AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಆಕೆಯ ಕಣ್ಣಲ್ಲಿ ರಕ್ತ ಬಂದಿದ್ದೇಕೆ? ಅಟಾಪ್ಸಿ ವರದಿಯಲ್ಲೇನಿದೆ?

ಕೋಲ್ಕತ್ತಾದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದಂತೆ ಮರಣೋತ್ತರ ವರದಿಯಲ್ಲಿ ಕೆಲವು ವಿಚಾರಗಳು ಬಹಿರಂಗಗೊಂಡಿದೆ. ಆತ ಕನ್ನಡಕಕ್ಕೆ ಗುದ್ದಿದ್ದರಿಂದ ಅದು ಒಡೆದು ಕಣ್ಣಿಗೆ ಚುಚ್ಚಿಕೊಂಡು ಆಕೆಯ ಕಣ್ಣಲ್ಲಿ ರಕ್ತ ಬಂದಿತ್ತು ಎಂದು ಗೊತ್ತಾಗಿದೆ. ಪ್ರಾಥಮಿಕ ಶವ ಪರೀಕ್ಷೆ ವರದಿಯು ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ನಂತರ ಕೊಲೆ ಮಾಡಲಾಗಿದೆ ಎಂಬುದನ್ನು ಸೂಚಿಸಿದ್ದು, ಆತ್ಮಹತ್ಯೆ ಎಂಬುದನ್ನು ತಳ್ಳಿಹಾಕಿದೆ.

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಆಕೆಯ ಕಣ್ಣಲ್ಲಿ ರಕ್ತ ಬಂದಿದ್ದೇಕೆ? ಅಟಾಪ್ಸಿ ವರದಿಯಲ್ಲೇನಿದೆ?
ವೈದ್ಯರ ಪ್ರತಿಭಟನೆ
ನಯನಾ ರಾಜೀವ್
|

Updated on: Aug 13, 2024 | 9:28 AM

Share

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ, ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇನ್ನಷ್ಟು ಗೊಂದಲದ ವಿವರಗಳು ಹೊರಬಿದ್ದಿವೆ. ಅವರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಸಂಜೋಯ್ ರಾಯ್ ಆಕೆಯ ಕನ್ನಡಕ ಒಡೆದು ಹೋಗುವ ಹಾಗೆ ಹೊಡೆದಿದ್ದರಿಂದ ಕನ್ನಡಕದ ಚೂರುಗಳು ಕಣ್ಣುಗಳಿಗೆ ಚುಚ್ಚಿದ್ದವು ಎಂಬುದನ್ನು ಮರಣೋತ್ತರ ವರದಿ ತಿಳಿಸಿದೆ.

ಪ್ರಾಥಮಿಕ ಶವ ಪರೀಕ್ಷೆ ವರದಿಯು ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ನಂತರ ಕೊಲೆ ಮಾಡಲಾಗಿದೆ ಎಂಬುದನ್ನು ಸೂಚಿಸಿದ್ದು, ಆತ್ಮಹತ್ಯೆ ಎಂಬುದನ್ನು ತಳ್ಳಿಹಾಕಿದೆ. ವರದಿಯಲ್ಲಿ ಆಕೆಯ ಕಣ್ಣು ಹಾಗೂ ಬಾಯಿಯಿಂದ ರಕ್ತಸ್ರಾವವಾಗಿದ್ದು, ಮುಖದ ಮೇಲೂ ಗಾಯಗಳಾಗಿದ್ದವು, ಸಂತ್ರಸ್ತೆಯ ಖಾಸಗಿ ಭಾಗಗಳಲ್ಲೂ ರಕ್ತಸ್ರಾವವಾಗಿತ್ತು, ಹೊಟ್ಟೆ, ಎಡಗಾಲು, ಉಂಗುರದ ಬೆರಳು ಮತ್ತು ತುಟಿಗಳಲ್ಲಿ ಗಾಯಗಳಾಗಿದ್ದವು.

ಶುಕ್ರವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ಆರ್​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಆಸ್ಪತ್ರೆ ಆವರಣಕ್ಕೆ ಆಗಾಗ ಬರುತ್ತಿದ್ದ ಸಂಜಯ್ ರಾಯ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ.

ಮತ್ತಷ್ಟು ಓದಿ: ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ, ಸಿಬಿಐಗೆ ಒಪ್ಪಿಸಲಾಗುವುದು ಎಂದ ಮಮತಾ

ಅಪರಾಧ ಎಸಗಿದ ನಂತರ ಆರೋಪಿಯು ಪೊಲೀಸ್ ಬ್ಯಾರಕ್‌ಗೆ ಹೋಗಿ ಶುಕ್ರವಾರ ಬೆಳಗಿನ ಜಾವದವರೆಗೂ ಮಲಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಸಂದರ್ಭದಲ್ಲಿ ಆತ ತನ್ನ ಪತ್ನಿ ಮೇಲೆಯೂ ಹಲ್ಲೆ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತ ಮೂರು ಮದುವೆಯಾಗಿದ್ದಾನೆ. ಆದರೆ ಆ ಸಂಬಂಧ ಕೂಡ ಹೆಚ್ಚು ಕಾಲ ಉಳಿದಿರಲಿಲ್ಲ. ಅವರ ತಾಯಿ ಮಾಲತಿ ರಾಯ್ ಅವರು ಆರೋಪಗಳನ್ನು ತಳ್ಳಿಹಾಕಿದರು, ತಮ್ಮ ಮಗ ಮುಗ್ಧ ಎಂದು ವಾದಿಸಿದ್ದಾರೆ.

ಈ ಪ್ರಕರಣದ ಕುರಿತು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿನ ನಿವಾಸಿ ವೈದ್ಯರು ಸೋಮವಾರ ಪ್ರತಿಭಟನೆ ನಡೆಸಿದರು, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿನವರು ಅನಿರ್ದಿಷ್ಟ ಮುಷ್ಕರ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ