AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾದಲ್ಲಿ ನದಿಯಡಿಯಲ್ಲಿ ಓಡಲಿದೆ ಮೆಟ್ರೋ, 45 ಸೆಕೆಂಡುಗಳಲ್ಲಿ 520 ಮೀಟರ್​ ದೂರ ಕ್ರಮಿಸುತ್ತೆ, ಇಂದು ಮೋದಿ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಬುಧವಾರದಂದು ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕೋಲ್ಕತ್ತಾದ ಹೌರಾ ಮೈದಾನ ಮತ್ತು ಎಸ್‌ಪ್ಲೇನೇಡ್ ನಡುವೆ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರುತ್ತಿದ್ದಂತೆ, ಭಾರತದ ನದಿಯ ಅಡಿಯಲ್ಲಿರುವ ಮೊದಲ ಸುರಂಗ ಸಂಚಾರಕ್ಕೆ ಮುಕ್ತವಾಗಲಿದೆ. ಕೋಲ್ಕತ್ತಾದ ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಈ ಸುರಂಗವು ಹೌರಾ ಮೈದಾನ್ ಮತ್ತು ಎಸ್ಪ್ಲಾನೇಡ್ ನಡುವಿನ ಎರಡು ನಿಲ್ದಾಣಗಳನ್ನು ಸಂಪರ್ಕಿಸುತ್ತದೆ.

ಕೋಲ್ಕತ್ತಾದಲ್ಲಿ ನದಿಯಡಿಯಲ್ಲಿ ಓಡಲಿದೆ ಮೆಟ್ರೋ, 45 ಸೆಕೆಂಡುಗಳಲ್ಲಿ 520 ಮೀಟರ್​ ದೂರ ಕ್ರಮಿಸುತ್ತೆ, ಇಂದು ಮೋದಿ ಉದ್ಘಾಟನೆ
ಮೆಟ್ರೋ Image Credit source: Holidify
ನಯನಾ ರಾಜೀವ್
|

Updated on: Mar 06, 2024 | 9:09 AM

Share

ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿರುವ ಮೆಟ್ರೋ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ನೀರೊಳಗಿನ ಸುರಂಗವು ಅದ್ಭುತ ಸಾಧನೆ ಎಂದೇ ಹೇಳಬಹುದು. ಇದು ಹೂಗ್ಲಿ ನದಿ ಕೆಳಗೆ 16.6 ಕಿ.ಮೀನಷ್ಟು ವ್ಯಾಪಿಸಿದೆ. ಈ ಮೆಟ್ರೋ ಹೂಗ್ಲಿಯ ಪಶ್ಚಿಮ ದಂಡೆಯಲ್ಲಿರುವ ಪೂರ್ವ ಕರಾವಳಿಯ ಸಾಲ್ಟ್​ ಲೇಕ್ ನಗರಕ್ಕೆ ಸಂಪರ್ಕಿಸುತ್ತದೆ. ಇದು 6 ನಿಲ್ದಾಣಗಳನ್ನು ಹೊಂದಿರುತ್ತದೆ. ಈ ವಿಭಾಗವು 4.8 ಕಿ.ಮೀಗಳಷ್ಟು ಉದ್ದವಾಗಿವೆ. ಕೋಲ್ಕತ್ತಾ ಮೆಟ್ರೋ ಕಾಮಗಾರಿ ಹಲವು ಹಂತಗಳಲ್ಲಿ ನಡೆಯುತ್ತಿವೆ.

1970ರ ದಶಕದಲ್ಲಿ ಕೋಲ್ಕತ್ತಾ ಮೆಟ್ರೋ ಕಾಮಗಾರಿ ಆರಂಭಗೊಂಡಿತ್ತು. ಆದರೆ ಕಳೆದ 10 ವರ್ಷಗಳ ಮೋದಿ ಸರ್ಕಾರದ ಪ್ರಗತಿಯು ಹಿಂದಿನ 40 ವರ್ಷಗಳಿಗಿಂತ ಹೆಚ್ಚು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. ಹೌರಾ ಮೆಟ್ರೋ ನಿಲ್ದಾಣವು ಭಾರತದ ಆಳವಾದ ಮೆಟ್ರೋ ನಿಲ್ದಾಣವಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಏತನ್ಮಧ್ಯೆ, ಕೋಲ್ಕತ್ತಾ ಮೆಟ್ರೋ ಅದನ್ನು ತಯಾರಿಸಲು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದು ಕೇವಲ 45 ಸೆಕೆಂಡುಗಳಲ್ಲಿ 520-ಮೀಟರ್ ದೂರ ಕ್ರಮಿಸಬಲ್ಲದು.

ಕೋಲ್ಕತ್ತಾ ಮೆಟ್ರೋ ಅಧಿಕಾರಿಗಳು ಹೇಳಿದ್ದೇನು? ಮಧ್ಯರಾತ್ರಿ 12 ಗಂಟೆವರೆಗೂ ಕೆಲಸ ಮಾಡಿದ್ದೇವೆ ಎಂದು ಕೋಲ್ಕತ್ತಾ ಮೆಟ್ರೋ ಜನರಲ್ ಮ್ಯಾನೇಜರ್ ಉದಯ್ ಕುಮಾರ್ ರೆಡ್ಡಿ ಹೇಳಿದ್ದಾರೆ. ನಾವು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇವೆ ಆದ್ದರಿಂದ ಜನರು ಸಂತೋಷವಾಗಿರುತ್ತಾರೆ ಎಂದು ಭಾವಿಸುತ್ತೇವೆ. ಸದ್ಯಕ್ಕೆ ನಿತ್ಯ 7 ಲಕ್ಷ ಜನ ಪ್ರಯಾಣಿಸುತ್ತಾರೆ ಎಂದು ನಿರೀಕ್ಷಿಸಿದ್ದೇವೆ ಎಂದರು.

ಮತ್ತಷ್ಟು ಓದಿ: ಬೆಂಗಳೂರು ತುಮಕೂರು ಮೆಟ್ರೋ: ಕಾರ್ಯಸಾಧ್ಯತೆ ಅಧ್ಯಯನಕ್ಕೆ ಬಿಡ್ ಆಹ್ವಾನಿಸಿದ ಬಿಎಂಆರ್​ಸಿಎಲ್

ನೀರೊಳಗಿನ ಮೆಟ್ರೋ ಸುರಂಗ ಮಾರ್ಗದ ಜೊತೆಗೆ, ಪ್ರಧಾನಮಂತ್ರಿಯವರು ಇಂದು ಕೋಲ್ಕತ್ತಾದಲ್ಲಿ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ಮತ್ತು ತರತಲಾ-ಮಜೆರ್ಹತ್ ಮೆಟ್ರೋ ವಿಭಾಗಗಳನ್ನು ಸಹ ಉದ್ಘಾಟಿಸಲಿದ್ದಾರೆ. ಬುಧವಾರ ಮಧ್ಯಾಹ್ನ ಅವರು ಉತ್ತರ 24 ಪರಗಣ ಜಿಲ್ಲೆಯ ಬರಾಸತ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮಂಗಳವಾರ ಸಂಜೆ, ಕೋಲ್ಕತ್ತಾಗೆ ಆಗಮಿಸಿದ ಸ್ವಲ್ಪ ಸಮಯದ ನಂತರ, ಮೋದಿ ಅವರು ರಾಮಕೃಷ್ಣ ಮಠ ಮತ್ತು ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದಜಿ ಮಹಾರಾಜ್ ಅವರು ಚಿಕಿತ್ಸೆ ಪಡೆಯುತ್ತಿರುವ ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನಕ್ಕೆ ತೆರಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ