Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ

ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರು ತಮ್ಮ ಮೊಬೈಲ್​ನಲ್ಲಿ ಹಾವಿನ ಚಿತ್ರವನ್ನು ಸೆರೆ ಹಿಡಿದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯೊಂದಿಗೆ ಹಂಚಿಕೊಂಡಿದ್ದಾರೆ. ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಾವಿನ ಕುರುಹುಗಳು ಪತ್ತೆಯಾಗಿದೆ.

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: Jun 06, 2021 | 3:43 PM

ವಿಶ್ವದ ಅತಿ ಉದ್ದದ ವಿಷಕಾರಿ ಹಾವು ಕಿಂಗ್​ಕೋಬ್ರಾ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದೆ. ಅರಣ್ಯ ಮತ್ತು ವನ್ಯವಿಭಾಗದಲ್ಲಿ ನಿನ್ನೆ (ಶನಿವಾರ) ಕಿಂಗ್​ ಕೊಬ್ರಾ ಪತ್ತೆಯಾಗಿರುವುದು ದಾಖಲಾಗಿದೆ. ವಿಶ್ವದ ಅತಿ ಉದ್ದದ ಹಾವು ಮತ್ತು ವಿಷಕಾರಿ ಹಾವು ಎಂದು ಗುರುತಿಸಲ್ಪಡುವ ಈ ಹಾವು ಹಲ್ಲಿಗಳಂತಹ ಕೀಟಗಳನ್ನು ಹಿಡಿದು ತಿನ್ನುತ್ತವೆ. ಹಿಮಾಚಲದ ಸಿರ್ಮೌರ್​ ಜಿಲ್ಲೆಯ​ ಅರಣ್ಯದ ಪಕ್ಕದಲ್ಲಿರುವ  ಶಿವಾಲಿಕ್​ ಬೆಟ್ಟದಲ್ಲಿ ಹಾವನ್ನು ಗುರುತಿಸಲಾಗಿದೆ.

ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರು ತಮ್ಮ ಮೊಬೈಲ್​ನಲ್ಲಿ ಹಾವಿನ ಚಿತ್ರವನ್ನು ಸೆರೆ ಹಿಡಿದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯೊಂದಿಗೆ ಹಂಚಿಕೊಂಡಿದ್ದಾರೆ. ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಾವಿನ ಕುರುಹುಗಳು ಪತ್ತೆಯಾಗಿದೆ.

ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿದೆ. ಕಿಂಗ್​ ಕೋಬ್ರಾವನ್ನು ಹಿಂದೆಂದೂ ಹಿಮಾಚಲ ಪ್ರದೇಶದಲ್ಲಿ ನೋಡಿಲ್ಲ. ಮತ್ತು ಇಲಾಖೆಯಲ್ಲಿ ದಾಖಲಾಗಿಲ್ಲ. ಹಿಮಾಚಲದ ಶಿವಾಲಿಕ್​ ಬೆಟ್ಟಗಳಲ್ಲಿ ಮೊದಲ ಬಾರಿಗೆ ಹಾವನ್ನು ಗುರುತಿಸಲಾಗಿದೆ. ಈಗ ಹಿಮಾಚಲ ಪ್ರದೇಶದಲ್ಲಿ ನೋಡುತ್ತಿರುವುದು ಮಹತ್ವದ್ದಾಗಿದೆ ಎಂದು ಹಿಮಾಚಲದ ಪ್ರಧಾನ ಸಂರಕ್ಷಣಾಧಿಕಾರಿ ಅರ್ಚನಾ ಶರ್ಮಾ ಹೇಳಿದ್ದಾರೆ. ಈ ಕುರಿತಾಗಿ ದಿ ಇಂಡಿಯನ್​ ಎಕ್ಸ್​ಪ್ರೆಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಥಳೀಯ ನಿವಾಸಿ ಪ್ರವೀಣ್​​ ಠಾಕೂರ್​ ಅವರು ಈ ವಿಷಪೂರಿತ ಹಾವಿನ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಅವರಿಗೆ ಈ ಹಾವು ಕಿಂಗ್​ ಕೋಬ್ರಾ ಎಂಬುದು ತಿಳಿದಿರಲಿಲ್ಲ. ತಮ್ಮ ಸ್ನೇಹಿತರೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರಲ್ಲಿ ಯಾರೋ ಅರಣ್ಯ ಮತ್ತು ವನ್ಯಜೀವಿ ವಿಭಾಗಕ್ಕೆ ಫೋಟೋ ಕಳುಕಿಸಿದ್ದಾರೆ.

ಪರಿಶೀಲನೆಯ ಬಳಿಕ ಹಾವು ಕಿಂಗ್ ಕೋಬ್ರಾ ಎಂಬುದು ತಿಳಿದು ಬಂದಿದೆ. ನಾವು ಸ್ಥಳೀಯ ನಿವಾಸಿ ಪ್ರವೀಣ್​ ಠಾಕೂರ್​ ಅವರ ಸಂಪರ್ಕದಲ್ಲಿದ್ದೇವೆ. ಕಾಡುಗಳಲ್ಲಿರುವ ಪ್ರದೇಶವನ್ನು ಪರಿಶೀಲಿಸುತ್ತಿದ್ದೇವೆ ಎಂದು ಡಿಎಫ್​ಒ ಕುನಾಲ್​ ಆಂಗ್ರಿಶ್​ ಹೇಳಿದ್ದಾರೆ.

ಇದನ್ನೂ ಓದಿ: 

15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!

ಕೊಡಗಿನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರ

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ