AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ; ಪಾದಯಾತ್ರೆ ಹೊರಟ ರೈತ ಪ್ರತಿಭಟನಾಕಾರರು- ಮುಖ್ಯಾಂಶಗಳು ಇಲ್ಲಿದೆ

Farmers Protest: ಆಗಸ್ಟ್ 28 ರಂದು ನಡೆದ ಲಾಠಿ ಚಾರ್ಜ್​ಗೆ ವಿರೋಧ ವ್ಯಕ್ತಪಡಿಸಿ ಈ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಿಯಂತ್ರಿಸಲು, ಪ್ರತಿಭಟನಾ ನಿರತ ರೈತರನ್ನು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

Haryana: ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ; ಪಾದಯಾತ್ರೆ ಹೊರಟ ರೈತ ಪ್ರತಿಭಟನಾಕಾರರು- ಮುಖ್ಯಾಂಶಗಳು ಇಲ್ಲಿದೆ
ರೈತರ ಸಭೆಯಲ್ಲಿ ಭಾಗವಹಿಸಿದ ರೈತರು
TV9 Web
| Edited By: |

Updated on:Sep 07, 2021 | 5:37 PM

Share

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಧರಣಿ ಮುಂದುವರಿಸಿದ್ದಾರೆ. ರೈತರು ಹರ್ಯಾಣದ ಕರ್ನಾಲ್ ಜಿಲ್ಲೆಯ ಗ್ರೈನ್ ಮಾರುಕಟ್ಟೆಯಿಂದ ಜಿಲ್ಲಾ ಅಧಿಕಾರಿಗಳ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಆಗಸ್ಟ್ 28 ರಂದು ನಡೆದ ಲಾಠಿ ಚಾರ್ಜ್​ಗೆ ವಿರೋಧ ವ್ಯಕ್ತಪಡಿಸಿ ಈ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಿಯಂತ್ರಿಸಲು, ಪ್ರತಿಭಟನಾ ನಿರತ ರೈತರನ್ನು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ. ಈ ಘಟನೆಯ ಬಗೆಗಿನ ಮುಖ್ಯಾಂಶಗಳನ್ನು ಇಲ್ಲಿ ನೀಡಲಾಗಿದೆ.

  • ಇಂದು 11 ರೈತ ಮುಖಂಡರು ಹಾಗೂ ಜಿಲ್ಲಾ ಅಧಿಕಾರಿಗಳ ನಡುವೆ, ಪಾದಯಾತ್ರೆ ನಡೆಸುವ ಕುರಿತು ನಡೆಸಿದ ಮಾತುಕತೆ ಸಫಲವಾಗಿಲ್ಲ. ರಾಕೇಶ್ ಟಿಕಾಯತ್ ಹಾಗೂ ಯೋಗೇಂದ್ರ ಯಾದವ್ ಕೂಡ ಮಾತುಕತೆಯಲ್ಲಿ ಭಾಗವಹಿಸಿದ್ದರು.
  • ಈ ಬಗ್ಗೆ ರಾಕೇಶ್ ಟಿಕಾಯತ್ ಇಂದು ಟ್ವೀಟ್ ಮಾಡಿದ್ದರು. ಲಾಠಿ ಚಾರ್ಜ್​ನಲ್ಲಿ ಗಾಯಗೊಂಡು ಮೃತಪಟ್ಟಿದ್ದ ಸುಶಿಲ್ ಕಾಜಿಲ ಅವರಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಮಹಾಪಂಚಾಯತ್ ಹಾಗೂ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದರು. ಆದರೆ, ಪೊಲೀಸರು ಈ ವಾದವನ್ನು ತಿರಸ್ಕರಿಸಿದ್ದಾರೆ. ಬದಲಾಗಿ, ಕಾಜಿಲ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
  • ರೈತರಿಗೆ ಪಾದಯಾತ್ರೆ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾಡಳಿತದವರು ಹೇಳಿಕೆ ನೀಡಿದ್ದಾರೆ. ಹಾಗೂ ಪ್ರತಿಭಟನೆ ತಡೆಯಲು ರಕ್ಷಣಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಹತ್ತಿರದ ಜಿಲ್ಲೆಗಳಿಂದ ಪ್ರಯಾಣ ಬೆಳೆಸುತ್ತಿರುವ ರೈತರನ್ನು ಕೂಡ ತಡೆಯಲಾಗುತ್ತಿದೆ.
  • ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್​ನೆಟ್ ಹಾಗೂ ಎಸ್​ಎಂಎಸ್ ಸೇವೆಗಳನ್ನು ಅಮಾನತು ಮಾಡಲಾಗಿದೆ. ತುಂಬಾ ಮಂದಿ ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ರಕ್ಷಣಾ ಕಾರ್ಯದ ಉದ್ದೇಶದಿಂದ ಕ್ಯಾಮರಾ ಅಳವಡಿಸಿರುವ ಡ್ರೋನ್ ಹಾರಾಟ ನಡೆಸಲಾಗುವುದು ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
  • ನಿನ್ನೆ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ರೈತ ಮುಖಂಡರನ್ನು ಕರೆದಿದ್ದರು. ಹಾಗೂ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಸೂಚನೆ ಕೊಟ್ಟಿದ್ದರು. ಅದರಂತೆ ರೈತ ನಾಯಕ ಗುರ್ನಮ್ ಸಿಂಗ್ ಚಡುಣಿ ರೈತರಿಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಕೇಳಿಕೊಂಡಿದ್ದಾರೆ.
  • ಸುಮಾರು 40 ರೈತ ಸಂಘಟನೆಗಳ ಒಕ್ಕೂಟ ಆಗಿರುವ ಸಂಯುಕ್ತ ಕಿಸಾನ್ ಮೋರ್ಚಾ ಲಾಠಿ ಚಾರ್ಜ್ ಮಾಡಲು ಹೇಳಿರುವ ಅಧಿಕಾರಿಗಳ ವಿರುದ್ಧ ಎಫ್​ಐಆರ್ ಮಾಡುವಂತೆ ಆಗ್ರಹಿಸಿದೆ.
  • ಸಂಯುಕ್ತ ಕಿಸಾನ್ ಮೋರ್ಚಾ, ಪೊಲೀಸರ ನಡೆಯನ್ನು ಖಂಡಿಸಿದೆ. ರೈತರ ತಲೆ ಒಡೆಯಿರಿ ಎಂದು ಹೇಳಿಕೆ ನೀಡಿರುವ ಆರೋಪ ಹೊಂದಿರುವ ಆಯುಶ್ ಸಿನ್ಹಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
  • ಅಧಿಕಾರಿಗಳ ಪದಬಳಕೆ ಸರಿ ಇರಲಿಲ್ಲ. ಆದರೆ, ಕಾನೂನು ಪಾಲಿಸಲು ಕಠಿಣ ಕ್ರಮ ಕೈಗೊಳ್ಳುವುದು ಬೇಕಿತ್ತು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಯೋಗೇಂದ್ರ ಯಾದವ್, ಯಾವ ಕಾನೂನು ಮತ್ತೊಬ್ಬರ ತಲೆ ಒಡೆಯುವುದನ್ನು ಹೇಳುತ್ತದೆ ಎಂದು ಪ್ರಶ್ನಿಸಿದ್ದರು.
  • ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದ ಮೀಟಿಂಗ್​ಗೆ ಸುಮಾರು 15 ರಾಜ್ಯಗಳಿಂದ ರೈತ ಹೋರಾಟಗಾರರು ಆಗಮಿಸಿದ್ದಾರೆ. ಹಾಗೂ ಅದು ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ರೈತರ ಶಕ್ತಿ ತಿಳಿಯುವಂತೆ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnal Kisan Mahapanchayat ಕರ್ನಾಲ್ ತಲುಪಿದ ಹರ್ಯಾಣದ ರೈತರು; ಬೃಹತ್ ಪ್ರತಿಭಟನೆಗೆ ಮುನ್ನ ಎಸ್​​ಕೆಎಂ ಮುಖಂಡರನ್ನು ಚರ್ಚೆಗೆ ಕರೆದ ಜಿಲ್ಲಾಡಳಿತ

ಇದನ್ನೂ ಓದಿ: Kisan Mahapanchayat: ಕರ್ನಾಲ್​​ನಲ್ಲಿ ರೈತರ ಸಮಾವೇಶಕ್ಕೆ ವೇದಿಕೆ ಸಜ್ಜು, ಬಿಗಿ ಭದ್ರತೆ

Published On - 5:36 pm, Tue, 7 September 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?