Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯೆಯ ಕೊಲೆ ಪ್ರಕರಣ; ಬಂಗಾಳ ಸರ್ಕಾರವೇ ಹೊಣೆಯಾಗಬೇಕು: ಧರ್ಮೇಂದ್ರ ಪ್ರಧಾನ್

ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನೆಯಾಗಿದೆ. ಕಳೆದ ಗುರುವಾರ ರಾತ್ರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಬಗ್ಗೆ ಮಾತನಾಡಿದ ಪ್ರಧಾನ್, ಕೆಲವು ದಿನಗಳ ಹಿಂದೆ ಜಾದವ್‌ಪುರದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು ಎಂದಿದ್ದಾರೆ.

ವೈದ್ಯೆಯ ಕೊಲೆ  ಪ್ರಕರಣ; ಬಂಗಾಳ ಸರ್ಕಾರವೇ ಹೊಣೆಯಾಗಬೇಕು: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 12, 2024 | 7:43 PM

ಕೊಲ್ಕತ್ತಾ ಆಗಸ್ಟ್ 12:  ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಘೋರ ಅಪರಾಧಗಳಿಗೆ ಬಂಗಾಳ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಸೋಮವಾರ ಹೇಳಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು. ಕಳೆದ ಗುರುವಾರ ರಾತ್ರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಬಗ್ಗೆ ಮಾತನಾಡಿದ ಪ್ರಧಾನ್, ಕೆಲವು ದಿನಗಳ ಹಿಂದೆ ಜಾದವ್‌ಪುರದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು ಎಂದಿದ್ದಾರೆ.

ಈ ಘೋರ ಅಪರಾಧವನ್ನು ನಾವು ಎಷ್ಟು ಬಲವಾಗಿ ಖಂಡಿಸುತ್ತೇವೆ, ಅದು ಸಾಕಾಗುವುದಿಲ್ಲ. ಬಂಗಾಳ ಸರ್ಕಾರವು ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಅದಕ್ಕೆ ಹೊಣೆಗಾರರಾಗಬೇಕು,ಎಂದು ಧರ್ಮೇಂದ್ರ ಪ್ರಧಾನ್ ಹೇಳಿದರು.

ಮಹಿಳಾ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕ್ರೂರವಾಗಿ ಹತ್ಯೆಗೈದ ಆರೋಪಿ ಸಂಜಯ್ ರಾಯ್ ಕೃತ್ಯಗಳ ಬಗ್ಗೆ ಕೋಲ್ಕತ್ತಾ ಪೊಲೀಸರು ರೋಚಕ ವಿವರಗಳನ್ನು ಬಹಿರಂಗಪಡಿಸಿದ್ದಾರೆ.  ರಾಯ್ ಅವರು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು ಎಂದು ನಂಬಲಾಗಿದೆ. ಆತ ತನ್ನ ಬ್ಲೂಟೂತ್ ಹೆಡ್‌ಫೋನ್‌ಗಳನ್ನು ಅಪರಾಧದ ಸ್ಥಳದಲ್ಲಿ ಬಿಟ್ಟುಹೋಗಿದ್ದು ಆರೋಪಿ ಪತ್ತೆಗೆ ಇದು ಸಾಕ್ಷ್ಯವೊದಗಿಸಿತ್ತು

ಸಿಸಿಟಿವಿ ದೃಶ್ಯಾವಳಿಗಳು ಅಪರಾಧದ ಸಮಯದಲ್ಲಿ ಆಸ್ಪತ್ರೆಯಲ್ಲಿ ಆರೋಪಿಗಳ ಉಪಸ್ಥಿತಿಯನ್ನು ಸ್ಥಾಪಿಸಲು ಪೊಲೀಸರಿಗೆ ಸಹಾಯ ಮಾಡಿತು. ಅಪರಾಧದ ಸಾಕ್ಷ್ಯವನ್ನು ಅಳಿಸುವ ಪ್ರಯತ್ನದಲ್ಲಿ, ಆತ ಬಟ್ಟೆಗಳನ್ನು ತೊಳೆದಿದ್ದ ಎಂದು ವರದಿಯಾಗಿದೆ. ಆದರೆ ಪೊಲೀಸರು ರಾಯ್ ಅವರ ಬೂಟುಗಳಲ್ಲಿ ರಕ್ತದ ಗುರುತುಗಳನ್ನು ಗುರುತಿಸಿದರು.

ಕೋಲ್ಕತ್ತಾ ಪೊಲೀಸರು ಆರೋಪಿಯ ಸ್ಮಾರ್ಟ್‌ಫೋನ್‌ನಲ್ಲಿ ಅಶ್ಲೀಲ ವಿಷಯವನ್ನು ಕಂಡುಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ರಾಜ್ಯ ಪೊಲೀಸರು ಪ್ರಕರಣ ಬಗೆಹರಿಸಲು ವಿಫಲರಾದರೆ ಸಿಬಿಐಗೆ ವರ್ಗಾಯಿಸುತ್ತೇವೆ’

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ (ಆಗಸ್ಟ್ 18) ರೊಳಗೆ ಪ್ರಕರಣವನ್ನು ಪರಿಹರಿಸಲು ರಾಜ್ಯ ಪೊಲೀಸರು ವಿಫಲವಾದರೆ ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆಯ ಹತ್ಯೆಯ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಪೊಲೀಸರು ತಪ್ಪಿತಸ್ಥರನ್ನು ಬಂಧಿಸಬೇಕೆಂದು ನಾನು ಬಯಸುತ್ತೇನೆ. ಕೆಲವು ಒಳಗಿನವರು ಇದ್ದಾರೆ. ಭಾನುವಾರದೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಲು ಸಾಧ್ಯವಾಗದಿದ್ದರೆ, ನಾವು ಅದನ್ನು ಸಿಬಿಐಗೆ ನೀಡುತ್ತೇವೆ. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದು ಏನೂ ಇಲ್ಲ. ಆದಾಗ್ಯೂ, ಸಿಬಿಐ ತನಿಖೆಯಲ್ಲಿನ ಯಶಸ್ಸಿನ ಪ್ರಮಾಣವು ಕಡಿಮೆ ಎಂದು ಉತ್ತರ 24 ಪರಗಣ ಜಿಲ್ಲೆಯ ಅವರ ನಿವಾಸದಲ್ಲಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ, ಸಿಬಿಐಗೆ ಒಪ್ಪಿಸಲಾಗುವುದು ಎಂದ ಮಮತಾ

“ನರ್ಸ್‌ಗಳು ಅಲ್ಲಿದ್ದರು, ಆಸ್ಪತ್ರೆಯ ಸ್ವಂತ ಭದ್ರತಾ ಸಿಬ್ಬಂದಿ ಕೂಡ ಅಲ್ಲಿದ್ದರು. ಇದು ಹೇಗೆ ಸಂಭವಿಸಿತು ಎಂಬುದನ್ನು ಅರ್ಥಮಾಡಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ. ಒಳಗಿನಿಂದ ಯಾರೋ ಭಾಗಿಯಾಗಿದ್ದಾರೆಂದು (ಸಂತ್ರಸ್ತ) ಪೋಷಕರು ನನಗೆ ಹೇಳಿದರು. ಪೊಲೀಸರು ಎಲ್ಲರೊಂದಿಗೆ ಮಾತನಾಡುತ್ತಾರೆ” ಎಂದು ಬ್ಯಾನರ್ಜಿ ಹೇಳಿದರು.  ಕೋಲ್ಕತ್ತಾ ಪೊಲೀಸರು ವಿಶ್ವದ ಅತ್ಯುತ್ತಮ ಪೊಲೀಸ್ ಪಡೆ. ಅತ್ಯುತ್ತಮ ಅಧಿಕಾರಿಗೆ ತನಿಖೆಯನ್ನು ವಹಿಸಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ