AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತವರುಮನೆಯಿಂದ ವಿಶೇಷ ರೀತಿಯಲ್ಲಿ ಪತಿಯ ಮನೆಗೆ ಹೋದ ವಧು; ಡ್ರೈವಿಂಗ್​ ಸೀಟ್​ನಲ್ಲಿ ಕುಳಿತವಳನ್ನು ನೋಡಿ ನೆಟ್ಟಿಗರು ಫುಲ್ ಖುಷ್​

ವಧುವಿನ ಹೆಸರು ಸ್ನೇಹಾ ಸಿಂಘಿ ಎಂದಾಗಿದ್ದು, ವಿಡಿಯೋವನ್ನೂ ಆಕೆಯೇ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಇದೊಂದು ಫನ್​ ಎಂದೂ ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೆಟ್ಟಿಗರು ಸಿಕ್ಕಾಪಟೆ ಹೊಗಳಿದ್ದಾರೆ.

Viral Video: ತವರುಮನೆಯಿಂದ ವಿಶೇಷ ರೀತಿಯಲ್ಲಿ ಪತಿಯ ಮನೆಗೆ ಹೋದ ವಧು; ಡ್ರೈವಿಂಗ್​ ಸೀಟ್​ನಲ್ಲಿ ಕುಳಿತವಳನ್ನು ನೋಡಿ ನೆಟ್ಟಿಗರು ಫುಲ್ ಖುಷ್​
ಕೋಲ್ಕತ್ತದ ವಧು
Lakshmi Hegde
|

Updated on: Mar 28, 2021 | 6:51 PM

Share

ಸಾಮಾನ್ಯವಾಗಿ ಹೆಣ್ಣುಮಕ್ಕಳು ಮದುವೆಯಾಗಿ, ಪತಿಯ ಮನೆಗೆ ಹೋಗುವಾಗ ಅಲ್ಲೊಂದು ಭಾವನಾತ್ಮಕ ಸನ್ನಿವೇಶ ಇರುತ್ತದೆ. ವಧು, ಆಕೆಯ ಕುಟುಂಬದವರು ಕಣ್ಣೀರು ಹಾಕುತ್ತಾರೆ. ವರ, ಆತನ ಕಡೆಯವರೆಲ್ಲ ಕಾರಿನ ಮೇಲೆ ಹೋಗಿ ಕುಳಿತರೂ, ನವವಧು ಮಾತ್ರ ಆ ವಾಹನ ಹತ್ತಲು ನಿಧಾನ ಮಾಡುತ್ತಾಳೆ. ಆಕೆಯ ಕುಟುಂಬದವರು ಅವಳನ್ನು ಕರೆದುಕೊಂಡು ಹೋಗಿ, ಕಾರಿನಲ್ಲಿ ಕೂರಿಸುತ್ತಾರೆ. ಇದು ಸಾಮಾನ್ಯವಾಗಿ ಕಂಡುಬರುವ ದೃಶ್ಯ. ಆದರೆ ಇಲ್ಲೊಬ್ಬಳು ವಧು ಸ್ವಲ್ಪ ಡಿಫರೆಂಟ್​.. ತಾನೇ ಕಾರಿನ ಡ್ರೈವ್​ ಮಾಡಿಕೊಂಡು ಪತಿಯನ್ನು ಕರೆದುಕೊಂಡು ಹೋಗಿದ್ದಾಳೆ. ಈ ವಿಡಿಯೋ ಈಗ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಇದು ಕೊಲ್ಕತ್ತದಲ್ಲಿ ನಡೆದದ್ದು. ಆಗಷ್ಟೇ ಮದುವೆಯಾದ ನವದಂಪತಿಗಳವರು. ವಧುವನ್ನು ವರನ ಮನೆಗೆ ಕಳಿಸುವ ಕಾರ್ಯಕ್ರಮ ಮುಗಿದಿತ್ತು. ಆದರೆ ಇಲ್ಲಿ ಚೆಂದವಾಗಿ ಅಲಂಕಾರ ಮಾಡಿಕೊಂಡಿದ್ದ ವಧು ಅಳುತ್ತಿರಲಿಲ್ಲ. ಬದಲಿಗೆ ಎಲ್ಲರಿಗೂ ಖುಷಿಯಿಂದಲೇ ಬೈ ಮಾಡಿದರು. ನಗುನಗುತ್ತಲೇ ಕಾರಿನ ಡ್ರೈವಿಂಗ್​ ಸೀಟ್​​ನಲ್ಲಿ ಕುಳಿತರು. ಆಕೆಯ ಪಕ್ಕದಲ್ಲಿ ಬಂದು ಕುಳಿತ ಪತಿ ಕೂಡ ಎಲ್ಲರಿಗೂ ಕೈ ಬೀಸುತ್ತಾರೆ. ವಧು ಕಾರನ್ನು ಸ್ಟಾರ್ಟ್​ ಮಾಡಿ, ಮುಂದೆ ಹೋಗುತ್ತಿದ್ದಂತೆ ಅಲ್ಲಿ ನಿಂತಿದ್ದವರೆಲ್ಲ ದೊಡ್ಡದಾಗಿ ಕೂಗಿ, ಹುರಿದುಂಬಿಸುತ್ತಾರೆ.

ವಧುವಿನ ಹೆಸರು ಸ್ನೇಹಾ ಸಿಂಘಿ ಎಂದಾಗಿದ್ದು, ವಿಡಿಯೋವನ್ನೂ ಆಕೆಯೇ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಇದೊಂದು ಫನ್​ ಎಂದೂ ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೆಟ್ಟಿಗರು ಸಿಕ್ಕಾಪಟೆ ಹೊಗಳಿದ್ದಾರೆ. ನಿಜಕ್ಕೂ ವಿಭಿನ್ನವಾದ ಸಂದರ್ಭ ಎಂದೂ ಬರೆದುಕೊಂಡಿದ್ದಾರೆ. ವಿಡಿಯೋಕ್ಕೆ 2 ಲಕ್ಷಕ್ಕೂ ಅಧಿಕ ವೀವ್ಸ್ ಬಂದಿದೆ. ಇದು ನಿಜಕ್ಕೂ ಮಹಿಳೆಯರಿಗೆ ಸ್ಫೂರ್ತಿ, ಆತ್ಮವಿಶ್ವಾಸ ತುಂಬುವ ವಿಡಿಯೋ ಎಂದು ಜನರು ಕಾಮೆಂಟ್ ಮಾಡಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆಯಾಗುತ್ತದೆ ಎಂದೂ ಹೇಳಿದ್ದಾರೆ. ಸ್ನೇಹಾ ಅವರು ಶೆಫ್​ ಎಂಬುದು ಅವರ ಇನ್​ಸ್ಟಾಗ್ರಾಂ ಪೋಸ್ಟ್​ನಿಂದ ಗೊತ್ತಾಗುತ್ತಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?