AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಪ್ರಕರಣ: ಸಂಜಯ್ ರಾಯ್ ಒಪ್ಪಿಗೆ ನೀಡದ ಕಾರಣ ನಾರ್ಕೋ ಪರೀಕ್ಷೆಗಾಗಿರುವ ಸಿಬಿಐ ಕೋರಿಕೆಗೆ ಸಿಕ್ಕಿಲ್ಲ ಅನುಮತಿ

ಆಗಸ್ಟ್ 10 ರಂದು 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ರಾಯ್ ನ್ನ ಶುಕ್ರವಾರ ಮುಚ್ಚಿದ ವಿಚಾರಣೆಗಾಗಿ ಸೀಲ್ದಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಾರ್ಕೋ ಪರೀಕ್ಷೆಗೆ ಒಳಪಡಲು ನಿಮಗೆ ಯಾವುದೇ ಆಕ್ಷೇಪಣೆಗಳಿವೆಯೇ ಎಂದು ನ್ಯಾಯಾಧೀಶರು ವೈಯಕ್ತಿಕವಾಗಿ ರಾಯ್ ಅವರನ್ನು ಕೇಳಿದಾಗ ರಾಯ್ ಅದಕ್ಕೆ ಒಪ್ಪಿಗೆ ಇಲ್ಲ ಎಂದಿದ್ದಾರೆ.

ಕೋಲ್ಕತ್ತಾ ಪ್ರಕರಣ: ಸಂಜಯ್ ರಾಯ್ ಒಪ್ಪಿಗೆ ನೀಡದ ಕಾರಣ ನಾರ್ಕೋ ಪರೀಕ್ಷೆಗಾಗಿರುವ ಸಿಬಿಐ ಕೋರಿಕೆಗೆ ಸಿಕ್ಕಿಲ್ಲ ಅನುಮತಿ
ಸಂಜಯ್ ರಾಯ್
ರಶ್ಮಿ ಕಲ್ಲಕಟ್ಟ
|

Updated on: Sep 13, 2024 | 6:26 PM

Share

ದೆಹಲಿ ಸೆಪ್ಟೆಂಬರ್ 13: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Kolkata rape-murder case) ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ ನಾರ್ಕೋ-ಅನಾಲಿಸಿಸ್ ಪರೀಕ್ಷೆ ನಡೆಸುವಂತೆ ಕೇಂದ್ರೀಯ ತನಿಖಾ ದಳ (CBI) ಮಾಡಿದ ಮನವಿಯನ್ನು ಕೋಲ್ಕತ್ತಾ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ. ನಾರ್ಕೋ ಪರೀಕ್ಷೆಗಾಗಿ (narco test ) ಸಂಜಯ್ ರಾಯ್ ಒಪ್ಪಿಗೆ ನೀಡಿಲ್ಲ, ಹಾಗಾಗಿ ಸಿಬಿಐ ಮನವಿಯನ್ನು ನ್ಯಾಯಾಲಯ ನಿರಾಕರಿಸಿದೆ.

ಆಗಸ್ಟ್ 10 ರಂದು 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ರಾಯ್ ನ್ನ ಶುಕ್ರವಾರ ಮುಚ್ಚಿದ ವಿಚಾರಣೆಗಾಗಿ ಸೀಲ್ದಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಾರ್ಕೋ ಪರೀಕ್ಷೆಗೆ ಒಳಪಡಲು ನಿಮಗೆ ಯಾವುದೇ ಆಕ್ಷೇಪಣೆಗಳಿವೆಯೇ ಎಂದು ನ್ಯಾಯಾಧೀಶರು ವೈಯಕ್ತಿಕವಾಗಿ ರಾಯ್ ಅವರನ್ನು ಕೇಳಿದಾಗ ರಾಯ್ ಅದಕ್ಕೆ ಒಪ್ಪಿಗೆ ಇಲ್ಲ ಎಂದಿದ್ದಾರೆ. ಭಾರತದ ಸರ್ವೋಚ್ಚ ನ್ಯಾಯಾಲಯದ 2010 ರ ತೀರ್ಪಿನ ಅಡಿಯಲ್ಲಿ, ಆರೋಪಿಯ ಸ್ವಯಂಪ್ರೇರಿತ ಒಪ್ಪಿಗೆಯಿಲ್ಲದೆ ನಾರ್ಕೋ-ವಿಶ್ಲೇಷಣೆ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಪರೀಕ್ಷೆಯು ಕಾನೂನುಬದ್ಧ ಸಿಂಧುತ್ವವನ್ನು ಹೊಂದಿರುವಾಗ, ನ್ಯಾಯಾಲಯಗಳು ಅದನ್ನು ನಡೆಸುವ ಸಂದರ್ಭಗಳನ್ನು ಅವಲಂಬಿಸಿ ಸೀಮಿತ ಪ್ರವೇಶವನ್ನು ಮಾತ್ರ ನೀಡುತ್ತವೆ.

ರಾಯ್ ಅವರ ಘಟನೆಗಳ ಆವೃತ್ತಿಯನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಹೇಳಿಕೊಂಡು ಸಿಬಿಐ ಪರೀಕ್ಷೆಗೆ ಅನುಮತಿ ಕೋರಿ ಸೀಲ್ದಾ ನ್ಯಾಯಾಲಯವನ್ನು ಸಂಪರ್ಕಿಸಿತ್ತು.  ಇದು ಪ್ರಾಥಮಿಕವಾಗಿ ರಾಯ್ ಸತ್ಯವನ್ನು ಹೇಳುತ್ತಿದ್ದಾರೆಯೇ ಎಂದು ಪರಿಶೀಲಿಸಲು ಇದನ್ನು ನಡೆಸಲಾಗುತ್ತದೆ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.  ರಾಯ್ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಹಲವರ ಪಾಲಿಗ್ರಾಫ್ ಪರೀಕ್ಷೆಯನ್ನು ಕೇಂದ್ರ ಸಂಸ್ಥೆ ಈಗಾಗಲೇ ನಡೆಸಿತ್ತು.

ನಾರ್ಕೋ ವಿಶ್ಲೇಷಣೆಯನ್ನು ಹೇಗೆ ನಡೆಸಲಾಗುತ್ತದೆ?

ನಾರ್ಕೋ ಪರೀಕ್ಷೆಯ ಸಮಯದಲ್ಲಿ, ಸೋಡಿಯಂ ಪೆಂಟೋಥಾಲ್ ಅನ್ನು ಸಂಮೋಹನ ಸ್ಥಿತಿಗೆ ತರಲು ನೀಡಲಾಗುತ್ತದೆ, ಇದು ಅವರಿಗೆ ಸುಳ್ಳು ಹೇಳಲು ಕಷ್ಟವಾಗುತ್ತದೆ ಎಂದು ಅಧಿಕಾರಿ ವಿವರಿಸಿದರು. “ಹೆಚ್ಚಿನ ಪ್ರಕರಣಗಳಲ್ಲಿ, ಆರೋಪಿಯು ಸತ್ಯವಾದ ಮಾಹಿತಿಯನ್ನು ಒದಗಿಸುತ್ತಾನೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಐಎಎಸ್ ಕೋಚಿಂಗ್ ಸೆಂಟರ್​​ನಲ್ಲಿ 3 ಆಕಾಂಕ್ಷಿಗಳು ಸಾವಿಗೀಡಾದ ಪ್ರಕರಣ; ನಾಲ್ವರಿಗೆ ಜಾಮೀನು

ಆಸ್ಪತ್ರೆಯ ಆವರಣದಲ್ಲಿ ವೈದ್ಯರ ಶವ ಪತ್ತೆಯಾದ ಒಂದು ದಿನದ ನಂತರ, ಆಗಸ್ಟ್ 11 ರಂದು ಕೋಲ್ಕತ್ತಾ ಪೊಲೀಸರು ಸಂಜಯ್ ರಾಯ್ ನ್ನು ಬಂಧಿಸಿದ್ದರು. ನಂತರ ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಪ್ರಕರಣವನ್ನು ಆಗಸ್ಟ್ 23 ರಂದು ಸಿಬಿಐಗೆ ಹಸ್ತಾಂತರಿಸಲಾಯಿತು. ಅದರ ಮುಂದುವರಿದ ತನಿಖೆಯ ಭಾಗವಾಗಿ, ಸಿಬಿಐ ತಂಡವು ಗುರುವಾರ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಮಾತನಾಡಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ವಿಭಾಗಗಳನ್ನು ಪರಿಶೀಲಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್