AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಹತ್ಯೆ ಪ್ರಕರಣ: ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ವಿಚಾರಣೆಯ ಸಂದರ್ಭದಲ್ಲಿ, ವಕೀಲ ವೃಂದಾ ಗ್ರೋವರ್, ಮೃತ ಸಂತ್ರಸ್ತೆಯ ಪೋಷಕರು ಆಕೆಯ ಹೆಸರು ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪದೇ ಪದೇ ಕ್ಲಿಪ್‌ಗಳನ್ನು ಬಹಿರಂಗಪಡಿಸುವುದರಿಂದ ಅಸಮಾಧಾನಗೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು

ಕೋಲ್ಕತ್ತಾ ಹತ್ಯೆ ಪ್ರಕರಣ: ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Sep 30, 2024 | 8:47 PM

Share

ದೆಹಲಿ ಸೆಪ್ಟೆಂಬರ್ 30: ಸಿಸಿಟಿವಿಗಳ ಅಳವಡಿಕೆ ಮತ್ತು ವೈದ್ಯಕೀಯ ಸೌಲಭ್ಯಗಳಲ್ಲಿ ಶೌಚಾಲಯಗಳು ಮತ್ತು ಪ್ರತ್ಯೇಕ ವಿಶ್ರಾಂತಿ ಕೊಠಡಿಗಳ ನಿರ್ಮಾಣದಲ್ಲಿ ಪ್ರಗತಿಯ ವಿಳಂಬ ಕುರಿತು ಸುಪ್ರೀಂಕೋರ್ಟ್ (Supreme court) ಸೋಮವಾರ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ನಡೆಸುತ್ತಿದೆ.

“50% ಕ್ಕಿಂತ ಹೆಚ್ಚಿನ ಕೆಲಸದ ಭಾಗವಿಲ್ಲ, ಪ್ರಕ್ರಿಯೆಯು ಏಕೆ ತಡವಾಗಿದೆ? ನಾವು ಆಗಸ್ಟ್ 9 ರಿಂದ ಮೇಲ್ವಿಚಾರಣೆ ನಡೆಸುತ್ತಿದ್ದೇವೆ, ”ಎಂದು ಸಿಜೆಐ ಕೇಳಿರುವುದಾಗಿ ಕಾನೂನು ವೆಬ್‌ಸೈಟ್ ಲೈವ್‌ಲಾ ವರದಿ ಮಾಡಿದೆ.

ಪಿಟಿಐ ವರದಿಯ ಪ್ರಕಾರ, ಅಕ್ಟೋಬರ್ 15 ರೊಳಗೆ ನಡೆಯುತ್ತಿರುವ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪೀಠವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ವಕೀಲ ವೃಂದಾ ಗ್ರೋವರ್, ಮೃತ ಸಂತ್ರಸ್ತೆಯ ಪೋಷಕರು ಆಕೆಯ ಹೆಸರು ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪದೇ ಪದೇ ಕ್ಲಿಪ್‌ಗಳನ್ನು ಬಹಿರಂಗಪಡಿಸುವುದರಿಂದ ಅಸಮಾಧಾನಗೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸುಪ್ರೀಂಕೋರ್ಟ್ ಈ ವಿಷಯದ ಬಗ್ಗೆ ಈಗಾಗಲೇ ಆದೇಶವನ್ನು ಹೊರಡಿಸಿದೆ. ಆದೇಶವನ್ನು ಜಾರಿಗೊಳಿಸಲು ಕಾನೂನು ಜಾರಿ ಸಂಸ್ಥೆಗಳು ಎಂದು ಹೇಳಿದರು. ಇದು ತನ್ನ ಹಿಂದಿನ ಆದೇಶವನ್ನು ಸ್ಪಷ್ಟಪಡಿಸಿದ್ದು ಇದು ಎಲ್ಲಾ ಮಧ್ಯವರ್ತಿಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದೆ.

‘ಸಿಬಿಐ ತನಿಖೆಯಲ್ಲಿ ಮಹತ್ವದ ಸುಳಿವು ಸಿಕ್ಕಿದೆ’: ಸುಪ್ರೀಂಕೋರ್ಟ್

ವಿಚಾರಣೆಯ ಸಂದರ್ಭದಲ್ಲಿ, ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಮತ್ತು ಹಣಕಾಸಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಯಲ್ಲಿ ಗಣನೀಯ ಸುಳಿವುಗಳು ಹೊರಹೊಮ್ಮಿವೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರ್ ಜಿ ಕರ್ ಆಸ್ಪತ್ರೆಯಲ್ಲಿ ಇನ್ನೂ ಕೆಲಸ ಮಾಡುತ್ತಿರುವವರು ಯಾರ ವಿರುದ್ಧ ಹಣಕಾಸು ಅವ್ಯವಹಾರ ಆರೋಪವಿದೆ,” ಎಂದು ನ್ಯಾಯಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿದ್ದು, ಸೂಕ್ತ ಕ್ರಮಕ್ಕಾಗಿ ರಾಜ್ಯ ಸರ್ಕಾರದೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ಸಿಬಿಐಗೆ ಕೇಳಿದೆ.

ವೈದ್ಯರು ಒಳರೋಗಿ ಮತ್ತು ಒಪಿಡಿ ಕೆಲಸ ಮಾಡುತ್ತಿಲ್ಲ: ಪಶ್ಚಿಮ ಬಂಗಾಳ ಸರ್ಕಾರ

ವಿಚಾರಣೆಯ ಸಂದರ್ಭದಲ್ಲಿ, ಪಶ್ಚಿಮ ಬಂಗಾಳ ಸರ್ಕಾರವು ರೆಸಿಡೆಂಟ್ ವೈದ್ಯರು ಒಳರೋಗಿ ವಿಭಾಗ ಮತ್ತು ಹೊರರೋಗಿ ವಿಭಾಗವನ್ನು ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದೆ. ನಿವಾಸಿ ವೈದ್ಯರ ವಕೀಲೆ ಇಂದಿರಾ ಜೈಸಿಂಗ್ ಅವರು ಸಲ್ಲಿಕೆಯನ್ನು ವಿರೋಧಿಸಿದರು, ಅವರು ಎಲ್ಲಾ ಅಗತ್ಯ ಮತ್ತು ತುರ್ತು ಸೇವೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಕಾರ್ಯಪಡೆಯ ಪ್ರಗತಿಯ ಕುರಿತು ವರದಿ ಸಲ್ಲಿಸುವಂತೆ ಮೆಹ್ತಾ ಅವರಿಗೆ ಸೂಚಿಸಿದ ಸುಪ್ರೀಂ ಕೋರ್ಟ್, ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 14 ಕ್ಕೆ ಮುಂದೂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ