AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ-ದೆಹಲಿ ಗಡಿಯಲ್ಲಿ ಕೈ ಕಡಿದು ವ್ಯಕ್ತಿ ಹತ್ಯೆ, ಸಾರ್ವಜನಿಕ ಪ್ರದರ್ಶನ: ಅಂತರ ಕಾಯ್ದುಕೊಂಡ ಕಿಸಾನ್ ಮೋರ್ಚಾ

ಸಿಖ್ಖರ ಪವಿತ್ರ ಗ್ರಂಥ ‘ಗ್ರಂಥ ಸಾಹಿಬ್​’ಗೆ ಅವಮಾನ ಮಾಡಿದ್ದ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ಹೇಳಿಕೊಳ್ಳುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ

ಹರಿಯಾಣ-ದೆಹಲಿ ಗಡಿಯಲ್ಲಿ ಕೈ ಕಡಿದು ವ್ಯಕ್ತಿ ಹತ್ಯೆ, ಸಾರ್ವಜನಿಕ ಪ್ರದರ್ಶನ: ಅಂತರ ಕಾಯ್ದುಕೊಂಡ ಕಿಸಾನ್ ಮೋರ್ಚಾ
ನಿಹಾಂಗ್ ಪಂಥದ ಸಿಖ್ ಮತ್ತು ಮೃತ ವ್ಯಕ್ತಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 15, 2021 | 3:40 PM

Share

ದೆಹಲಿ: ಹರಿಯಾಣ-ದೆಹಲಿ ಗಡಿಯ ಕುಂಡಲಿ ಎಂಬಲ್ಲಿ ವ್ಯಕ್ತಿಯೊಬ್ಬನ ಕೈ ಕಡಿದು, ನೇಣು ಬಿಗಿದು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ಸ್ಪಷ್ಟ ಕಾರಣವನ್ನು ಪೊಲೀಸರು ಈವರೆಗೆ ದೃಢಪಡಿಸಿಲ್ಲ, ಆದರೆ ಸಿಖ್ ಪಂಥ ನಿಹಾಂಗ್​ಗೆ ಸೇರಿದವರು ಈ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸಿಖ್ಖರ ಪವಿತ್ರ ಗ್ರಂಥ ‘ಗ್ರಂಥ ಸಾಹಿಬ್​’ಗೆ ಅವಮಾನ ಮಾಡಿದ್ದ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ಹೇಳಿಕೊಳ್ಳುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕೊಲೆಯಾದ ವ್ಯಕ್ತಿಯ ಶವವನ್ನು ಹಗ್ಗ ಕಟ್ಟಿ ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದೆ.

ಮೃತನನ್ನು ಚೀಮಾ ಖುರ್ದ್​ ಗ್ರಾಮದ ಲಖಬೀರ್ ಸಿಂಗ್ (36) ಎಂದು ಗುರುತಿಸಲಾಗಿದೆ. ಈತ ಪಂಜಾಬ್​ನ ತರಣ್ ತರಣ್​ ಜಿಲ್ಲೆಯ ಚೀಮಾಖುರ್ದ್​ ಗ್ರಾಮದ ದಲಿತರ ವ್ಯಕ್ತಿ ಹರಿಯಾಣದ​ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮೃತನ ದೇಹವನ್ನು ಶುಕ್ರವಾರ ಮುಂಜಾನೆ 5 ಗಂಟೆಗೆ ವಶಕ್ಕೆ ತೆಗೆದುಕೊಳ್ಳಲಾಯಿತು. ರೈತ ಚಳವಳಿ ನಡೆಯುತ್ತಿರುವ ಸ್ಥಳದ ಹತ್ತಿರವೇ ಈ ಹತ್ಯೆ ನಡೆದಿದೆ. ತನಿಖೆ ಪ್ರಗತಿಯಲ್ಲಿದ್ದು, ಶಂಕಿತರ ವಿರುದ್ಧ ಕೊಲೆ ಪ್ರಕರಣದ ದಾಖಲಿಸಲಾಗಿದೆ. ವಿಚಾರಣೆಯನ್ನೂ ಆರಂಭಿಸಲಾಗಿದೆ ಎಂದು ರೊಹ್​ತಕ್ ವಲಯದ ಐಜಿಪಿ ಸಂದೀಪ್ ಖಿರ್​ವರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.

ಮೃತ ಲಖ್​ಬಿರ್ ಸಿಂಗ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸೋದರಿ, ಹೆಂಡತಿ ಮತ್ತು ಮೂರು ಹೆಣ್ಣುಮಕ್ಕಳಿದ್ದಾರೆ. ದೊಡ್ಡ ಮಗಳಿಗೆ ಈಗ 12 ವರ್ಷ. ಈ ಭೀಕರ ಹತ್ಯೆಗೆ ಸಿಖ್ಖರಲ್ಲಿ ಯೋಧ ಪಂಥ ಎಂದು ಕರೆಸಿಕೊಳ್ಳುವ ನಿಹಾಂಗ್​ ಪಂಥ ಕಾರಣ ಎಂದು ದೂರಲಾಗಿದೆ. ಕೊಲೆಯ ವಿವರ ತಿಳಿಸುವ ಮೂರು ವಿಡಿಯೊಗಳು ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿವೆ. ಲಖ್​ಬಿರ್ ಸಿಂಗ್​ನ ಮುಂಗೈ ಕಡಿದ ಮೇಲೆ ಆತ ರಕ್ತಸ್ರಾವದಿಂದ ಸುಸ್ತಾಗಿ ಕೆಳಗೆ ಬಿದ್ದ. ನೋವು ಮತ್ತು ಆಘಾತದಿಂದ ಅವನ ಕಣ್ಣುಗುಡ್ಡೆಗಳು ಹೊರಚಾಚಿದ್ದವು. ಆದರೂ ಈಟಿ ಹಿಡಿದ ನಿಹಾಂಗ್​ ಪಂಥೀಯರು ಈತನಿಗೆ ಹೆಸರು ಹೇಳುವಂತೆ ಒತ್ತಾಯಿಸುತ್ತಿದ್ದರು. ಲಖ್​ಬಿರ್ ಸಿಂಗ್​ನನ್ನು ಹಿಂಸಿಸುವ, ಅವನ ಸಾವನ್ನು ರೆಕಾರ್ಡ್ ಮಾಡಿಕೊಳ್ಳುತ್ತಿರುವ ದೃಶ್ಯಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ.

ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಈ ಹತ್ಯೆಯನ್ನು ಖಂಡಿಸಿದ್ದು, ಘಟನೆಯಿಂದ ಅಂತರ ಕಾಪಾಡಿಕೊಂಡಿದೆ. ಕಿಸಾನ್ ಮೋರ್ಚಾ ಜೊತೆಗೆ ಮೃತ ವ್ಯಕ್ತಿ ಹಾಗೂ ನಿಹಾಂಗ್ ಗುಂಪು ಯಾವುದೇ ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ನಿಹಾಂಗ್ ಗುಂಪು ಹೀಗೆ ಹಿಂಸಾತ್ಮಕವಾಗಿ ವರ್ತಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಪಾಟಿಯಾಲದಲ್ಲಿ ಕೊವಿಡ್ ಲಾಕ್​ಡೌನ್ ವೇಳೆ ಸಂಚರಿಸುತ್ತಿದ್ದವರನ್ನು ತಡೆದು ಪ್ರಶ್ನಿಸಿದ್ದಕ್ಕೆ ನಿಹಾಂಗ್ ಪಂಗಡಕ್ಕೆ ಸೇರಿದ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯೊಬ್ಬರ ಮುಂಬೈ ಕೊಚ್ಚಿ ಹಾಕಿದ್ದ. ಇದೇ ರೀತಿ ಮೂರು ಪ್ರತ್ಯೇಕ ಸಂದರ್ಭಗಳಲ್ಲಿ ಈ ಸಮುದಾಯಕ್ಕೆ ಸೇರಿದವರು ಹಿಂಸಾತ್ಮಕವಾಗಿ ವರ್ತಿಸಿದ್ದರು.

ಇದನ್ನೂ ಓದಿ: Lakhimpur Kheri ಲಖಿಂಪುರ್ ಖೇರಿ ರೈತರ ಹತ್ಯೆ: ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಸಚಿವರ ಮಗನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸ್

ಇದನ್ನೂ ಓದಿ: ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಅದೇ ನನ್ನ ಕೊನೆಯ ಹೋರಾಟ: ಹೆಚ್​ಡಿ ಕುಮಾರಸ್ವಾಮಿ

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ