Waqf Bill: ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕಿರಣ್ ರಿಜಿಜು

ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲೂ ಹೆಚ್ಚಿನ ಸಂಸದರನ್ನು ಹೊಂದಿದೆ. ಬಿಜೆಪಿಯ 98 ಸಂಸದರು, ಮಿತ್ರಪಕ್ಷ ಜೆಡಿಯು ಪಕ್ಷದ ನಾಲ್ವರು, ಎನ್‌ಸಿಪಿಯ ಮೂವರು, ಟಿಡಿಪಿಯ ಇಬ್ಬರು ಮತ್ತು ಆರು ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಎನ್‌ಡಿಎ ಮೈತ್ರಿಕೂಟದ 125 ಸಂಸದರಿದ್ದಾರೆ. ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟ ಕಾಂಗ್ರೆಸ್‌ನ 27 ಸಂಸದರು, ತೃಣಮೂಲ ಕಾಂಗ್ರೆಸ್‌ನ 13 ಸೇರಿದಂತೆ 88 ಸಂಸದರನ್ನು ಹೊಂದಿದೆ. ನವೀನ್ ಪಟ್ನಾಯಕ್ ನೇತೃತ್ವದ BJD ಪಕ್ಷವು 7 ಸಂಸದರನ್ನು ಹೊಂದಿದೆ.

Waqf Bill: ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕಿರಣ್ ರಿಜಿಜು
ರಾಜ್ಯಸಭೆ
Image Credit source: PTI

Updated on: Apr 03, 2025 | 1:58 PM

ನವದೆಹಲಿ, ಏಪ್ರಿಲ್ 03: ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ(Waqf Amendment Bill)ಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲೂ ಹೆಚ್ಚಿನ ಸಂಸದರನ್ನು ಹೊಂದಿದೆ. ಬಿಜೆಪಿಯ 98 ಸಂಸದರು, ಮಿತ್ರಪಕ್ಷ ಜೆಡಿಯು ಪಕ್ಷದ ನಾಲ್ವರು, ಎನ್‌ಸಿಪಿಯ ಮೂವರು, ಟಿಡಿಪಿಯ ಇಬ್ಬರು ಮತ್ತು ಆರು ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಎನ್‌ಡಿಎ ಮೈತ್ರಿಕೂಟದ 125 ಸಂಸದರಿದ್ದಾರೆ. ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟ ಕಾಂಗ್ರೆಸ್‌ನ 27 ಸಂಸದರು, ತೃಣಮೂಲ ಕಾಂಗ್ರೆಸ್‌ನ 13 ಸೇರಿದಂತೆ 88 ಸಂಸದರನ್ನು ಹೊಂದಿದೆ. ನವೀನ್ ಪಟ್ನಾಯಕ್ ನೇತೃತ್ವದ BJD ಪಕ್ಷವು 7 ಸಂಸದರನ್ನು ಹೊಂದಿದೆ.

ಲೋಕಸಭೆಯಲ್ಲಿ ಸುಮಾರು 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ, ವಕ್ಫ್ (ತಿದ್ದುಪಡಿ) ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೈಗೆತ್ತಿಕೊಳ್ಳಲಾಯಿತು. ಮಸೂದೆಯ ಪರವಾಗಿ 288 ಮತಗಳು ಮತ್ತು ಮಸೂದೆಯ ವಿರುದ್ಧ 232 ಮತಗಳು ಚಲಾವಣೆಯಾಗಿ, ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.

ರಾಜ್ಯಸಭೆಯಲ್ಲಿ ನಡೆದ ಚರ್ಚೆಗಳೇನು?
8.72 ಲಕ್ಷ ವಕ್ಫ್ ಆಸ್ತಿಗಳಿವೆ., 2006 ರಲ್ಲಿ, ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳು ಈಗ ಎಷ್ಟು ಆದಾಯವನ್ನು ಗಳಿಸುತ್ತಿವೆ ಎಂದು ನೀವು ಊಹಿಸಬಹುದು ಎಂದು ರಾಜ್ಯಸಭೆಯಲ್ಲಿ ಕಿರಣ್ ರಿಜಿಜು ಹೇಳಿದರು. ಮಸೂದೆಯು ಜನರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದರು ಮತ್ತು ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಮಸೂದೆಯನ್ನು ಬೆಂಬಲಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ವಕ್ಫ್ ವಿಷಯದಲ್ಲಿ ವಿಪಕ್ಷಗಳಿಂದ ದೇಶ ಇಬ್ಭಾಗಿಸುವ ಪ್ರಯತ್ನ; ಅಮಿತ್ ಶಾ ಆರೋಪ
ಸಂಸತ್ತಿನ ಕಟ್ಟಡವನ್ನೂ ವಕ್ಫ್ ಆಸ್ತಿ ಎನ್ನುತ್ತಿದ್ದರು;ಕಿರಣ್ ರಿಜಿಜು ಟೀಕೆ
ವಕ್ಫ್​ ಬಿಲ್​: ಲೋಕಸಭೆ, ರಾಜ್ಯಸಭೆಯ ಸಂಖ್ಯಾಬಲದ ಆಟದಲ್ಲಿ ಯಾರು ಮುಂದು

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಅನುಮತಿಯಿಲ್ಲದೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು ಅನುರಾಗ್ ಠಾಕೂರ್ ಆರೋಪಿಸಿದ ನಂತರ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಠಾಕೂರ್ ಅವರ ಹೇಳಿಕೆಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಕೇಳಿದರು.

ಮತ್ತಷ್ಟು ಓದಿ: Waqf Bill: ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ, ರಾಜ್ಯಸಭೆಯಲ್ಲಿ ಇಂದು ಮಂಡನೆ

ಠಾಕೂರ್ ತಮ್ಮ ಆರೋಪಗಳನ್ನು ಸಾಬೀತುಪಡಿಸಲು ಒಂದೇ ಒಂದು ಕಾಗದವನ್ನು ತರಲು ಸಾಧ್ಯವಾಗದಿದ್ದರೆ, ಅವರು ಸದನದಲ್ಲಿ ಕ್ಷಮೆಯಾಚಿಸಬೇಕು ಮತ್ತು ನಂತರ ರಾಜೀನಾಮೆ ನೀಡಬೇಕು ಎಂದು ಖರ್ಗೆ ಹೇಳಿದರು.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ, ಮಾತನಾಡಿ, ವಕ್ಫ್ ಮಸೂದೆ ಸಂವಿಧಾನದ ಮೇಲಿನ ನಿರ್ಲಜ್ಜ ದಾಳಿ; ಸಮಾಜವನ್ನು ಶಾಶ್ವತ ಧ್ರುವೀಕರಣದ ಸ್ಥಿತಿಯಲ್ಲಿಡುವ ಬಿಜೆಪಿಯ ತಂತ್ರದ ಭಾಗ ಇದು ಎಂದು ಹೇಳಿದರು.

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಅಂಗೀಕರಿಸಿರುವುದನ್ನು ಸ್ವಾಗತಿಸಿದ ಬಿಜೆಪಿಯ ಕೇರಳ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಮುನಂಬಮ್ ಸೇರಿದಂತೆ ಎಲ್ಲಾ ನಾಗರಿಕರಿಗೆ ಆಸ್ತಿಯ ಹಕ್ಕನ್ನು ಎತ್ತಿಹಿಡಿಯುವತ್ತ ಇದು ಒಂದು ಹೆಜ್ಜೆ ಎಂದು ಬಣ್ಣಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:47 pm, Thu, 3 April 25