AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್​ ಬೇಡಿ ತೆರವು

ಕಿರಣ್ ಬೇಡಿ​ ಅವರನ್ನು ಮಂಗಳವಾರ ಪುದುಚೇರಿ ಗವರ್ನರ್ ಹುದ್ದೆಯಿಂದ ಬದಲಾಯಿಸಲಾಗಿದೆ. ತೆಲಂಗಾಣ ರಾಜ್ಯಪಾಲರಿಗೆ ಪುದುಚೇರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್​ ಬೇಡಿ ತೆರವು
ಕಿರಣ್ ಬೇಡಿ
TV9 Web
| Edited By: |

Updated on:Apr 06, 2022 | 7:57 PM

Share

ಪುದುಚ್ಚೇರಿ: ಕಿರಣ್ ಬೇಡಿ​ ಅವರನ್ನು ಮಂಗಳವಾರ ಪುದುಚೇರಿ ಗವರ್ನರ್ ಹುದ್ದೆಯಿಂದ ಬದಲಾಯಿಸಲಾಗಿದೆ. ತೆಲಂಗಾಣ ರಾಜ್ಯಪಾಲರಿಗೆ ಪುದುಚೇರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಪುದುಚೇರಿಗೆ ಸ್ವತಂತ್ರ ಲೆಫ್ಟಿನೆಂಟ್ ಗವರ್ನರ್ ನೇಮಕವಾಗುವವರೆಗೂ ತೆಲಂಗಾಣ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಈ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ. ‘ಕಿರಣ್​ಬೇಡಿ ಅವರನ್ನು ಪುದುಚೇರಿ ರಾಜ್ಯಪಾಲರ ಹುದ್ದೆಯಿಂದ ತೆರವುಗೊಳಿಸಲಾಗಿದೆ’ ಎಂಬ ರಾಷ್ಟ್ರಪತಿ ಭವನದ ವಕ್ತಾರರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.

ಪುದುಚೇರಿ ವಿಧಾನಸಭೆಯ ಹಲವು ಕಾಂಗ್ರೆಸ್ ಸದಸ್ಯರು ಈಚೆಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ವರ್ಷಾಂತ್ಯದಲ್ಲಿ ಪುದುಚೇರಿಯಲ್ಲಿ ಚುನಾವಣೆ ನಡೆಯಲಿದೆ. ಪುದುಚ್ಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಅವರ ಸಂಪುಟ ಸದಸ್ಯರು ಸಹ ಶೀಘ್ರದಲ್ಲಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕಂದಸ್ವಾಮಿ ಮಂಗಳವಾರ ಹೇಳಿಕೆ ನೀಡಿದ್ದರು.

‘ಕಳೆದ ನಾಲ್ಕೂವರೆ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಪುದುಚ್ಚೇರಿಯ ಕಾಂಗ್ರೆಸ್​ ಸರ್ಕಾರವನ್ನು ಗೋಳಾಡಿಸುತ್ತಿದ್ದರು. ಸರ್ಕಾರವನ್ನು ವಜಾ ಮಾಡುವ ಆಲೋಚನೆ ಅವರಿಗಿದೆ. ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರು ಅವಧಿಗೆ ಮೊದಲೇ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಹೊಸ ಜನಾದೇಶ ಪಡೆಯಲಿದ್ದಾರೆ ಎಂದು ಕಂದಸ್ವಾಮಿ ಹೇಳಿದ್ದರು.

ಇದನ್ನೂ ಓದಿ: ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

Published On - 9:32 pm, Tue, 16 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!