಮತ್ತು ವನ್ಯಜೀವಿ ವಿಭಾಗಕ್ಕೆ ಫೋಟೋ ಕಳುಕಿಸಿದ್ದಾರೆ.

ಪರಿಶೀಲನೆಯ ಬಳಿಕ ಹಾವು ಕಿಂಗ್ ಕೋಬ್ರಾ ಎಂಬುದು ತಿಳಿದು ಬಂದಿದೆ. ನಾವು ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರ ಸಂಪರ್ಕದಲ್ಲಿದ್ದೇವೆ. ಕಾಡುಗಳಲ್ಲಿರುವ ಪ್ರದೇಶವನ್ನು ಪರಿಶೀಲಿಸುತ್ತಿದ್ದೇವೆ ಎಂದು ಡಿಎಫ್​ಒ ಕುನಾಲ್​ ಆಂಗ್ರಿಶ್​ ಹೇಳಿದ್ದಾರೆ.

ಇದನ್ನೂ ಓದಿ: 

15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!

ಕೊಡಗಿನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ