AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಸ್ಟಡಿಗೆ ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣದಲ್ಲಿ ಎನ್​ಸಿಬಿ ಸಾಕ್ಷಿ ಕಿರಣ್ ಗೋಸಾವಿ

2018ರಲ್ಲಿ ಚಿನ್ಮಯ್ ದೇಶ್​ಮುಖ್ ಎನ್ನುವವರಿಗೆ ಮಲೇಷ್ಯಾದಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ₹ 18 ಲಕ್ಷ ವಂಚಿಸಿದ್ದ ಆರೋಪವನ್ನು ದೇಸಾಯಿ ಎದುರಿಸುತ್ತಿದ್ದರು.

ಪೊಲೀಸ್ ಕಸ್ಟಡಿಗೆ ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣದಲ್ಲಿ ಎನ್​ಸಿಬಿ ಸಾಕ್ಷಿ ಕಿರಣ್ ಗೋಸಾವಿ
ಆರ್ಯನ್ ಖಾನ್​ನೊಂದಿಗೆ ಸೆಲ್ಫಿ ತೆಗೆದುಕೊಂಡ ಕಿರಣ್ ಗೋಸಾವಿ (ಎಡಚಿತ್ರ), ಪುಣೆ ಪೊಲೀಸರ ಕಸ್ಟಡಿಯಲ್ಲಿ ಕಿರಣ್ ಗೋಸಾವಿ
TV9 Web
| Edited By: |

Updated on:Nov 05, 2021 | 10:17 PM

Share

ಪುಣೆ: ಖ್ಯಾತ ಬಾಲಿವುಡ್ ನಟ ಶಾರೂಖ್​ ಖಾನ್ ಮಗ ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣದಲ್ಲಿ ಎನ್​ಸಿಬಿ ಪರ ಸಾಕ್ಷಿಯಾಗಿರುವ ಕಿರಣ್ ಗೋಸಾವಿಯನ್ನು ನವೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಪುಣೆ ನ್ಯಾಯಾಲಯ ಆದೇಶಿಸಿದೆ. ತಲೆಮರೆಸಿಕೊಂಡಿದ್ದ ಎನ್ನಲಾದ ಗೋಸಾವಿಯನ್ನು ಅಕ್ಟೋಬರ್ 28ರಂದು ಪೊಲೀಸರು ಬಂಧಿಸಿದ್ದರು. 2018ರಲ್ಲಿ ಚಿನ್ಮಯ್ ದೇಶ್​ಮುಖ್ ಎನ್ನುವವರಿಗೆ ಮಲೇಷ್ಯಾದಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ₹ 18 ಲಕ್ಷ ವಂಚಿಸಿದ್ದ ಆರೋಪವನ್ನು ದೇಸಾಯಿ ಎದುರಿಸುತ್ತಿದ್ದರು.

ದೇಶ್​ಮುಖ್ ಅವರ ಪ್ರವಾಸಿ ವೀಸಾವನ್ನು ಸಾಮಾನ್ಯ ವೀಸಾ ಆಗಿ ಬದಲಿಸಿಕೊಡುವುದಾಗಿ ಗೋಸಾವಿ ಭರವಸೆ ಕೊಟ್ಟಿದ್ದ. ಆದರೆ ಪ್ರವಾಸಿ ವೀಸಾದ ಅವಧಿ ಕೊನೆಗೊಂಡ ತಕ್ಷಣ ಚಿನ್ಮಯ್ ಅವರು ಅಲ್ಲಿಂದ ಹಿಂದಿರುಗಬೇಕಾಯಿತು. ಅಕ್ಟೋಬರ್ 29ರಂದು ನಾಲ್ಕು ಹೆಚ್ಚುವರಿ ಮೋಸದ ದೂರುಗಳು ಗೋಸಾವಿ ವಿರುದ್ಧ ದಾಖಲಾದವು. ಪುಣೆ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎಫ್​ಐಆರ್​ ಹಾಕಲಾಯಿತು.

ಚಿನ್ಮಯ್ ದೇಶ್​ಮುಖ್ ಅವರಂತೆ ಹಲವರಿಗೆ ವಿದೇಶಗಳಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದ ಗೋಸಾವಿ ಲಕ್ಷಾಂತರ ರೂಪಾಯಿ ವಂಚಿಸಿದ್ದು ಈ ವೇಳೆ ಪತ್ತೆಯಾಗಿತ್ತು. ಎನ್​ಸಿಬಿ ಕಚೇರಿಯಲ್ಲಿ ಆರ್ಯನ್ ಖಾನ್ ಜೊತೆಗೆ ಗೋಸಾವಿ ತೆಗೆದುಕೊಂಡಿದ್ದ ಸೆಲ್ಫಿ ವೈರಲ್ ಅದ ನಂತರ ಪೊಲೀಸರ ಕಣ್ಣು ಅವನ ಮೇಲೆ ಬಿದ್ದಿತ್ತು. ಗೋವಾಕ್ಕೆ ಹೊರಟಿದ್ದ ಐಷಾರಾಮಿ ಕ್ರೂಸ್ ಹಡಗಿನ ಮೇಲೆ ಎನ್​ಸಿಬಿ ದಾಳಿ ನಡೆಸಿದ ನಂತರ ವ್ಯಕ್ತಿಯೊಬ್ಬರಿಂದ ಈತ ₹ 50 ಲಕ್ಷ ಪಡೆದುಕೊಂಡಿದ್ದಾನೆ ಎಂದು ಗೋಸಾವಿಯ ಮಾಜಿ ಸಹಚರ ಪ್ರಭಾಕರ್ ಸೈಲ್ ಆರೋಪಿಸಿದ್ದ.

ಈ ಪ್ರಕಣದಲ್ಲಿ ಸೈಲ್ ಸಹ ಸಾಕ್ಷಿಯಾಗಿದ್ದಾರೆ. ಸ್ಯಾಮ್ ಡಿಸೋಜಾ ಎನ್ನುವವರೊಂದಿಗೆ ಗೋಸಾವಿ ಮಾತನಾಡುತ್ತಿದ್ದುದು ನನ್ನ ಕಿವಿಗೆ ಬಿತ್ತು. ಈ ವೇಳೆ ಅವರು ಆರ್ಯನ್ ಖಾನ್ ಪ್ರಕರಣವನ್ನು ₹ 18 ಲಕ್ಷ ಪಡೆದು ಮುಚ್ಚಿ ಹಾಕಲು ಮುಂದಾಗಿದ್ದ ಸಂಗತಿ ಅರಿವಾಯಿತು. ಈ ಹಣದಲ್ಲಿ ₹ 8 ಕೋಟಿಯನ್ನು ಎನ್​ಸಿಬಿಯ ಮುಂಬೈ ವಲಯ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ನೀಡಬೇಕಾಗುತ್ತೆ ಎಂಬ ವಿಚಾರವೂ ಕಿವಿಯ ಮೇಲೆ ಬಿದ್ದಿತ್ತು ಎಂದು ಸೈಲ್ ಹೇಳಿದ್ದರು.

ಇದನ್ನೂ ಓದಿ: Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು? ಇದನ್ನೂ ಓದಿ: ಆರ್ಯನ್ ಖಾನ್ ಪ್ರಕರಣದ ತನಿಖಾಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ‘ವಸೂಲಿ’ ಆರೋಪ ಮಾಡಿದ ಮಹಾರಾಷ್ಟ್ರ ಸಚಿವ

Published On - 10:13 pm, Fri, 5 November 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ