AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯೆ ಮೇಲೆ ಅತ್ಯಾಚಾರ: ಅರ್ಧ ಗಂಟೆ, ಆ ಮೂರು ಕರೆಗಳು ಪೋಷಕರ ಹೃದಯವನ್ನು ಛಿದ್ರಗೊಳಿಸಿತ್ತು

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ನಡೆದಿದೆ. ಆಕೆ ಸಾಯುವ ದಿನ ರಾತ್ರಿ 11.30ರ ಸುಮಾರಿಗೆ ಪೋಷಕರ ಬಳಿ ಮಾತನಾಡಿದ್ದಳು. ಆದರೆ ಬೆಳಗಾಗುವಷ್ಟರಲ್ಲಿ ಆಕೆಯ ಸಾವಿನ ಸುದ್ದಿ ಕೇಳಿ ಪೋಷಕರು ಕುಸಿದುಬಿದ್ದಿದ್ದರು.

ವೈದ್ಯೆ ಮೇಲೆ ಅತ್ಯಾಚಾರ: ಅರ್ಧ ಗಂಟೆ, ಆ ಮೂರು ಕರೆಗಳು ಪೋಷಕರ ಹೃದಯವನ್ನು ಛಿದ್ರಗೊಳಿಸಿತ್ತು
ವೈದ್ಯರು
ನಯನಾ ರಾಜೀವ್
|

Updated on: Aug 30, 2024 | 9:46 AM

Share

ಅವರದ್ದು ಮಧ್ಯಮ ವರ್ಗದ ಸುಂದರ ಕುಟುಂಬ, ವೈದ್ಯೆಯಾಗುವ ಮೂಲಕ ಇಡೀ ಕುಟುಂಬವೇ ಹೆಮ್ಮೆ ಪಡುವಂತೆ ಮಾಡಿದ್ದ ಮಗಳ ಕಂಡರೆ ಬೆಟ್ಟದಷ್ಟು ಪ್ರೀತಿ. ಕೋಲ್ಕತ್ತಾದಲ್ಲಿ ತಮ್ಮ ಜೀವನವನ್ನು ಸಂತೋಷದಿಂದ ಕಳೆಯುತ್ತಿದ್ದರು. ಆದರೆ ಆಗಸ್ಟ್​ 9ರ ಕರಾಳ ರಾತ್ರಿ ಅವರ ಕನಸ್ಸನ್ನು ಛಿತ್ರಗೊಳಿಸಿತ್ತು. ಆಗಸ್ಟ್ 9ರಂದು ರಾತ್ರಿ 11.30ರ ಸುಮಾರಿಗೆ ತರಬೇತಿ ನಿರತ ವೈದ್ಯೆ ಪ್ರತಿ ದಿನ ಮಾಡುವ ಹಾಗೆಯೇ ತಾಯಿಗೆ ಕರೆ ಮಾಡಿದ್ದಳು. ತುಂಬಾ ಹೊತ್ತು ಮಾತನಾಡಿದ್ದಳು.

ಆಗಸ್ಟ್​ 10ರ ಬೆಳಗ್ಗೆ ಅರ್ಧ ಗಂಟೆಯೊಳಗೆ ಬಂದ ಆ ಮೂರು ಕರೆಗಳು ಅವರ ಹೃದಯವನ್ನು ಛಿದ್ರಗೊಳಿಸಿದ್ದವು. ಕೋಲ್ಕತ್ತಾ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಬೆಳಗ್ಗೆ ಪೋಷಕರಿಗೆ ಮಾಡಿದ ಕರೆಗಳ ಆಡಿಯೊ ಎನ್​ಡಿ ಟಿವಿಗೆ ಲಭ್ಯವಾಗಿದೆ.

ತಮ್ಮ ಮಗಳ ಸಾವಿನ ಸುದ್ದಿ ಕೇಳಿ ಪೋಷಕರು ಅನುಭವಿಸಿದ ಆಘಾತ ಯಾರಿಗೂ ಬೇಡ. ಮಗಳು ಇನ್ನಿಲ್ಲ ಎನ್ನುವ ದುಃಖದ ಜತೆಗೆ ಆಕೆ ಸಂಕಟ, ಚಿತ್ರಹಿಂಸೆ ಅನುಭವಿಸಿ ಸತ್ತಳಲ್ಲ ಎನ್ನುವ ನೋವೇ ಹೆಚ್ಚಾಗಿ ಕಾಡುತ್ತಿದೆ. ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಆರೋಪಿ ಸಂಜಯ್​ ರಾಯ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಾಲಿಗ್ರಾಫ್ ಪರೀಕ್ಷೆ ಕೂಡ ನಡೆದಿದೆ.

ಮೊದಲು ಅತ್ಯಾಚಾರ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾತ ಇದ್ದಕ್ಕಿದ್ದಂತೆ ನಾನು ಅಲ್ಲಿಗೆ ಹೋಗುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎನ್ನುವ ಗೊಂದಲದ ಹೇಳಿಕೆಯನ್ನು ನೀಡಿ ತಾನು ನಿರಪರಾಧಿ ಎಂದು ಹೇಳಿದ್ದಾನೆ.

ಮತ್ತಷ್ಟು ಓದಿ: Kolkata Murder Case: ಕತ್ತಿನಲ್ಲಿ ಬ್ಲೂಟೂತ್​, ಕೈಯಲ್ಲಿ ಹೆಲ್ಮೆಟ್​ ಸೆಮಿನಾರ್​ ರೂಂಗೆ ಹೋಗುತ್ತಿರುವ ಆರೋಪಿ ದೃಶ್ಯ ಸೆರೆ

ಆತ ಹೆಲ್ಮೆಟ್ ಹಿಡಿದು, ಇಯರ್​ಫೋನ್ ಹಾಕಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯ ಮೃತದೇಹದ ಬಳಿ ಬ್ಲೂಟೂತ್ ಕೂಡ ಸಿಕ್ಕಿತ್ತು. ಆ ಪೋಷಕರು ತಮ್ಮ ಮಗಳು ವೈದ್ಯೆಯಾದ ಕನಸಿನ ಜತೆಗೆ ಆಕೆಗೆ ಮದುವೆ ಮಾಡಿ ಒಂದು ಸುಂದರ ಕುಟುಂಬವನ್ನು ಸಿಗುವಂತೆ ಮಾಡುವ ಕನಸ್ಸು ಕಂಡಿದ್ದರು ಎಲ್ಲವೂ ನುಚ್ಚುನೂರಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ