AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತದಲ್ಲಿ ವಿಪರೀತ ಮಳೆ; ರಸ್ತೆಗಳೆಲ್ಲ ಜಲಾವೃತ..ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

monsoon 2021: ಕೋಲ್ಕತ್ತದಲ್ಲಿ 24 ಗಂಟೆಯಲ್ಲಿ 144 ಮಿಮೀ ಮಳೆಯಾಗಿದೆ. ನಿರಂತರವಾದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕೋಲ್ಕತ್ತದಲ್ಲಿ ವಿಪರೀತ ಮಳೆ; ರಸ್ತೆಗಳೆಲ್ಲ ಜಲಾವೃತ..ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕೋಲ್ಕತ್ತ ಮಳೆ (ಪಿಟಿಐ ಚಿತ್ರ)
TV9 Web
| Edited By: |

Updated on: Jun 17, 2021 | 3:26 PM

Share

ಕೋಲ್ಕತ್ತದಲ್ಲಿ ನಿನ್ನೆಯಿಂದಲೂ ವಿಪರೀತ ಮಳೆ ಸುರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಇಡೀ ಪಶ್ಚಿಮ ಬಂಗಾಳದಾದ್ಯಂತ ಗುಡುಗು-ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕೋಲ್ಕತ್ತದಲ್ಲಿ ಬುಧವಾರದಿಂದಲೇ ನಿರಂತರವಾಗಿ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಇಂದು ಹಲವು ಪ್ರಮುಖ ಮತ್ತು ಕಾಲುದಾರಿಗಳೆಲ್ಲ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿಹೋಗಿದ್ದು ಸಂಚಾರಕ್ಕೆ ತೀವ್ರ ತೊಡಕಾಗಿ ಪರಿಣಮಿಸಿದೆ.

ಕೋಲ್ಕತ್ತದ ಉತ್ತರ ಭಾಗಕ್ಕಿಂತ ದಕ್ಷಿಣದ ಭಾಗಗಳಲ್ಲಿ ತುಂಬ ಮಳೆ ಸುರಿಯುತ್ತಿದೆ. ಹೀಗಾಗಿ ಬ್ಯಾಲಿಗಂಜ್ ವೃತ್ತಾಕಾರದ ರಸ್ತೆ, ಲೌಡಾನ್ ಸ್ಟ್ರೀಟ್, ಸದರ್ನ್ ಅವೆನ್ಯೂ ಮತ್ತು ಕಾಸ್ಬಾ, ಬೆಹಾಲಾ ಮತ್ತು ಟೋಲಿಗಂಗೆಯ ಬಳಿಯೆಲ್ಲ ರಸ್ತೆಗಳು ನೀರಿನಿಂದ ತುಂಬಿ ಹೋಗಿವೆ. ಇನ್ನು ಇಂದಿನಿಂದ ಜೂ.19ರವರೆಗೂ ಪಶ್ಚಿಮಬಂಗಾಳದಲ್ಲಿ ಗುಡುಗುಮಿಂಚು ಸಹಿತ ವಿಪರೀತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೋಲ್ಕತ್ತದಲ್ಲಿ 24 ಗಂಟೆಯಲ್ಲಿ 144 ಮಿಮೀ ಮಳೆಯಾಗಿದೆ. ನಿರಂತರವಾದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ನೀರಿನ ಮಟ್ಟ ಏರುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೇ, ಅತಿಯಾದ ಗುಡುಗು-ಮಿಂಚು ಕೂಡ ಇರುವದರಿಂದ ಜನರೂ ಸಹ ಆದಷ್ಟು ಮನೆಯೊಳಗೇ ಇರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

Kolkata and several parts of the West Bengal received incessant rain

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ