AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತದಲ್ಲಿ ವಿಪರೀತ ಮಳೆ; ರಸ್ತೆಗಳೆಲ್ಲ ಜಲಾವೃತ..ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

monsoon 2021: ಕೋಲ್ಕತ್ತದಲ್ಲಿ 24 ಗಂಟೆಯಲ್ಲಿ 144 ಮಿಮೀ ಮಳೆಯಾಗಿದೆ. ನಿರಂತರವಾದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕೋಲ್ಕತ್ತದಲ್ಲಿ ವಿಪರೀತ ಮಳೆ; ರಸ್ತೆಗಳೆಲ್ಲ ಜಲಾವೃತ..ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕೋಲ್ಕತ್ತ ಮಳೆ (ಪಿಟಿಐ ಚಿತ್ರ)
TV9 Web
| Edited By: |

Updated on: Jun 17, 2021 | 3:26 PM

Share

ಕೋಲ್ಕತ್ತದಲ್ಲಿ ನಿನ್ನೆಯಿಂದಲೂ ವಿಪರೀತ ಮಳೆ ಸುರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಇಡೀ ಪಶ್ಚಿಮ ಬಂಗಾಳದಾದ್ಯಂತ ಗುಡುಗು-ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕೋಲ್ಕತ್ತದಲ್ಲಿ ಬುಧವಾರದಿಂದಲೇ ನಿರಂತರವಾಗಿ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಇಂದು ಹಲವು ಪ್ರಮುಖ ಮತ್ತು ಕಾಲುದಾರಿಗಳೆಲ್ಲ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿಹೋಗಿದ್ದು ಸಂಚಾರಕ್ಕೆ ತೀವ್ರ ತೊಡಕಾಗಿ ಪರಿಣಮಿಸಿದೆ.

ಕೋಲ್ಕತ್ತದ ಉತ್ತರ ಭಾಗಕ್ಕಿಂತ ದಕ್ಷಿಣದ ಭಾಗಗಳಲ್ಲಿ ತುಂಬ ಮಳೆ ಸುರಿಯುತ್ತಿದೆ. ಹೀಗಾಗಿ ಬ್ಯಾಲಿಗಂಜ್ ವೃತ್ತಾಕಾರದ ರಸ್ತೆ, ಲೌಡಾನ್ ಸ್ಟ್ರೀಟ್, ಸದರ್ನ್ ಅವೆನ್ಯೂ ಮತ್ತು ಕಾಸ್ಬಾ, ಬೆಹಾಲಾ ಮತ್ತು ಟೋಲಿಗಂಗೆಯ ಬಳಿಯೆಲ್ಲ ರಸ್ತೆಗಳು ನೀರಿನಿಂದ ತುಂಬಿ ಹೋಗಿವೆ. ಇನ್ನು ಇಂದಿನಿಂದ ಜೂ.19ರವರೆಗೂ ಪಶ್ಚಿಮಬಂಗಾಳದಲ್ಲಿ ಗುಡುಗುಮಿಂಚು ಸಹಿತ ವಿಪರೀತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೋಲ್ಕತ್ತದಲ್ಲಿ 24 ಗಂಟೆಯಲ್ಲಿ 144 ಮಿಮೀ ಮಳೆಯಾಗಿದೆ. ನಿರಂತರವಾದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ನೀರಿನ ಮಟ್ಟ ಏರುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೇ, ಅತಿಯಾದ ಗುಡುಗು-ಮಿಂಚು ಕೂಡ ಇರುವದರಿಂದ ಜನರೂ ಸಹ ಆದಷ್ಟು ಮನೆಯೊಳಗೇ ಇರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

Kolkata and several parts of the West Bengal received incessant rain

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ