AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JioPhone Next: ಗೂಗಲ್ ಮತ್ತು ರಿಲಯನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಈ ಹೊಸ ಸ್ಮಾರ್ಟ್​ಫೋನ್ ಬಗ್ಗೆ ತಿಳಿದುಕೊಳ್ಳಿ

ಈ ಹೊಸ ಸ್ಮಾರ್ಟ್​ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್​ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ. ಈ ಬಗ್ಗೆ ಕಳೆದ ವರ್ಷವೇ ಮುಕೇಶ್ ಅಂಬಾನಿ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ ಮಾಹಿತಿ ನೀಡಿದ್ದರು.

JioPhone Next: ಗೂಗಲ್ ಮತ್ತು ರಿಲಯನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಈ ಹೊಸ ಸ್ಮಾರ್ಟ್​ಫೋನ್ ಬಗ್ಗೆ ತಿಳಿದುಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 25, 2021 | 11:12 PM

Share

ದೆಹಲಿ: ರಿಲಯನ್ಸ್ ಜಿಯೋ ಗೂಗಲ್ ಜೊತೆಗೂಡಿ ಜಿಯೋಫೋನ್ ಒಂದನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿಕೊಂಡಿದೆ. 4ಜಿ ಸಾಮರ್ಥ್ಯದ ಆಡ್ರಾಂಯ್ಡ್ ಫೋನ್​ನ್ನು ಕೈಗೆಟುಕುವ ದರದಲ್ಲಿ ನೀಡಲು ಯೋಜಿಸಿಕೊಂಡಿದೆ. ಜಿಯೋಫೋನ್ ನೆಕ್ಸ್ಟ್ ಎಂಬ ಮಾದರಿಯ ಈ ಮೊಬೈಲ್ ಫೋನ್​ನ್ನು ರಿಲಯನ್ಸ್ ಇಂಡಸ್ಟ್ರೀಸ್​ನ 44ನೇ ವಾರ್ಷಿಕ ಜನರಲ್ ಮೀಟಿಂಗ್​ನಲ್ಲಿ ಗುರುವಾರ ಮುಕೇಶ್ ಅಂಬಾನಿ ಘೋಷಿಸಿದ್ದಾರೆ.

ಈ ಹೊಸ ಸ್ಮಾರ್ಟ್​ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್​ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ. ಈ ಬಗ್ಗೆ ಕಳೆದ ವರ್ಷವೇ ಮುಕೇಶ್ ಅಂಬಾನಿ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ ಮಾಹಿತಿ ನೀಡಿದ್ದರು.

ಈ ಸ್ಮಾರ್ಟ್​ಫೋನ್ ಹೇಗೆ ಪಡೆಯಬಹುದು? ಬೆಲೆ ಎಷ್ಟು? ಸಾಮಾನ್ಯವಾಗಿ ಜನರಲ್ಲಿ ಇರಬಹುದಾದ ಮುಖ್ಯ ಪ್ರಶ್ನೆಗಳಿವು. ಈ ಫೋನ್ ಎಲ್ಲಿ ಸಿಗುತ್ತದೆ ಮತ್ತು ನಾವು ಹೇಗೆ ಪಡೆದುಕೊಳ್ಳಬಹುದು ಎಂಬುದು. ಜಿಯೋಫೋನ್ ನೆಕ್ಸ್ಟ್ ಇದರ ಮೊತ್ತ ಭಾರತದಲ್ಲಿ ಎಷ್ಟು ಎಂದು ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಕೈಗೆಟಕುವ ದರದಲ್ಲೇ ಫೋನ್ ಇರಲಿದೆ ಎಂದು ಹೇಳಲಾಗುತ್ತಿದೆ. ಹಾಗೂ ಸಪ್ಟೆಂಬರ್ 10ರಿಂದ ಮಾರುಕಟ್ಟೆಯಲ್ಲಿ ಕೊಂಡುಕೊಳ್ಳಲು ಲಭ್ಯವಿರುತ್ತದೆ ಎಂದೂ ತಿಳಿಸಲಾಗಿದೆ.

ರಿಲಯನ್ಸ್ ಜಿಯೋಫೋನ್ ನೆಕ್ಸ್ಟ್ ಆಂಡ್ರಾಯ್ಡ್​ನ ಲೈಟ್ ವರ್ಷನ್​ನೊಂದಿಗೆ ಬರಲಿದೆ. ಗೂಗಲ್ ಹಾಗೂ not KaiOS ನೊಂದಿಗೆ ಸಿಗಲಿದೆ. ಈ ಫೋನ್​ಗಾಗಿ ನಮ್ಮ ತಂಡ ವಿಶೇಷ ಆಂಡ್ರಾಯ್ಡ್ ವರ್ಷನ್ ಒಂದನ್ನು ಸಿದ್ದಪಡಿಸಿದೆ ಎಂದು ಗೂಗಲ್ ಹಾಗೂ ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ಇದು ರಿಲಯನ್ಸ್ ಜಿಯೋನ ಮೊದಲ ಆಂಡ್ರಾಯ್ಡ್ ಫೋನ್ ಆಗಿರಲಿದೆ. ಹಳೆಯ ಜಿಯೋ ಫೋನ್​ಗಳು KaiOS ಮಾದರಿಯವು ಆಗಿದ್ದವು.

ಹಾರ್ಡ್​ವೇರ್ ಸೌಲಭ್ಯಗಳು ಏನೇನು? ಜಿಯೋಫೋನ್ ನೆಕ್ಸ್ಟ್ ಎಂಬುದು ಬೇಸಿಕ್ ಹಾರ್ಡ್​ವೇರ್ ಸೌಕರ್ಯಗಳೊಂದಿಗೆ ಲಭ್ಯವಾಗಲಿದೆ. ಹಾಗೂ ಈಗಿನ ಆಧುನಿಕ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್​ನೊಂದಿಗೆ ಸಪೋರ್ಟ್ ಆಗುವುದು ಅನುಮಾನವಾಗಿದೆ. ಗೂಗಲ್ ಪ್ರತ್ಯೇಕ ಆಂಡ್ರಾಯ್ಡ್ ವರ್ಷನ್ ಮಾಡಿದ್ದು, ಸೀಮಿತ ಹಾರ್ಡ್​ವೇರ್ ಸೌಕರ್ಯಗಳಿಗೆ ಅನುಗುಣವಾಗಿ ತಯಾರಿಸಲಾಗಿದೆ.

ಜಿಯೋಫೋನ್ ನೆಕ್ಸ್ಟ್ ಟಚ್ ಸ್ಕ್ರೀನ್ ಡಿಸ್​ಪ್ಲೇ ಸೌಲಭ್ಯದೊಂದಿಗೆ ಬರಲಿದೆ. 5 ಇಂಚುಗಳ ಡಿಸ್​​ಪ್ಲೇ ಇರಲಿದ್ದು, ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳ ಸಾಮಾನ್ಯ ಡಿಸೈನ್ ಇರಲಿದೆ. ಬಹುಶಃ ಫೋನ್​ನಲ್ಲಿ ಒಂದು ಹಿಂಬದಿ ಕ್ಯಾಮರಾ ಇರಲಿದೆ. ಎಲ್​ಇಡಿ ಫ್ಲಾಶ್ ಲೈಟ್​ನೊಂದಿಗೆ ಒಂದು ರೇರ್ ಕ್ಯಾಮರಾ ಇರಲಿದೆ. ಜೊತೆಗೆ, ಒಂದು ಸೆಲ್ಫೀ ಕ್ಯಾಮರಾ ಕೂಡ ಇರಲಿದೆ. ಉಳಿದಂತೆ, ವೈಫೈ, ಬ್ಲೂಟೂಥ್​ನಂತ ವ್ಯವಸ್ಥೆ ಇರಲಿದೆ.

ಗೂಗಲ್, ಜಿಯೋ ಸೇವೆಗಳು ಇಷ್ಟೇ ಅಲ್ಲದೆ, ಜಿಯೋಫೋನ್ ನೆಕ್ಸ್ಟ್​ಗೆ ಹೊಸ ಆಂಡ್ರಾಯ್ಡ್ ರಿಲೀಸ್​ಗಳನ್ನು, ಸುರಕ್ಷತಾ ಮಾಹಿತಿಗಳನ್ನು ನೀಡುವುದಾಗಿ ಗೂಗಲ್ ಭರವಸೆ ನೀಡಿದೆ. ಗೂಗಲ್ ಪ್ಲೇ ಸ್ಟೋರ್ ಮತ್ತು ಗೂಗಲ್ ಪ್ಲೇ ಪ್ರೊಟೆಕ್ಟ್ ಆಪ್ ಫೋನ್​ನಲ್ಲಿ ಮೊದಲೇ ಡೌನ್​ಲೋಡ್ ಆಗಿರಲಿದೆ.

ಅಪ್ಲಿಕೇಷನ್ ಕಾರ್ಯನಿರ್ವಹಿಸಲು ಬಳಕೆದಾರರು, ಗೂಗಲ್ ಅಸಿಸ್ಟಂಟ್​ನ್ನು ಬಳಸಬಹುದಾಗಿದೆ. ಜಿಯೋ ಆಪ್​ ಕೂಡ ಬಳಸಬಹುದಾಗಿದ್ದು ಹವಾಮಾನ ವರದಿ, ಕ್ರಿಕೆಟ್ ಸ್ಕೋರ್ ಇತ್ಯಾದಿ ಮಾಹಿತಿ ಪಡೆಯಬಹುದಾಗಿದೆ. ಗೂಗಲ್ ಅಸಿಸ್ಟಂಟ್ ಬಳಸಿಕೊಂಡು ಜಿಯೋಸಾವ್ನ್​ನಲ್ಲಿ ಹಾಡು ಕೇಳಬಹುದು. ಮೈ ಜಿಯೋ ಮೂಲಕ ಮೊಬೈಲ್ ಬ್ಯಾಲೆನ್ಸ್ ಮಾಹಿತಿ ಪಡೆಯಬಹುದಾಗಿದೆ.

ಇದನ್ನೂ ಓದಿ: Pay Your Contact: ಕೊಟಕ್ ಮಹೀಂದ್ರಾ ಬ್ಯಾಂಕ್ ಗ್ರಾಹಕರು ಮೊಬೈಲ್​ ನಂಬರ್ ಮೂಲಕವೇ ಹಣ ಪಾವತಿಸಬಹುದು

JioPhone Next: ಗೂಗಲ್- ಜಿಯೋ ಸ್ಮಾರ್ಟ್​ಫೋನ್ ಸೆಪ್ಟೆಂಬರ್​ನಲ್ಲಿ ಬಿಡುಗಡೆ ಘೋಷಿಸಿದ ಮುಕೇಶ್ ಅಂಬಾನಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ