AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ

ಭಾಷಿಣಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ನೇತೃತ್ವದ ಅನುವಾದ ಸಾಧನವಾಗಿದೆ. ಇದು ಇತರ ಭಾಷೆಗಳ ಜನರೊಂದಿಗೆ ಮಾತನಾಡುವಾಗ ತಮ್ಮದೇ ಭಾಷೆಯನ್ನು ಬಳಸಲು ಜನರಿಗೆ ಸಹಾಯ ಮಾಡುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ಈ ಉಪಕರಣವು ತುಂಬಾ ಉಪಯುಕ್ತವಾಗಿದೆ.

ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Dec 18, 2023 | 8:08 AM

ನವದೆಹಲಿ, ಡಿಸೆಂಬರ್ 18: ಕಾಶಿ-ತಮಿಳು ಸಂಗಮಂ 2.0 ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದೇ ವೇಳೆ, ಪ್ರಧಾನಿ ಭಾಷಣವನ್ನು ತಮಿಳುನಾಡಿನವರಿಗೆ ತಮಿಳು ಭಾಷೆಗೆ ಭಾಷಾಂತರಿಸಿ ಕೇಳಲು ಕೃತಕ ಬುದ್ಧಿಮತ್ತೆ (AI) ಸಾಧನ ‘ಭಾಷಿಣಿ’ ಸಾಧನವನ್ನು (Bhashini AI translation tool) ಬಳಸಲಾಗಿತ್ತು. ಈ ಸಾಧನದ ಬಗ್ಗೆಯೂ ಪ್ರಧಾನಿ ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. ಇದು ಹೊಸ ಆರಂಭ ಮತ್ತು ನಿಮ್ಮನ್ನು ತಲುಪಲು ನನಗೆ ಇನ್ನಷ್ಟು ಸುಲಭವಾಗಲಿದೆ ಎಂದು ಪ್ರಧಾನಿ ಹೇಳಿದ್ದರು.

ಭಾಷಿಣಿ ಎಂದರೇನು?

ಭಾಷಿಣಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ನೇತೃತ್ವದ ಅನುವಾದ ಸಾಧನವಾಗಿದೆ. ಇದು ಇತರ ಭಾಷೆಗಳ ಜನರೊಂದಿಗೆ ಮಾತನಾಡುವಾಗ ತಮ್ಮದೇ ಭಾಷೆಯನ್ನು ಬಳಸಲು ಜನರಿಗೆ ಸಹಾಯ ಮಾಡುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ಈ ಉಪಕರಣವು ತುಂಬಾ ಉಪಯುಕ್ತವಾಗಿದೆ.

ಸರ್ಕಾರದ ಪ್ರಕಾರ, ಈ ಉಪಕರಣವು ಎಲ್ಲಾ ಭಾರತೀಯರಿಗೆ ಅವರ ಸ್ವಂತ ಭಾಷೆಯಲ್ಲಿ ಇಂಟರ್ನೆಟ್ ಮತ್ತು ಡಿಜಿಟಲ್ ಸೇವೆಗಳನ್ನು ಸುಲಭವಾಗಿ ಪಡೆಯುವಂತೆ ಮಾಡುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು ಧ್ವನಿ-ಆಧಾರಿತ ಆ್ಯಕ್ಸೆಸ್ ಹೊಂದಿದ್ದು, ವಿವಿಧ ಭಾಷೆಗಳಲ್ಲಿ ಸಂವಹನಕ್ಕೆ ನೆರವಾಗುತ್ತದೆ. ಬಳಕೆದಾರರು ಆ್ಯಂಡ್ರಾಯ್ಡ್ (Android) ಮತ್ತು ಐಫೋನ್ (iPhone) ಅಪ್ಲಿಕೇಶನ್‌ಗಳ ಮೂಲಕ ಇದರ ಸೇವೆ ಪಡೆಯಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣದಲ್ಲಿ ಮೊಟ್ಟ ಮೊದಲ ಭಾರಿಗೆ ಎಐ ಆಧಾರಿತ ಅನುವಾದ ಸಾಧನ ಬಳಕೆ

ಡಿಜಿಟಲ್ ಸೇರ್ಪಡೆ ಮತ್ತು ಡಿಜಿಟಲ್ ಸಬಲೀಕರಣವನ್ನು ಇದು ಖಚಿತಪಡಿಸುತ್ತದೆ. ಆ ಮೂಲಕ ಆತ್ಮ ನಿರ್ಭರ ಭಾರತಕ್ಕೆ ಕೊಡುಗೆ ನೀಡಲಿದೆ ಎಂದು bhashini.gov.in ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ಗೆ ಚಾಲನೆ ನೀಡಿದ್ದಾರೆ. ಇದು ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಉಪಕ್ರಮವಾಗಿದೆ. ಇದು ‘ಏಕ್ ಭಾರತ್, ಶ್ರೇಷ್ಠ ಭಾರತ್’ ಉಪಕ್ರಮದ ಒಂದು ಭಾಗವಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ