ಮನ್​ಕಿ ಬಾತ್ ವಿರೋಧಿಸಿ ಚಪ್ಪಾಳೆ ತಟ್ಟಿ: ಭಾರತೀಯ ಕಿಸಾನ್ ಯೂನಿಯನ್ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ಡಿ.25ರಂದು ಮನ್ ಕಿ ಬಾತ್ ಮಾತಾಡುವ ವೇಳೆ ಚಪ್ಪಾಳೆ ಬಾರಿಸುವಂತೆ ಭಾರತೀಯ ಕಿಸಾನ್ ಯೂನಿಯನ್​ನ ಜಗಜೀತ್ ಸಿಂಗ್ ಸಿಂಗ್ ಕರೆ ನೀಡಿದ್ದಾರೆ.

ಮನ್​ಕಿ ಬಾತ್ ವಿರೋಧಿಸಿ ಚಪ್ಪಾಳೆ ತಟ್ಟಿ: ಭಾರತೀಯ ಕಿಸಾನ್ ಯೂನಿಯನ್ ಕರೆ
ಪ್ರಧಾನಿ ನರೇಂದ್ರ ಮೋದಿ
Edited By:

Updated on: Dec 20, 2020 | 9:03 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿ.25ರಂದು ಮನ್ ಕಿ ಬಾತ್ ಮಾತಾಡುವ ವೇಳೆ ಚಪ್ಪಾಳೆ ಬಾರಿಸುವಂತೆ ಭಾರತೀಯ ಕಿಸಾನ್ ಯೂನಿಯನ್​ನ ಜಗಜೀತ್ ಸಿಂಗ್ ಸಿಂಗ್ ಕರೆ ನೀಡಿದ್ದಾರೆ.

ರೈತರ ಪ್ರತಿಭಟನೆ 25ನೇ ದಿನ ತಲುಪಿದರೂ ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದ ಕಾರಣ ರೈತ ಒಕ್ಕೂಟಗಳು ಈ ನಿರ್ಧಾರ ತಳೆದಿವೆ. ಪ್ರಧಾನಿಯವರ ಮಾತನ್ನು ವಿರೋಧಿಸಿ ದೇಶದ ಜನರು  ಘಂಟೆ ಜಾಗಟೆಗಳನ್ನೊಳಗೊಂಡ ಚಪ್ಪಾಳೆ ಬಾರಿಸಬೇಕೆಂದು ಅವರು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ. ರೈತ ದಿನದದಂದು ದೇಶದ ರೈತರು ಊಟ ತ್ಯಜಿಸುವುದನ್ನು ನೀವು ಬಯಸುತ್ತೀರಾ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಹರಿಯಾಣದ ಟೋಲ್ ಬೂತ್​ಗಳನ್ನು ಡಿಸೆಂಬರ್ 25ರಿಂದ 27ರವರೆಗೆ ಮುಕ್ತಗೊಳಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸಿರುವ ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್ 24 ಘಂಟೆಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us