Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುನೆಸ್ಕೋ ವೆಬ್​ಸೈಟ್​ನಲ್ಲಿ ಹಿಂದಿ ಭಾಷೆಗೆ ಮನ್ನಣೆ; ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದ ಕೇಂದ್ರ ಸಚಿವ ಕಿಶನ್ ರೆಡ್ಡಿ

ವಿಶ್ವ ಹಿಂದಿ ದಿನದಂದು ಭಾರತದ ವಿಶ್ವ ಪರಂಪರೆಯ ತಾಣಗಳ ಹಿಂದಿ ವಿವರಣೆಯನ್ನು ವಿಶ್ವ ಪರಂಪರೆ ಕೇಂದ್ರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಯುನೆಸ್ಕೋ ನಿರ್ಧರಿಸಿರುವುದು ಪ್ರತಿಯೊಬ್ಬ ಭಾರತೀಯ ಮತ್ತು ಹಿಂದಿ ಪ್ರೇಮಿಗಳಿಗೆ ಹೆಮ್ಮೆಯ ವಿಷಯವಾಗಿದೆ

ಯುನೆಸ್ಕೋ ವೆಬ್​ಸೈಟ್​ನಲ್ಲಿ ಹಿಂದಿ ಭಾಷೆಗೆ ಮನ್ನಣೆ; ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದ ಕೇಂದ್ರ ಸಚಿವ ಕಿಶನ್ ರೆಡ್ಡಿ
ಸಚಿವ ಕಿಶನ್ ರೆಡ್ಡಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 11, 2022 | 9:17 PM

ನವದೆಹಲಿ: ವಿಶ್ವ ಹಿಂದಿ ದಿನದಂದು ಭಾರತದ ವಿಶ್ವ ಪರಂಪರೆಯ ತಾಣಗಳ (UNESCO) ಹಿಂದಿ ವಿವರಣೆಯನ್ನು ತನ್ನ WHC ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಯುನೆಸ್ಕೋ ನಿರ್ಧಾರವು ಪ್ರತಿಯೊಬ್ಬ ಭಾರತೀಯ ಮತ್ತು ಹಿಂದಿ ಪ್ರೇಮಿಗಳಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಟ್ವೀಟ್‌ ಮಾಡಿದ್ದಾರೆ. ಇದು ಭಾರತದ ಹಿಂದಿ ಭಾಷಿಗರು ಹಾಗೂ ಹಿಂದಿ ಪ್ರೇಮಿಗಳಿಗೆ ಹೆಮ್ಮೆಯ ವಿಷಯವಾಗಿದೆ. ಈ ಐತಿಹಾಸಿಕ ನಿರ್ಧಾರವು ಹಿಂದಿ ಭಾಷೆಗೆ ಜಾಗತಿಕ ಮನ್ನಣೆಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡ ಟ್ವೀಟ್ ಮಾಡುವ ಮೂಲಕ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ವಿಶ್ವ ಹಿಂದಿ ದಿನದಂದು ಭಾರತದ ವಿಶ್ವ ಪರಂಪರೆಯ ತಾಣಗಳ ಹಿಂದಿ ವಿವರಣೆಯನ್ನು ವಿಶ್ವ ಪರಂಪರೆ ಕೇಂದ್ರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಯುನೆಸ್ಕೋ ನಿರ್ಧರಿಸಿರುವುದು ಪ್ರತಿಯೊಬ್ಬ ಭಾರತೀಯ ಮತ್ತು ಹಿಂದಿ ಪ್ರೇಮಿಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತೀಯ ಭಾಷೆಗಳ ಜನಪ್ರಿಯತೆಯು ಸ್ವಾಗತಾರ್ಹ ಮತ್ತು ಪ್ರೋತ್ಸಾಹದಾಯಕವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಿಶ್ವ ಹಿಂದಿ ದಿನದ ಅಂಗವಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ನಮ್ಮ ಜ್ಞಾನ ಮತ್ತು ಸಂಸ್ಕೃತಿಯನ್ನು ಹರಡುವಲ್ಲಿ ಹಿಂದಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಹಿಂದಿಯ ಬಳಕೆ ಹೆಚ್ಚುತ್ತಿದ್ದು, ಯುವಜನತೆಯಲ್ಲಿ ಅದರ ಜನಪ್ರಿಯತೆಯಿಂದಾಗಿ ಅದಕ್ಕೆ ಉಜ್ವಲ ಭವಿಷ್ಯವಿದೆ ಎಂದರು. ಅದೇ ಸಮಯದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ತಮ್ಮ ಸಂದೇಶದಲ್ಲಿ, ಜಾಗತಿಕ ಮಟ್ಟದಲ್ಲಿ ಹಿಂದಿಯನ್ನು ಕೊಂಡೊಯ್ಯುವ ನಮ್ಮ ಗುರಿಯತ್ತ ನಾವು ನಿರಂತರವಾಗಿ ಸಾಗುತ್ತಿದ್ದೇವೆ ಎಂದು ಹೇಳಿದರು.

ವಿಶ್ವ ಹಿಂದಿ ದಿನವನ್ನು ಪ್ರತಿ ವರ್ಷ ಜನವರಿ 10ರಂದು ಆಚರಿಸಲಾಗುತ್ತದೆ. ವಿಶ್ವದಲ್ಲಿ ಹಿಂದಿಯ ಪ್ರಚಾರಕ್ಕಾಗಿ ಜಾಗೃತಿ ಮೂಡಿಸುವುದು ಮತ್ತು ಹಿಂದಿಯನ್ನು ಅಂತಾರಾಷ್ಟ್ರೀಯ ಭಾಷೆಯಾಗಿ ಪ್ರಸ್ತುತಪಡಿಸುವುದು ಇದರ ಉದ್ದೇಶವಾಗಿದೆ. ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2006ರ ಜನವರಿ 10 ಅನ್ನು ಪ್ರತಿ ವರ್ಷ ವಿಶ್ವ ಹಿಂದಿ ದಿನವನ್ನಾಗಿ ಆಚರಿಸಲು ಘೋಷಿಸಿದರು.

ಇದನ್ನೂ ಓದಿ: ಭಾರತದ ಸಂಸ್ಕೃತಿ, ಜ್ಞಾನ ಪಸರಿಸುವಲ್ಲಿ ಹಿಂದಿ ಬಹುಮುಖ್ಯ ಪಾತ್ರ ವಹಿಸುತ್ತಿದೆ: ಪ್ರಧಾನಿ ಮೋದಿ

ಕಾಶಿ ವಿಶ್ವನಾಥ ಧಾಮ ನವೀಕರಣಕ್ಕೆ ಶ್ರಮಿಸುತ್ತಿರುವ ಕಾರ್ಮಿಕರಿಗೆ ಪಾದರಕ್ಷೆ ಕಳಿಸಿದ ಪ್ರಧಾನಿ ಮೋದಿ; ಇದರ ಹಿಂದಿದೆ ಸೂಕ್ಷ್ಮ ಕಾರಣ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್