Kolkata rape-murder case: ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಮರಳಲು ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಸೂಚನೆ, ಶಿಸ್ತು ಕ್ರಮದ ಎಚ್ಚರಿಕೆ

"ವೈದ್ಯರು ನಾಳೆ ಸಂಜೆ 5 ಗಂಟೆಗೆ ಅಥವಾ ಅದಕ್ಕಿಂತ ಮೊದಲು ಕರ್ತವ್ಯಕ್ಕೆ ಮರಳದೇ ಇದ್ದರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ಸುರಕ್ಷತೆ ಮತ್ತು ಭದ್ರತೆಯ ಮೇಲಿನ ಎಲ್ಲಾ ದೂರುಗಳನ್ನು ತಕ್ಷಣವೇ ಗಮನಿಸಲಾಗುವುದು. ಆದಾಗ್ಯೂ, ನಿರಂತರವಾಗಿ ಕೆಲಸದಿಂದ ದೂರವಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬಹುದು ಎಂದು ಸಿಜೆಐ ಹೇಳಿದ್ದಾರೆ.

Kolkata rape-murder case: ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಮರಳಲು ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಸೂಚನೆ, ಶಿಸ್ತು ಕ್ರಮದ ಎಚ್ಚರಿಕೆ
ಸುಪ್ರೀಂಕೋರ್ಟ್
Follow us
|

Updated on:Sep 09, 2024 | 2:26 PM

ದೆಹಲಿ ಸೆಪ್ಟೆಂಬರ್ 09: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ( Kolkata’s RG Kar Medical College and Hospital)ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆಯನ್ನು ನಿಲ್ಲಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ಹೇಳಿದ್ದಾರೆ. ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣವನ್ನು ಆಲಿಸಿದ ಸುಪ್ರೀಂಕೋರ್ಟ್ (Supreme Court), ಪ್ರತಿಭಟನಾನಿರತ ವೈದ್ಯರು ಕೆಲಸಕ್ಕೆ ಮರಳದಿದ್ದರೆ, ಪಶ್ಚಿಮ ಬಂಗಾಳ ಸರ್ಕಾರ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ನಾಳೆ (ಮಂಗಳವಾರ) ಸಂಜೆ 5 ಗಂಟೆಯೊಳಗೆ ವೈದ್ಯರು ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳುವುದಿಲ್ಲ ಎಂದು ಸಿಜೆಐ ಚಂದ್ರಚೂಡ್ ತಿಳಿಸಿದ್ದಾರೆ.

“ವೈದ್ಯರು ಕೆಲಸಕ್ಕೆ ಮರಳುವುದನ್ನು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ನಾವು ಅವರಿಗೆ ಸುರಕ್ಷತೆ, ಭದ್ರತೆಯನ್ನು ನೀಡುತ್ತೇವೆ. ಆದರೆ ಅವರು ಕೆಲಸಕ್ಕೆ ಮರಳಿ ಬರಬೇಕು. ವೈದ್ಯರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ತೆಗೆದುಕೊಳ್ಳಬಾರದು ಎಂದು ನಾವು ಹೇಳಿದಾಗ ಶಿಕ್ಷಾರ್ಹ ವರ್ಗಾವಣೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕಪಿಲ್ ಸಿಬಲ್ ಹೇಳಿರುವುದಾಗಿ ಚಂದ್ರಚೂಡ್ ಹೇಳಿದ್ದಾರೆ.

ವೈದ್ಯರ ವಕೀಲರು ಅವರಿಗೆ ಮೂರು ದಿನಗಳು ಬೇಕು ಎಂದು ಹೇಳಿದಾಗ, ಸಿಜೆಐ ಅವರು ಈಗಾಗಲೇ ಅವರಿಗೆ ಎರಡು ದಿನಗಳನ್ನು ನೀಡುತ್ತಿರುವುದಾಗಿ ಹೇಳಿದರು.

“ವೈದ್ಯರು ನಾಳೆ ಸಂಜೆ 5 ಗಂಟೆಗೆ ಅಥವಾ ಅದಕ್ಕಿಂತ ಮೊದಲು ಕರ್ತವ್ಯಕ್ಕೆ ಮರಳದೇ ಇದ್ದರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ಸುರಕ್ಷತೆ ಮತ್ತು ಭದ್ರತೆಯ ಮೇಲಿನ ಎಲ್ಲಾ ದೂರುಗಳನ್ನು ತಕ್ಷಣವೇ ಗಮನಿಸಲಾಗುವುದು. ಆದಾಗ್ಯೂ, ನಿರಂತರವಾಗಿ ಕೆಲಸದಿಂದ ದೂರವಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬಹುದು ಮತ್ತು ಅವರು ಸೇವೆ ಮಾಡಲು ಉದ್ದೇಶಿಸಿರುವ ಸಮುದಾಯದ ಸಾಮಾನ್ಯ ಕಾಳಜಿಯನ್ನು ಅವರು ನಿರ್ಲಕ್ಷಿಸಬಾರದು ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ಬಾರ್ ಆ್ಯಂಡ್ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ಪ್ರತಿಭಟನಾನಿರತ ವೈದ್ಯರ ಮನಸ್ಸಿನಲ್ಲಿ ವಿಶ್ವಾಸ ಮೂಡಿಸಲು ಪಶ್ಚಿಮ ಬಂಗಾಳ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಗಮನಿಸಿದರು.

“ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯಸ್ಥರು ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ವೈದ್ಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಇದರಲ್ಲಿ ಪುರುಷ ಮತ್ತು ಮಹಿಳಾ ವೈದ್ಯರಿಗೆ ವಿಶ್ರಾಂತಿ ಕೊಠಡಿಗಳ ರಚನೆ, ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Mon, 9 September 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ