AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ-ದೆಹಲಿ ಗಡಿಯಲ್ಲಿ ಕೈ ಕಡಿದು ವ್ಯಕ್ತಿ ಹತ್ಯೆ, ಸಾರ್ವಜನಿಕ ಪ್ರದರ್ಶನ: ಅಂತರ ಕಾಯ್ದುಕೊಂಡ ಕಿಸಾನ್ ಮೋರ್ಚಾ

ಸಿಖ್ಖರ ಪವಿತ್ರ ಗ್ರಂಥ ‘ಗ್ರಂಥ ಸಾಹಿಬ್​’ಗೆ ಅವಮಾನ ಮಾಡಿದ್ದ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ಹೇಳಿಕೊಳ್ಳುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ

ಹರಿಯಾಣ-ದೆಹಲಿ ಗಡಿಯಲ್ಲಿ ಕೈ ಕಡಿದು ವ್ಯಕ್ತಿ ಹತ್ಯೆ, ಸಾರ್ವಜನಿಕ ಪ್ರದರ್ಶನ: ಅಂತರ ಕಾಯ್ದುಕೊಂಡ ಕಿಸಾನ್ ಮೋರ್ಚಾ
ನಿಹಾಂಗ್ ಪಂಥದ ಸಿಖ್ ಮತ್ತು ಮೃತ ವ್ಯಕ್ತಿ
TV9 Web
| Edited By: |

Updated on: Oct 15, 2021 | 3:40 PM

Share

ದೆಹಲಿ: ಹರಿಯಾಣ-ದೆಹಲಿ ಗಡಿಯ ಕುಂಡಲಿ ಎಂಬಲ್ಲಿ ವ್ಯಕ್ತಿಯೊಬ್ಬನ ಕೈ ಕಡಿದು, ನೇಣು ಬಿಗಿದು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ಸ್ಪಷ್ಟ ಕಾರಣವನ್ನು ಪೊಲೀಸರು ಈವರೆಗೆ ದೃಢಪಡಿಸಿಲ್ಲ, ಆದರೆ ಸಿಖ್ ಪಂಥ ನಿಹಾಂಗ್​ಗೆ ಸೇರಿದವರು ಈ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸಿಖ್ಖರ ಪವಿತ್ರ ಗ್ರಂಥ ‘ಗ್ರಂಥ ಸಾಹಿಬ್​’ಗೆ ಅವಮಾನ ಮಾಡಿದ್ದ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ಹೇಳಿಕೊಳ್ಳುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕೊಲೆಯಾದ ವ್ಯಕ್ತಿಯ ಶವವನ್ನು ಹಗ್ಗ ಕಟ್ಟಿ ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದೆ.

ಮೃತನನ್ನು ಚೀಮಾ ಖುರ್ದ್​ ಗ್ರಾಮದ ಲಖಬೀರ್ ಸಿಂಗ್ (36) ಎಂದು ಗುರುತಿಸಲಾಗಿದೆ. ಈತ ಪಂಜಾಬ್​ನ ತರಣ್ ತರಣ್​ ಜಿಲ್ಲೆಯ ಚೀಮಾಖುರ್ದ್​ ಗ್ರಾಮದ ದಲಿತರ ವ್ಯಕ್ತಿ ಹರಿಯಾಣದ​ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮೃತನ ದೇಹವನ್ನು ಶುಕ್ರವಾರ ಮುಂಜಾನೆ 5 ಗಂಟೆಗೆ ವಶಕ್ಕೆ ತೆಗೆದುಕೊಳ್ಳಲಾಯಿತು. ರೈತ ಚಳವಳಿ ನಡೆಯುತ್ತಿರುವ ಸ್ಥಳದ ಹತ್ತಿರವೇ ಈ ಹತ್ಯೆ ನಡೆದಿದೆ. ತನಿಖೆ ಪ್ರಗತಿಯಲ್ಲಿದ್ದು, ಶಂಕಿತರ ವಿರುದ್ಧ ಕೊಲೆ ಪ್ರಕರಣದ ದಾಖಲಿಸಲಾಗಿದೆ. ವಿಚಾರಣೆಯನ್ನೂ ಆರಂಭಿಸಲಾಗಿದೆ ಎಂದು ರೊಹ್​ತಕ್ ವಲಯದ ಐಜಿಪಿ ಸಂದೀಪ್ ಖಿರ್​ವರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.

ಮೃತ ಲಖ್​ಬಿರ್ ಸಿಂಗ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸೋದರಿ, ಹೆಂಡತಿ ಮತ್ತು ಮೂರು ಹೆಣ್ಣುಮಕ್ಕಳಿದ್ದಾರೆ. ದೊಡ್ಡ ಮಗಳಿಗೆ ಈಗ 12 ವರ್ಷ. ಈ ಭೀಕರ ಹತ್ಯೆಗೆ ಸಿಖ್ಖರಲ್ಲಿ ಯೋಧ ಪಂಥ ಎಂದು ಕರೆಸಿಕೊಳ್ಳುವ ನಿಹಾಂಗ್​ ಪಂಥ ಕಾರಣ ಎಂದು ದೂರಲಾಗಿದೆ. ಕೊಲೆಯ ವಿವರ ತಿಳಿಸುವ ಮೂರು ವಿಡಿಯೊಗಳು ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿವೆ. ಲಖ್​ಬಿರ್ ಸಿಂಗ್​ನ ಮುಂಗೈ ಕಡಿದ ಮೇಲೆ ಆತ ರಕ್ತಸ್ರಾವದಿಂದ ಸುಸ್ತಾಗಿ ಕೆಳಗೆ ಬಿದ್ದ. ನೋವು ಮತ್ತು ಆಘಾತದಿಂದ ಅವನ ಕಣ್ಣುಗುಡ್ಡೆಗಳು ಹೊರಚಾಚಿದ್ದವು. ಆದರೂ ಈಟಿ ಹಿಡಿದ ನಿಹಾಂಗ್​ ಪಂಥೀಯರು ಈತನಿಗೆ ಹೆಸರು ಹೇಳುವಂತೆ ಒತ್ತಾಯಿಸುತ್ತಿದ್ದರು. ಲಖ್​ಬಿರ್ ಸಿಂಗ್​ನನ್ನು ಹಿಂಸಿಸುವ, ಅವನ ಸಾವನ್ನು ರೆಕಾರ್ಡ್ ಮಾಡಿಕೊಳ್ಳುತ್ತಿರುವ ದೃಶ್ಯಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ.

ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಈ ಹತ್ಯೆಯನ್ನು ಖಂಡಿಸಿದ್ದು, ಘಟನೆಯಿಂದ ಅಂತರ ಕಾಪಾಡಿಕೊಂಡಿದೆ. ಕಿಸಾನ್ ಮೋರ್ಚಾ ಜೊತೆಗೆ ಮೃತ ವ್ಯಕ್ತಿ ಹಾಗೂ ನಿಹಾಂಗ್ ಗುಂಪು ಯಾವುದೇ ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ನಿಹಾಂಗ್ ಗುಂಪು ಹೀಗೆ ಹಿಂಸಾತ್ಮಕವಾಗಿ ವರ್ತಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಪಾಟಿಯಾಲದಲ್ಲಿ ಕೊವಿಡ್ ಲಾಕ್​ಡೌನ್ ವೇಳೆ ಸಂಚರಿಸುತ್ತಿದ್ದವರನ್ನು ತಡೆದು ಪ್ರಶ್ನಿಸಿದ್ದಕ್ಕೆ ನಿಹಾಂಗ್ ಪಂಗಡಕ್ಕೆ ಸೇರಿದ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯೊಬ್ಬರ ಮುಂಬೈ ಕೊಚ್ಚಿ ಹಾಕಿದ್ದ. ಇದೇ ರೀತಿ ಮೂರು ಪ್ರತ್ಯೇಕ ಸಂದರ್ಭಗಳಲ್ಲಿ ಈ ಸಮುದಾಯಕ್ಕೆ ಸೇರಿದವರು ಹಿಂಸಾತ್ಮಕವಾಗಿ ವರ್ತಿಸಿದ್ದರು.

ಇದನ್ನೂ ಓದಿ: Lakhimpur Kheri ಲಖಿಂಪುರ್ ಖೇರಿ ರೈತರ ಹತ್ಯೆ: ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಸಚಿವರ ಮಗನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸ್

ಇದನ್ನೂ ಓದಿ: ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಅದೇ ನನ್ನ ಕೊನೆಯ ಹೋರಾಟ: ಹೆಚ್​ಡಿ ಕುಮಾರಸ್ವಾಮಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು