AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ಹುಟ್ಟುಹಬ್ಬದಂದೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕೋಲ್ಕತ್ತಾದಲ್ಲಿ 20 ವರ್ಷದ ಯುವತಿ ಮೇಲೆ ಆಕೆಯ ಹುಟ್ಟುಹಬ್ಬದಂದೇ ಅತ್ಯಾಚಾರ ನಡೆದಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಅಪರಾಧದ ನಂತರ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ.

ಕೋಲ್ಕತ್ತಾ: ಹುಟ್ಟುಹಬ್ಬದಂದೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಆರೋಪಿಗಳುImage Credit source: NDTV
ನಯನಾ ರಾಜೀವ್
|

Updated on: Sep 08, 2025 | 8:05 AM

Share

ಕೋಲ್ಕತ್ತಾ, ಸೆಪ್ಟೆಂಬರ್ 08: ಹುಟ್ಟುಹಬ್ಬವು ಎಂದೂ ಮರೆಯಲಾಗದ ಸಂತಸವನ್ನು ತರುವ ಬದಲು, ಎಂದೂ ಅಳಿಸಲಾಗದ ಕಪ್ಪುಚಿಕ್ಕೆಯನ್ನಿಟ್ಟುಬಿಟ್ಟಿದೆ.  ಹುಟ್ಟುಹಬ್ಬದಂದೇ 20 ವರ್ಷದ ಯುವತಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಅಪರಾಧದ ನಂತರ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಯುವತಿಗೆ ಚಂದನ್​​ ಜತೆ ಸ್ನೇಹವಿತ್ತು. ಹುಟ್ಟು ಹಬ್ಬದ ಪಾರ್ಟಿ ಮಾಡುವ ನೆಪದಲ್ಲಿ ಚಂದನ್ ದೀಪ್ ಮನೆಗೆ ಆಕೆಯನ್ನು ಕರೆದೊಯ್ದಿದ್ದ. ಅಲ್ಲಿ ಅವರು ಊಟ ಮಾಡಿದ್ದರು.

ಆಕೆ ಮನೆಗೆ ಹೋಗುತ್ತೇನೆ ಎಂದು ಹೇಳಿದಾಗ ಆಕೆಯನ್ನು ಆರೋಪಿಗಳು ತಡೆದಿದ್ದಾರೆ. ಬಾಗಿಲನ್ನು ಲಾಕ್ ಮಾಡಿ ಇಬ್ಬರೂ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮರುದಿನ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂತ್ರಸ್ತೆ ಅವರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ.ಅವರು ಘಟನೆಯ ಬಗ್ಗೆ ತಮ್ಮ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು, ಅದರ ನಂತರ ಶನಿವಾರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್ಐಆರ್ದಾಖಲಿಸಲಾಗಿದೆ.

ಯುವತಿ ತನ್ನ ದೂರಿನಲ್ಲಿ ಚಂದನ್ ಜತೆ ಕಳೆದ ಹಲವು ತಿಂಗಳಿನಿಂದ ತನಗೆ ಪರಿಚಯವಿತ್ತು.ದಕ್ಷಿಣ ಕೋಲ್ಕತ್ತಾದ ದೊಡ್ಡ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಚಂದನ್ ತನ್ನನ್ನು ಪರಿಚಯಿಸಿಕೊಂಡಿದ್ದ. ಬಳಿಕ ದೀಪ್ ಪರಿಚಯ ಕೂಡ ಆಗಿತ್ತು. ಮೂವರೂ ಸಂಪರ್ಕದಲ್ಲಿದ್ದರು. ಇಬ್ಬರು ಆರೋಪಿಗಳು ಅವಳನ್ನು ಪೂಜಾ ಸಮಿತಿಯಲ್ಲಿ ಸೇರಿಸುವುದಾಗಿ ಭರವಸೆ ನೀಡಿದ್ದರು.

ಮತ್ತಷ್ಟು ಓದಿ:  ಆರೋಪಿ ಮನೆಗೆ ಅತ್ಯಾಚಾರ ಸಂತ್ರಸ್ತೆಯ ಕಳುಹಿಸಿದ ಅಧಿಕಾರಿಗಳು, ಮತ್ತೆ ಆಕೆಯ ಮೇಲೆ ಅತ್ಯಾಚಾರ

ಜೂನ್ 25 ರಂದು ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜು ಆವರಣದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿತ್ತು. ಕಾಲೇಜಿನ ಹಳೆಯ ವಿದ್ಯಾರ್ಥಿ ಮೋನೋಜಿತ್ ಮಿಶ್ರಾ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ನಂತರ ಅವರನ್ನು ಬಂಧಿಸಲಾಯಿತು. ಅದಕ್ಕೂ ಮುನ್ನ ಕೋಲ್ಕತ್ತಾ ಆರ್​​ಜಿಕರ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್