AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ; ಕೋಲಾರದ ಕ್ಲಾಕ್ ಟವರ್ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಪ್ರಸ್ತಾಪ

ಕೋಲಾರ ನಗರದ ಕ್ಲಾಕ್ ಟವರ್ನಲ್ಲಿ 74 ವರ್ಷಗಳ ನಂತರ ತ್ರಿವರ್ಣ ಧ್ವಜ ಹಾರಿಸಿದ ವಿಚಾರವನ್ನು ಸಂಸದ ಮುನಿಸ್ವಾಮಿ, ಮೋದಿ ಬಳಿ ಪ್ರಸ್ತಾಪಿಸಿದ್ದಾರೆ. ಇದೇ ವೇಲೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ಮೋದಿಯವರಿಗೆ‌ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ; ಕೋಲಾರದ ಕ್ಲಾಕ್ ಟವರ್ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಪ್ರಸ್ತಾಪ
ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ
TV9 Web
| Edited By: |

Updated on: Mar 31, 2022 | 6:44 PM

Share

ಕೋಲಾರ: ಸಂಸದ ಎಸ್. ಮುನಿಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಮೋದಿ ಭೇಟಿ ಮಾಡಿ ಸುದೀರ್ಘ ಇಪ್ಪತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ಚಿನ್ನದ ಗಣಿ ಪುನರಾರಂಭ ಹಾಗೂ ಚಿನ್ನದ ಗಣಿ ಪ್ರದೇಶದಲ್ಲಿ ಹೊಸ ಕೈಗಾರಿಕಾ ವಲಯ ಸ್ಥಾಪನೆ ಕುರಿತು ಮಾತುಕತೆ ನಡೆಸಿದ್ದಾರೆ. ಇನ್ನು ಕೋಲಾರ ನಗರದ ಕ್ಲಾಕ್ ಟವರ್ನಲ್ಲಿ 74 ವರ್ಷಗಳ ನಂತರ ತ್ರಿವರ್ಣ ಧ್ವಜ ಹಾರಿಸಿದ ವಿಚಾರವನ್ನು ಸಂಸದ ಮುನಿಸ್ವಾಮಿ, ಮೋದಿ ಬಳಿ ಪ್ರಸ್ತಾಪಿಸಿದ್ದಾರೆ. ಇದೇ ವೇಲೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ಮೋದಿಯವರಿಗೆ‌ ಮನವಿ ಮಾಡಿದ್ದಾರೆ. ಕೊನೆಗೆ ಮೋದಿಯವರಿಗೆ ಅಂಬೇಡ್ಕರ್ ವಿಗ್ರಹ ನೀಡಿ ಅಭಿನಂದಿಸಿದ್ದಾರೆ.

ಕ್ಲಾಕ್ ಟವರ್ನಲ್ಲಿ 74 ವರ್ಷಗಳ ಬಳಿಕ ಭಾರತದ ಧ್ವಜ ಹಾರಿಸಲಾಗಿದೆ: ಸಂಸದ ಮುನಿಸ್ವಾಮಿ ಸಮಯ ತಿಳಿಸುವ ಭವ್ಯ ಕಟ್ಟಡವಾದರೂ ಆ ಕಟ್ಟಡದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಸಮಯ ಬಂದಿರಲಿಲ್ಲ. ಆದರೆ ಸಂಸದ ಮುನಿಸ್ವಾಮಿ ಮಾಡಿದ ಪ್ರತಿಭಟನೆಯಿಂದ ಎರಡೇ ದಿನದಲ್ಲಿ ತ್ರಿವರ್ಣ ಧ್ವಜ ವೀರಾಜಮಾನವಾಗಿ ಹಾರಾಡುವ ಇತಿಹಾಸ ಸೃಷ್ಟಿಯಾಗಿದೆ. ಸದ್ಯ ಭರದಿಂದ ಸಾಗಿರುವ ಕ್ಲಾಕ್ ಟವರ್ಗೆಬಣ್ಣ ಬಳಿಯುವ ಕೆಲಸ ಆರಂಭವಾಗಿದ್ದು, ಕ್ಲಾಕ್ ಟವರ್ ಏರಿಯಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೋಲಾರ ನಗರದ ಕ್ಲಾಕ್ ಟವರ್ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಆತಂಕದ ಕೇಂದ್ರವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಇದಕ್ಕೆ ಕಾರಣ ಕೋಲಾರ ಸಂಸದ ಮುನಿಸ್ವಾಮಿ ಏಕಾಏಕಿ ಕೋಲಾರದ ಕ್ಲಾಕ್ ಟವರ್ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ ಹೇಳಿಕೆ ನೀಡಿದ್ದೇ ಕಾರಣ. ಕೋಮು ಸೂಕ್ಷ್ಮ ಪ್ರದೇಶದಲ್ಲಿ ಮುನಿಸ್ವಾಮಿ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಪರಿಣಾಮ ಕೂಡಲೇ ಎಚ್ಚೆತ್ತು ಕೊಂಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಎರಡೂ ಕೋಮಿನ ಮುಖಂಡರುಗಳ ಸಭೆ ಕರೆದು, ಮನವೊಲಿಸಿ ಮುನಿಸ್ವಾಮಿ ಅವರಿಗೆ ಪ್ರತಿಭಟನೆಗೆ ಅವಕಾಶ ನೀಡದೆ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇಂದು ಮುಂಜಾನೆ ಐದು ಗಂಟೆಯಿಂದಲೇ ಕ್ಲಾಕ್ ಟವರ್ ಏರಿಯಾದಲ್ಲಿ ನಾಕಾ ಬಂಧಿ ಹಾಕಿಕೊಂಡು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಕ್ಲಾಕ್ ಟವರ್ಗೆ ಬಣ್ಣ ಬಳಿಯುವ ಕೆಲಸ ಮಾಡಿದರು.

ಟವರ್ ಮೇಲ್ಬಾಗದಲ್ಲಿ ತ್ರಿವರ್ಣ ಧ್ವಜದ ಬಣ್ಣ ಬಳಿದು ನಾಲ್ಕು ಗಂಟೆ ಸುಮಾರಿಗೆ ಹಲವು ವರ್ಷಗಳ ನಂತರ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿ ಎಲ್ಲರೂ ಜೈ ಹಿಂದ್ ಘೋಷಣೆ ಕೂಗಿ ಸಂಭ್ರಮಿಸಿದರು. ಇದೇ ವೇಳೆ ಮಾತನಾಡಿದ ಅಂಜುಮನ್ ಮುಖಂಡ ನಾವೂ ಕೂಡಾ ಈ ದೇಶಕ್ಕಾಗಿ ಹೋರಾಟ ಮಾಡಿದವರು. ನಾವು ಇದೇ ದೇಶದವರು ನಮಗೂ ದೇಶದ ಬಗ್ಗೆ ಅಪಾರ ಗೌರವವಿದೆ ಎಂದು ತಿಳಿಸಿದರು. ಇನ್ನು ಈ ವೇಳೆ ಮಾತನಾಡಿದ ಎಸ್ಪಿ ದೇವರಾಜ್ ಇನ್ನು ಒಂದು ವಾರಗಳ ಕಾಲ ಕೋಲಾರ ನಗರದಲ್ಲಿ ನಿಷೇದಾಜ್ನೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಕ್ಲಾಕ್ ಟವರ್‌ನಲ್ಲಿ ಭಾರತದ ಧ್ವಜ ಹಾರಿಸಿದ್ದೇನೆ, ಇದು ದೇಶ ದ್ರೋಹ ಅಂದ್ರೆ ದಿನವೂ ದೇಶ ದ್ರೋಹದ ಕೆಲಸ ಮಾಡ್ತೀನಿ -ಸಂಸದ ಮುನಿಸ್ವಾಮಿ

ರಾಜಮೌಳಿ ಬಗ್ಗೆ ಆಲಿಯಾಗೆ ನಿಜಕ್ಕೂ ಬೇಸರವಾಗಿದೆಯೇ?; ಪೋಸ್ಟ್ ಡಿಲೀಟ್​ ಮಾಡಿದ್ದಕ್ಕೆ ಕಾರಣ ನೀಡಿದ ನಟಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ