AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiren Rijiju: ಅಂತಾರಾಷ್ಟ್ರೀಯ ಪರ್ವತ ದಿನದ ಪ್ರಯುಕ್ತ ಹಿಮದಲ್ಲಿ ಕುದುರೆ ಸವಾರಿ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು

International Mountain Day: ಅಂತಾರಾಷ್ಟ್ರೀಯ ಪರ್ವತ ದಿನಾಚರಣೆ ಪ್ರಯುಕ್ತ ಲಡಾಖ್​ನಲ್ಲಿ ಹಿಮದಲ್ಲಿ ಕುದುರೆ ಸವಾರಿ ಹಾಗೂ ಯಾಕ್ ಮೃಗದ ಸವಾರಿ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ವಿಡಿಯೋಗಳು ವೈರಲ್ ಆಗಿವೆ.

Kiren Rijiju: ಅಂತಾರಾಷ್ಟ್ರೀಯ ಪರ್ವತ ದಿನದ ಪ್ರಯುಕ್ತ ಹಿಮದಲ್ಲಿ ಕುದುರೆ ಸವಾರಿ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಕಿರಣ್ ರಿಜಿಜು ಅವರ ಕುದುರೆ ಸವಾರಿ
TV9 Web
| Edited By: |

Updated on: Dec 11, 2021 | 7:45 PM

Share

ನವದೆಹಲಿ: ಅಂತಾರಾಷ್ಟ್ರೀಯ ಪರ್ವತ ದಿನದಂದು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ಭಾರತದ ಸುಂದರ ಮತ್ತು ಭವ್ಯವಾದ ಪರ್ವತಗಳನ್ನು ಉಳಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ್ದಾರೆ. ಬಿಳಿ ಹಿಮದಿಂದ ಆವೃತವಾದ ಪರ್ವತಗಳ ಹಿನ್ನೆಲೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಾವು ಕುದುರೆ ಸವಾರಿ (Horse Riding)  ಮಾಡುತ್ತಿರುವ ವೀಡಿಯೊವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಪರ್ವತ ದಿನದ (International Mountain Day) ಅತ್ಯಂತ ವಿಶೇಷ ಸಂದರ್ಭದಲ್ಲಿ, ಸುಂದರವಾದ ಪ್ರಕೃತಿ ಮತ್ತು ಭವ್ಯವಾದ ಪರ್ವತಗಳನ್ನು ಉಳಿಸಲು ಪ್ರತಿಜ್ಞೆ ಮಾಡೋಣ. ಈ ವರ್ಷದ ಥೀಮ್ “ಸಸ್ಟೈನಬಲ್ ಮೌಂಟೇನ್ ಟೂರಿಸಂ” (ಸುಸ್ಥಿರ ಪರ್ವತ ಪ್ರವಾಸೋದ್ಯಮ) ಎಂದು ಸಚಿವ ರಿಜಿಜು ಹೇಳಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಶೇರ್ ಮಾಡಿರುವ ವಿಡಿಯೋಗೆ ಲಿಂಕ್ ಮಾಡಲಾದ ಮತ್ತೊಂದು ಪೋಸ್ಟ್​ನಲ್ಲಿ ಲಡಾಖ್ ಭೇಟಿಯ ಫೋಟೋಗಳನ್ನು ಲಗತ್ತಿಸಲಾಗಿದೆ. ಈ ಫೋಟೋಗಳಲ್ಲಿ ಕಿರಣ್ ರಿಜಿಜು ಯಾಕ್ ಸವಾರಿ ಮಾಡುವುದನ್ನು ಮತ್ತು ಬಿಲ್ಲುಗಾರಿಕೆ ಮಾಡುವುದನ್ನು ತಮ್ಮ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಕಿರಣ್ ರಿಜಿಜು ಈ ಹಿಂದೆ ಕೂಡ ಈ ರೀತಿಯ ಸ್ಫೂರ್ತಿದಾಯಕ ವಿಡಿಯೋಗಳನ್ನು ಪೋಸ್ಟ್ ಮಾಡಿ ಜನರನ್ನು ಪ್ರೇರೇಪಿಸುತ್ತಿದ್ದರು.

ಕೆಲವು ದಿನಗಳ ಹಿಂದೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅರುಣಾಚಲ ಪ್ರದೇಶಕ್ಕೆ ತೆರಳಿದ್ದರು. ಹಳ್ಳಿಯ ನಿವಾಸಿಗಳು ನೃತ್ಯ ಮಾಡುತ್ತಾ ಅವರನ್ನು ಬರಮಾಡಿಕೊಂಡಿದ್ದರು. ಆ ವೇಳೆ ಹಳ್ಳಿ ಜನರೊಂದಿಗೆ ಕಿರಣ್ ರಿಜಿಜು ಅವರು ಸಹ ನೃತ್ಯ ಮಾಡಿದ್ದರು. ಈ ವಿಡಿಯೋವನ್ನು ಅವರು ಸ್ವತಃ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರಧಾನಿ ಮೋದಿ ‘ಒಳ್ಳೆಯ ನೃತ್ಯಗಾರ’ ಎಂದು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದರು.

ಸಚಿವ ಕಿರಣ್ ರಿಜಿಜು ಅವರು ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಆಗಾಗ ಆರೋಗ್ಯ ಸಂಬಂಧಿತ ಹಾಗೂ ಫಿಟ್ನೆಸ್ ಕುರಿತಾದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜತೆಗೆ ಹಾಡುವ ಕೌಶಲ್ಯವನ್ನೂ ಸಹ ಈ ಹಿಂದೆ ಟ್ವೀಟ್ ಮೂಲಕ ಹಂಚಿಕೊಂಡಿದ್ದರು. ಹಾಗೇ, ಅರುಣಾಚಲ ಪ್ರದೇಶದ ಮೇಲಿನ ಸುಬನ್ಸಿರಿ ಜಿಲ್ಲೆಗೆ ಪ್ರವಾಸ ಮಾಡುವಾಗ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸುಬನ್ಸಿರಿ ನದಿಯ ದಂಡೆಯ ಮಾರದಲ್ಲಿ ಬಿಲ್ಲುಗಾರಿಕೆ ಮತ್ತು ಬೀಚ್ ವಾಲಿಬಾಲ್ ಆಡಿದ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್; ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಏನು?

Viral Photo: ಅರುಣಾಚಲ ಪ್ರದೇಶದ ಸಿಎಂ ಜೊತೆ ವಾಲಿಬಾಲ್ ಆಡಿದ ಕೇಂದ್ರ ಸಚಿವ ಕಿರೆಣ್ ರಿಜಿಜು

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ