AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್​ಗೆ 14 ದಿನಗಳ ನ್ಯಾಯಾಂಗ ಬಂಧನ

ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಸಂಜಯ್ ರಾಯ್​ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ನ್ಯಾಯಾಲಯಕ್ಕೆ ಕರೆತರಲಾಯಿತು. ರಾಯ್ ಅವರ ಸಿಬಿಐ ಕಸ್ಟಡಿ ಶುಕ್ರವಾರ ಅಂತ್ಯಗೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ.

ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್​ಗೆ 14 ದಿನಗಳ ನ್ಯಾಯಾಂಗ ಬಂಧನ
ಸಂಜಯ್ ರಾಯ್
ನಯನಾ ರಾಜೀವ್
|

Updated on:Aug 23, 2024 | 2:55 PM

Share

ಕೋಲ್ಕತ್ತಾದ ಆರ್​ಜಿ ಕರ್​ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಸಂಜಯ್​ ರಾಯ್​ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಸಂಜಯ್​ನನ್ನು ಭಾರಿ ಪೊಲೀಸ್​ ಭದ್ರತೆಯಲ್ಲಿ ಸೀಲ್ದಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಕ್ಕೆ ಕರೆತರಲಾಯಿತು. ರಾಯ್ ಅವರ ಸಿಬಿಐ ಕಸ್ಟಡಿ ಶುಕ್ರವಾರ ಅಂತ್ಯಗೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ.

ಪ್ರತ್ಯೇಕವಾಗಿ, ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಲು ಸಿಬಿಐಗೆ ಅನುಮತಿ ನೀಡಿತು. ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಆರೋಪಿ ಸಂಜಯ್ ರಾಯ್​ನದ್ದು ಕ್ರೂರ ಪ್ರಾಣಿಯ ಮನಸ್ಥಿತಿ, ಆತನಿಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಆತ ನಿತ್ಯವೂ ತನ್ನ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಣೆ ಮಾಡುತ್ತಿರುತ್ತಿದ್ದ, ಪ್ರಾಣಿಯ ಪ್ರವೃತ್ತಿಯನ್ನು ಹೊಂದಿದ್ದ, ಆತನಿಗೆ ತಾನು ಮಾಡಿರುವ ಕೃತ್ಯದ ಬಗ್ಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲ್ಕತ್ತಾ ಅತ್ಯಾಚಾರ ಆರೋಪಿಯದ್ದು ಕ್ರೂರ ಪ್ರಾಣಿಯ ಸ್ವಭಾವ, ಪಶ್ಚಾತಾಪವೂ ಇಲ್ಲ: ವೈದ್ಯರು

ಸಿಬಿಐ ಆಗಸ್ಟ್ 18ರಂದು ಸಂಜಯ್​ ರಾಯ್ ಮನಸ್ಥಿತಿಯನ್ನು ತಿಳಿದುಕೊಳ್ಳಲು ಸಿಎಫ್​ಎಸ್​ಎಲ್ ತಜ್ಞರಿಗೆ ಹೇಳಿದ್ದರು. ಆಗಸ್ಟ್ 9 ರಂದು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯರ ಶವ ಪತ್ತೆಯಾದ ಮರುದಿನ ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:52 pm, Fri, 23 August 24

Follow Us
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’