AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ

ಭಾಷಿಣಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ನೇತೃತ್ವದ ಅನುವಾದ ಸಾಧನವಾಗಿದೆ. ಇದು ಇತರ ಭಾಷೆಗಳ ಜನರೊಂದಿಗೆ ಮಾತನಾಡುವಾಗ ತಮ್ಮದೇ ಭಾಷೆಯನ್ನು ಬಳಸಲು ಜನರಿಗೆ ಸಹಾಯ ಮಾಡುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ಈ ಉಪಕರಣವು ತುಂಬಾ ಉಪಯುಕ್ತವಾಗಿದೆ.

ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Dec 18, 2023 | 8:08 AM

Share

ನವದೆಹಲಿ, ಡಿಸೆಂಬರ್ 18: ಕಾಶಿ-ತಮಿಳು ಸಂಗಮಂ 2.0 ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದೇ ವೇಳೆ, ಪ್ರಧಾನಿ ಭಾಷಣವನ್ನು ತಮಿಳುನಾಡಿನವರಿಗೆ ತಮಿಳು ಭಾಷೆಗೆ ಭಾಷಾಂತರಿಸಿ ಕೇಳಲು ಕೃತಕ ಬುದ್ಧಿಮತ್ತೆ (AI) ಸಾಧನ ‘ಭಾಷಿಣಿ’ ಸಾಧನವನ್ನು (Bhashini AI translation tool) ಬಳಸಲಾಗಿತ್ತು. ಈ ಸಾಧನದ ಬಗ್ಗೆಯೂ ಪ್ರಧಾನಿ ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. ಇದು ಹೊಸ ಆರಂಭ ಮತ್ತು ನಿಮ್ಮನ್ನು ತಲುಪಲು ನನಗೆ ಇನ್ನಷ್ಟು ಸುಲಭವಾಗಲಿದೆ ಎಂದು ಪ್ರಧಾನಿ ಹೇಳಿದ್ದರು.

ಭಾಷಿಣಿ ಎಂದರೇನು?

ಭಾಷಿಣಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ನೇತೃತ್ವದ ಅನುವಾದ ಸಾಧನವಾಗಿದೆ. ಇದು ಇತರ ಭಾಷೆಗಳ ಜನರೊಂದಿಗೆ ಮಾತನಾಡುವಾಗ ತಮ್ಮದೇ ಭಾಷೆಯನ್ನು ಬಳಸಲು ಜನರಿಗೆ ಸಹಾಯ ಮಾಡುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ಈ ಉಪಕರಣವು ತುಂಬಾ ಉಪಯುಕ್ತವಾಗಿದೆ.

ಸರ್ಕಾರದ ಪ್ರಕಾರ, ಈ ಉಪಕರಣವು ಎಲ್ಲಾ ಭಾರತೀಯರಿಗೆ ಅವರ ಸ್ವಂತ ಭಾಷೆಯಲ್ಲಿ ಇಂಟರ್ನೆಟ್ ಮತ್ತು ಡಿಜಿಟಲ್ ಸೇವೆಗಳನ್ನು ಸುಲಭವಾಗಿ ಪಡೆಯುವಂತೆ ಮಾಡುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು ಧ್ವನಿ-ಆಧಾರಿತ ಆ್ಯಕ್ಸೆಸ್ ಹೊಂದಿದ್ದು, ವಿವಿಧ ಭಾಷೆಗಳಲ್ಲಿ ಸಂವಹನಕ್ಕೆ ನೆರವಾಗುತ್ತದೆ. ಬಳಕೆದಾರರು ಆ್ಯಂಡ್ರಾಯ್ಡ್ (Android) ಮತ್ತು ಐಫೋನ್ (iPhone) ಅಪ್ಲಿಕೇಶನ್‌ಗಳ ಮೂಲಕ ಇದರ ಸೇವೆ ಪಡೆಯಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣದಲ್ಲಿ ಮೊಟ್ಟ ಮೊದಲ ಭಾರಿಗೆ ಎಐ ಆಧಾರಿತ ಅನುವಾದ ಸಾಧನ ಬಳಕೆ

ಡಿಜಿಟಲ್ ಸೇರ್ಪಡೆ ಮತ್ತು ಡಿಜಿಟಲ್ ಸಬಲೀಕರಣವನ್ನು ಇದು ಖಚಿತಪಡಿಸುತ್ತದೆ. ಆ ಮೂಲಕ ಆತ್ಮ ನಿರ್ಭರ ಭಾರತಕ್ಕೆ ಕೊಡುಗೆ ನೀಡಲಿದೆ ಎಂದು bhashini.gov.in ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ಗೆ ಚಾಲನೆ ನೀಡಿದ್ದಾರೆ. ಇದು ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಉಪಕ್ರಮವಾಗಿದೆ. ಇದು ‘ಏಕ್ ಭಾರತ್, ಶ್ರೇಷ್ಠ ಭಾರತ್’ ಉಪಕ್ರಮದ ಒಂದು ಭಾಗವಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?