Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್​ ಬೇಡಿ ತೆರವು

ಕಿರಣ್ ಬೇಡಿ​ ಅವರನ್ನು ಮಂಗಳವಾರ ಪುದುಚೇರಿ ಗವರ್ನರ್ ಹುದ್ದೆಯಿಂದ ಬದಲಾಯಿಸಲಾಗಿದೆ. ತೆಲಂಗಾಣ ರಾಜ್ಯಪಾಲರಿಗೆ ಪುದುಚೇರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್​ ಬೇಡಿ ತೆರವು
ಕಿರಣ್ ಬೇಡಿ
Follow us
TV9 Web
| Updated By: ganapathi bhat

Updated on:Apr 06, 2022 | 7:57 PM

ಪುದುಚ್ಚೇರಿ: ಕಿರಣ್ ಬೇಡಿ​ ಅವರನ್ನು ಮಂಗಳವಾರ ಪುದುಚೇರಿ ಗವರ್ನರ್ ಹುದ್ದೆಯಿಂದ ಬದಲಾಯಿಸಲಾಗಿದೆ. ತೆಲಂಗಾಣ ರಾಜ್ಯಪಾಲರಿಗೆ ಪುದುಚೇರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಪುದುಚೇರಿಗೆ ಸ್ವತಂತ್ರ ಲೆಫ್ಟಿನೆಂಟ್ ಗವರ್ನರ್ ನೇಮಕವಾಗುವವರೆಗೂ ತೆಲಂಗಾಣ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಈ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ. ‘ಕಿರಣ್​ಬೇಡಿ ಅವರನ್ನು ಪುದುಚೇರಿ ರಾಜ್ಯಪಾಲರ ಹುದ್ದೆಯಿಂದ ತೆರವುಗೊಳಿಸಲಾಗಿದೆ’ ಎಂಬ ರಾಷ್ಟ್ರಪತಿ ಭವನದ ವಕ್ತಾರರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.

ಪುದುಚೇರಿ ವಿಧಾನಸಭೆಯ ಹಲವು ಕಾಂಗ್ರೆಸ್ ಸದಸ್ಯರು ಈಚೆಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ವರ್ಷಾಂತ್ಯದಲ್ಲಿ ಪುದುಚೇರಿಯಲ್ಲಿ ಚುನಾವಣೆ ನಡೆಯಲಿದೆ. ಪುದುಚ್ಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಅವರ ಸಂಪುಟ ಸದಸ್ಯರು ಸಹ ಶೀಘ್ರದಲ್ಲಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕಂದಸ್ವಾಮಿ ಮಂಗಳವಾರ ಹೇಳಿಕೆ ನೀಡಿದ್ದರು.

‘ಕಳೆದ ನಾಲ್ಕೂವರೆ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಪುದುಚ್ಚೇರಿಯ ಕಾಂಗ್ರೆಸ್​ ಸರ್ಕಾರವನ್ನು ಗೋಳಾಡಿಸುತ್ತಿದ್ದರು. ಸರ್ಕಾರವನ್ನು ವಜಾ ಮಾಡುವ ಆಲೋಚನೆ ಅವರಿಗಿದೆ. ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರು ಅವಧಿಗೆ ಮೊದಲೇ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಹೊಸ ಜನಾದೇಶ ಪಡೆಯಲಿದ್ದಾರೆ ಎಂದು ಕಂದಸ್ವಾಮಿ ಹೇಳಿದ್ದರು.

ಇದನ್ನೂ ಓದಿ: ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

Published On - 9:32 pm, Tue, 16 February 21

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ