ಕೊಚ್ಚಿ ಬಾಂಬ್ ಸ್ಫೋಟ: ಡೊಮಿನಿಕ್ ಮಾರ್ಟಿನ್ಗೆ ನ.29ರವರೆಗೆ ನ್ಯಾಯಾಂಗ ಬಂಧನ, ಕಾನೂನು ನೆರವು ನಿರಾಕರಿಸಿದ ಆರೋಪಿ
ಕೊಚ್ಚಿ ಬಾಂಬ್ ಸ್ಫೋಟದ ಆರೋಪಿ ಡೊಮಿನಿಕ್ ಮಾರ್ಟಿನ್ ಅವರನ್ನು ಕೇರಳ ಕೋರ್ಟ್ ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕಳಮಶ್ಶೇರಿಯಲ್ಲಿ ನಡೆದ ಸ್ಫೋಟದಲ್ಲಿ 12 ವರ್ಷದ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಟಿನ್ ಅವರನ್ನು ಬಂಧಿಸಲಾಗಿತ್ತು. ಆರೋಪಿಯನ್ನು ಬುಧವಾರ ಬೆಳಗ್ಗೆ 11ಕ್ಕೆ ಕೋರ್ಟ್ಗೆ ಹಾಜರುಪಡಿಸಿದ್ದಾರೆ.

ಕೊಚ್ಚಿ, ನ.15: ಕೊಚ್ಚಿ ಬಾಂಬ್ ಸ್ಫೋಟದ ಆರೋಪಿ ಡೊಮಿನಿಕ್ ಮಾರ್ಟಿನ್ (Dominic Martin) ಅವರನ್ನು ಕೇರಳ ಕೋರ್ಟ್ ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕಳಮಶ್ಶೇರಿಯಲ್ಲಿ ನಡೆದ ಸ್ಫೋಟದಲ್ಲಿ 12 ವರ್ಷದ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಟಿನ್ ಅವರನ್ನು ಬಂಧಿಸಲಾಗಿತ್ತು. ಆರೋಪಿಯನ್ನು ಬುಧವಾರ ಬೆಳಗ್ಗೆ 11ಕ್ಕೆ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ಡೊಮಿನಿಕ್ ಮಾರ್ಟಿನ್ ಅವರಿಗೆ ಯಾವುದೇ ಕಾನೂನು ಸಹಾಯ ಬೇಕಾದರು ಪಡೆಯಬಹುದು ಎಂದು ಕೋರ್ಟ್ ಹೇಳಿದೆ.
ಆದರೆ ಡೊಮಿನಿಕ್ ಮಾರ್ಟಿನ್ ನನಗೆ ಯಾವುದೇ ಕಾನೂನು ಸಹಾಯದ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಕೂಡ ಕೋರ್ಟ್ ಆರೋಪಿಗೆ ಕಾನೂನು ಸಹಾಯ ಬೇಕಾದರೆ ನೀಡಬಹುದು ಎಂದು ಹೇಳಿತ್ತು. ಇನ್ನು ಡೊಮಿನಿಕ್ ಮಾರ್ಟಿನ್ ಡಿಸಿಪಿ ಶಶಿಧರನ್, ಎಸಿಪಿ ರಾಜ್ಕುಮಾರ್ ಮತ್ತು ಕಳಮಶ್ಶೇರಿ ಸಿಐ ವಿಬಿನ್ ದಾಸ್ ಅವರ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಮೂರು ಜನ ತನ್ನನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಕೋರ್ಟ್ ಮುಂದೆ ತಿಳಿಸಿದ್ದಾರೆ.
ಪೊಲೀಸರು ಕೂಡ ಕೋರ್ಟ್ ಮುಂದೆ ಡೊಮಿನಿಕ್ ಮಾರ್ಟಿನ್ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ. ಮಾರ್ಟಿನ್ ತುಂಬಾ ಬುದ್ಧಿವಂತ ಹಾಗೂ ಶ್ರಮಜೀವಿ, ಉತ್ತಮ ಸಂಬಳದ ಕೆಲಸವು ಕೂಡ ಅವರಿಗಿತ್ತು. ಈ ಕೃತ್ಯ ಮಾಡಲು ಅವರಿಗೆ ಯಾರು ಬ್ರೈನ್ ವಾಶ್ ಮಾಡಿಲ್ಲ ಎಂದು ಹೇಳಿದ್ದಾರೆ. ಬಾಂಬ್ ಸ್ಫೋಟದ ಬಗ್ಗೆ ತನಿಖೆ ಮಾಡಲು ಮಾರ್ಟಿನ್ ಮನೆಗೆ ಮತ್ತು ಸ್ಫೋಟದ ಸ್ಥಳಕ್ಕೆ ಕರೆದುಕೊಂಡು ಹೋಗಿ ತನಿಖೆ ಮಾಡಿದ್ದಾರೆ. ತನಿಖಾ ವರದಿಗಳ ಪ್ರಕಾರ ಈ ಸ್ಫೋಟ ರಿಮೋಟ್ ಕಂಟ್ರೋಲ್ನಿಂದ ಸುಧಾರಿತ ಸ್ಫೋಟಕ ಸಾಧನದ ಮೂಲಕ ನಡೆಸಿದ್ದಾರೆ.
ಇದನ್ನೂ ಓದಿ:ಕಳಮಶ್ಶೇರಿ ಸ್ಫೋಟ; ಆರೋಪಿ ಡೊಮಿನಿಕ್ ಮನೆಯಲ್ಲೇ ತಯಾರಿಸಿದ್ದ ಬಾಂಬ್
ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾರ್ಟಿನ್ ವಿರುದ್ಧ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಆರೋಪಿ ಐಇಡಿ ಸ್ಫೋಟಕ ತಯಾರಿಸಲು ಖರೀದಿಸಿದ ವಸ್ತುಗಳ ಬಿಲ್ನ್ನು ವಶಪಡಿಸಲಾಗಿದೆ. ಯಾವೆಲ್ಲ ಸ್ಥಳದಿಂದ ಈ ವಸ್ತುಗಳನ್ನು ಪಡೆದಿದ್ದಾನೆ. ಆ ಎಲ್ಲ ಸ್ಥಳಗಳಲ್ಲಿ ವಿಡಿಯೋ ಮಾಡಲಾಗಿದೆ.
ಕಳಮಶ್ಶೇರಿಯ ಜಮ್ರಾ ಇಂಟರ್ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸ್ಫೋಟದ ಹೊಣೆಯನ್ನು ಮಾರ್ಟಿನ್ ಅವರೇ ಹೊತ್ತುಕೊಂಡಿದ್ದು. ಈ ಬಗ್ಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಸಮಾವೇಶದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದರು. ಸ್ಫೋಟದ ನಂತರ ಬಾಲಕಿ ಸೇರಿ ಐದು ಜನ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತನಿಖೆಗಾಗಿ 20 ಸದಸ್ಯರ ತನಿಖಾ ತಂಡವನ್ನು ರಚಿಸಿದ್ದಾರೆ. ಇದರ ಜತೆಗೆ ಸಾವನ್ನಪ್ಪಿರುವವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಗಾಯಳುಗಳ ಆಸ್ಪತ್ರೆ ಖರ್ಚನ್ನು ಸರ್ಕಾರವೇ ವಹಿಸಲಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:17 pm, Wed, 15 November 23