ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಮಯದ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

Kolkata rape-murder case: ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ, ಐದನೇ ದಿನದಲ್ಲಿ ಏಜೆನ್ಸಿ ತನಿಖೆಯನ್ನು ಕೈಗೆತ್ತಿಕೊಂಡಿದೆ. ಅಷ್ಟರಲ್ಲಿ ಅಪರಾಧ ನಡೆದ ಸ್ಥಳದಲ್ಲಿ "ಬದಲಾವಣೆ" ಮಾಡಲಾಗಿದೆ ಎಂದು ಹೇಳಿದ್ದಾರೆ.  "ಎಲ್ಲವನ್ನೂ ವಿಡಿಯೊ ರೆಕಾರ್ಡಿಂಗ್ ಮಾಡಲಾಗಿದೆ" ಎಂಬುದನ್ನು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿದ್ದು ಪ್ರತಿ ಘಟನೆಯ ಟೈಮ್‌ಲೈನ್ ಹೊಂದಿರುವುದಾಗಿ ಹೇಳಿದೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಮಯದ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
|

Updated on:Aug 22, 2024 | 1:27 PM

ದೆಹಲಿ ಆಗಸ್ಟ್ 22: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and Hospital) ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ(Kolkata Doctor Rape-Murder Case) ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ನಡೆಸುತ್ತಿದೆ.  ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂಕೋರ್ಟ್, ಆಗಸ್ಟ್ 22 ರಂದು ತನ್ನ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಸಿಬಿಐಗೆ ಹೇಳಿತ್ತು. ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿದಂತೆ, ವೈದ್ಯಕೀಯ ವೃತ್ತಿಪರರಿಗೆ, ವಿಶೇಷವಾಗಿ ಮಹಿಳೆಯರಿಗೆ ಸುರಕ್ಷತೆಯನ್ನು ಖಾತ್ರಿಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಿದೆ. ಇದುವರೆಗೆ ಮುಷ್ಕರ ನಡೆಸುತ್ತಿರುವ ವೈದ್ಯರ ಸಂಘಟನೆಗಳು ರಾಷ್ಟ್ರೀಯ ಕಾರ್ಯಪಡೆಗೆ ಮಾಹಿತಿ ನೀಡಿ ಸಹಕರಿಸುವುದಾಗಿ ಭರವಸೆ ನೀಡಿದ್ದು, ಈ ಕುರಿತು ಕೇಂದ್ರ ಕಾನೂನು ರೂಪಿಸುವಂತೆಯೂ ಕೋರಿವೆ.

ಸುಪ್ರೀಂಕೋರ್ಟ್ ವಿಚಾರಣೆ: ಇಲ್ಲಿವರೆಗೆ ಏನೇನಾಯ್ತು?

ಮೃತ ವೈದ್ಯೆಯ ಮೆಡಿಕಲ್ ಗಾಯದ ವರದಿಯ ಬಗ್ಗೆ ಪೀಠವು ಕೇಳಿದಾಗ, ಇದು ಕೇಸ್ ಡೈರಿಯ ಭಾಗವಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿಕೊಂಡಿದೆ.

ಅಪರಾಧದ ಸ್ಥಳದಲ್ಲಿ ಬದಲಾವಣೆ ಮಾಡಲಾಗಿದೆ: ಸಿಬಿಐ

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ, ಐದನೇ ದಿನದಲ್ಲಿ ಏಜೆನ್ಸಿ ತನಿಖೆಯನ್ನು ಕೈಗೆತ್ತಿಕೊಂಡಿದೆ. ಅಷ್ಟರಲ್ಲಿ ಅಪರಾಧ ನಡೆದ ಸ್ಥಳದಲ್ಲಿ “ಬದಲಾವಣೆ” ಮಾಡಲಾಗಿದೆ ಎಂದು ಹೇಳಿದ್ದಾರೆ.  “ಎಲ್ಲವನ್ನೂ ವಿಡಿಯೊ ರೆಕಾರ್ಡಿಂಗ್ ಮಾಡಲಾಗಿದೆ” ಎಂಬುದನ್ನು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿದ್ದು ಪ್ರತಿ ಘಟನೆಯ ಟೈಮ್‌ಲೈನ್ ಹೊಂದಿದೆ ಎಂದಿದೆ.

ಅತಿಯಾದ ಕೆಲಸ ಮಾಡುವ ವೈದ್ಯರಿಗೆ ಪ್ರತಿರೋಧ ತೋರಿಸುವ ಶಕ್ತಿಯೂ ಇರುವುದಿಲ್ಲ

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅತಿಯಾದ ಕೆಲಸ ಮಾಡುವ ವೈದ್ಯರನ್ನು “ಯಾರಾದರೂ ಚುಡಾಯಿಸಿದಾಗಲೂ” ವಿರೋಧಿಸುವ ದೈಹಿಕ ಶಕ್ತಿ ಇರುವುದಿಲ್ಲ ಎಂದು ಪ್ರತಿಭಟನಾನಿರತ ವೈದ್ಯರ ಪರ ವಾದಿಸಿದ ವಕೀಲರು ಹೇಳಿದ್ದಾರೆ.

“ನಾವು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿದ್ದೇವೆ, ಯಾರಾದರೂ ಇಲ್ಲದಿದ್ದಾಗ ನಾನು ಆಸ್ಪತ್ರೆಯ ನೆಲದ ಮೇಲೆ ಮಲಗಿದ್ದೇನೆ, ವೈದ್ಯರು 36 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಎಂದು ನಮಗೆ ತಿಳಿದಿದೆ” ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ರಾಷ್ಟ್ರೀಯ ಕಾರ್ಯಪಡೆ ನಿಮ್ಮ ಸಮಸ್ಯೆಯನ್ನು ಆಲಿಸುತ್ತದೆ

ವೃತ್ತಿಪರ ವೈದ್ಯರಿಗೆ ಸುರಕ್ಷತಾ ಕ್ರಮಗಳನ್ನು ಶಿಫಾರಸು ಮಾಡಲು ಸುಪ್ರೀಂಕೋರ್ಟ್ ರಚಿಸಿರುವ ರಾಷ್ಟ್ರೀಯ ಕಾರ್ಯಪಡೆ ನಿಮ್ಮ ಸಮಸ್ಯೆಯನ್ನು ಆಲಿಸಲಿದೆ ಎಂದು ಸಿಜೆಐ ಡಿವೈ ಚಂದ್ರಚೂಡ್ ರೆಸಿಡೆಂಟ್ ವೈದ್ಯರಿಗೆ ಭರವಸೆ ನೀಡಿದ್ದಾರೆ. ಫೆಡರೇಶನ್ ಆಫ್ ಅಸೋಸಿಯೇಷನ್ ಆಫ್ ಮೆಡಿಕಲ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (ಎಫ್‌ಎಐಎಂಎ) ಮತ್ತು ದೆಹಲಿ ಮೆಡಿಕಲ್ ಅಸೋಸಿಯೇಷನ್ ರಾಷ್ಟ್ರೀಯ ಟಾಸ್ಕ್ ಫೋರ್ಸ್‌ಗೆ ರೆಸಿಡೆಂಟ್ ವೈದ್ಯರನ್ನು ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದವು.

ಇದನ್ನೂ ಓದಿ: Kolkata doctor rape-murder: ವೈದ್ಯೆಯ ಅತ್ಯಾಚಾರ ಪ್ರಕರಣ: ಆರ್‌ಜಿ ಕರ್ ಮಾಜಿ ಪ್ರಾಂಶುಪಾಲರ ಪಾಲಿಗ್ರಾಫ್ ಪರೀಕ್ಷೆ ನಡೆಸಲಿದೆಯೇ ಸಿಬಿಐ?

ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಮರಣೋತ್ತರ ಪರೀಕ್ಷೆಯ ಟೈಮ್‌ಲೈನ್ ಮತ್ತು ಅಪರಾಧವನ್ನು ಅಸಹಜ ಸಾವು (ಯುಡಿ) ಎಂದು ದಾಖಲಿಸುವ ಕುರಿತು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

‘ಇದು ಅಸಹಜ ಸಾವಿನ ಪ್ರಕರಣವಲ್ಲವಾದರೆ, ಮರಣೋತ್ತರ ಪರೀಕ್ಷೆಗೆ ಏಕೆ ಸಮಯ ತೆಗೆದುಕೊಂಡಿದ್ದು?. ಮರಣೋತ್ತರ ಪರೀಕ್ಷೆಯು 18: 10 ಕ್ಕೆ ಪ್ರಾರಂಭವಾಗುತ್ತದೆ ಮತ್ತು 19:10 ಕ್ಕೆ ಕೊನೆಗೊಳ್ಳುತ್ತದೆ, 23:30 ಗಂಟೆಗೆ ಯುಡಿ (ಅಸ್ವಾಭಾವಿಕ ಸಾವಿನ ಪ್ರಕರಣ) ನಲ್ಲಿ ನೋಂದಾಯಿಸಿದ್ದೇಕೆ?. 23:30 ಗಂಟೆಗೆ ಥಾಲ ಪೊಲೀಸ್ ಠಾಣೆಯಲ್ಲಿ ಯುಡಿ ಪ್ರಕರಣ ದಾಖಲಾಗಿದ್ದು, 23:40 ಗಂಟೆಗೆ ಎಫ್‌ಐಆರ್ ದಾಖಲಾಗಿದೆ. ಅಸಹಜ ಸಾವು ನೋಂದಣಿಗೆ ಮುಂಚಿತವಾಗಿ ಮರಣೋತ್ತರ ಪರೀಕ್ಷೆಯು ಅಚ್ಚರಿಯೆನಿಸಿದೆ. ಇದು ನಿಜವಾಗಿದ್ದರೆ, ಏನೋ ಒಂದು ಗಂಭೀರವಾದುದು ನಡೆದಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ಮೊದಲ ನಮೂದನ್ನು ದಾಖಲಿಸಿದ ಕೋಲ್ಕತ್ತಾ ಪೊಲೀಸ್ ಅಧಿಕಾರಿಗೆ, ಸಮಯವನ್ನು ಬಹಿರಂಗಪಡಿಸಲು ವಿಚಾರಣೆಯ ಮುಂದಿನ ದಿನಾಂಕದಂದು ಹಾಜರಾಗುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಭೋಜನ ವಿರಾಮದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Thu, 22 August 24

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?