ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಆಕೆಯ ಕಣ್ಣಲ್ಲಿ ರಕ್ತ ಬಂದಿದ್ದೇಕೆ? ಅಟಾಪ್ಸಿ ವರದಿಯಲ್ಲೇನಿದೆ?

ಕೋಲ್ಕತ್ತಾದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದಂತೆ ಮರಣೋತ್ತರ ವರದಿಯಲ್ಲಿ ಕೆಲವು ವಿಚಾರಗಳು ಬಹಿರಂಗಗೊಂಡಿದೆ. ಆತ ಕನ್ನಡಕಕ್ಕೆ ಗುದ್ದಿದ್ದರಿಂದ ಅದು ಒಡೆದು ಕಣ್ಣಿಗೆ ಚುಚ್ಚಿಕೊಂಡು ಆಕೆಯ ಕಣ್ಣಲ್ಲಿ ರಕ್ತ ಬಂದಿತ್ತು ಎಂದು ಗೊತ್ತಾಗಿದೆ. ಪ್ರಾಥಮಿಕ ಶವ ಪರೀಕ್ಷೆ ವರದಿಯು ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ನಂತರ ಕೊಲೆ ಮಾಡಲಾಗಿದೆ ಎಂಬುದನ್ನು ಸೂಚಿಸಿದ್ದು, ಆತ್ಮಹತ್ಯೆ ಎಂಬುದನ್ನು ತಳ್ಳಿಹಾಕಿದೆ.

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಆಕೆಯ ಕಣ್ಣಲ್ಲಿ ರಕ್ತ ಬಂದಿದ್ದೇಕೆ? ಅಟಾಪ್ಸಿ ವರದಿಯಲ್ಲೇನಿದೆ?
ವೈದ್ಯರ ಪ್ರತಿಭಟನೆ

Updated on: Aug 13, 2024 | 9:28 AM

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ, ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇನ್ನಷ್ಟು ಗೊಂದಲದ ವಿವರಗಳು ಹೊರಬಿದ್ದಿವೆ. ಅವರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಸಂಜೋಯ್ ರಾಯ್ ಆಕೆಯ ಕನ್ನಡಕ ಒಡೆದು ಹೋಗುವ ಹಾಗೆ ಹೊಡೆದಿದ್ದರಿಂದ ಕನ್ನಡಕದ ಚೂರುಗಳು ಕಣ್ಣುಗಳಿಗೆ ಚುಚ್ಚಿದ್ದವು ಎಂಬುದನ್ನು ಮರಣೋತ್ತರ ವರದಿ ತಿಳಿಸಿದೆ.

ಪ್ರಾಥಮಿಕ ಶವ ಪರೀಕ್ಷೆ ವರದಿಯು ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ನಂತರ ಕೊಲೆ ಮಾಡಲಾಗಿದೆ ಎಂಬುದನ್ನು ಸೂಚಿಸಿದ್ದು, ಆತ್ಮಹತ್ಯೆ ಎಂಬುದನ್ನು ತಳ್ಳಿಹಾಕಿದೆ. ವರದಿಯಲ್ಲಿ ಆಕೆಯ ಕಣ್ಣು ಹಾಗೂ ಬಾಯಿಯಿಂದ ರಕ್ತಸ್ರಾವವಾಗಿದ್ದು, ಮುಖದ ಮೇಲೂ ಗಾಯಗಳಾಗಿದ್ದವು, ಸಂತ್ರಸ್ತೆಯ ಖಾಸಗಿ ಭಾಗಗಳಲ್ಲೂ ರಕ್ತಸ್ರಾವವಾಗಿತ್ತು, ಹೊಟ್ಟೆ, ಎಡಗಾಲು, ಉಂಗುರದ ಬೆರಳು ಮತ್ತು ತುಟಿಗಳಲ್ಲಿ ಗಾಯಗಳಾಗಿದ್ದವು.

ಶುಕ್ರವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ಆರ್​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಆಸ್ಪತ್ರೆ ಆವರಣಕ್ಕೆ ಆಗಾಗ ಬರುತ್ತಿದ್ದ ಸಂಜಯ್ ರಾಯ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ.

ಮತ್ತಷ್ಟು ಓದಿ: ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ, ಸಿಬಿಐಗೆ ಒಪ್ಪಿಸಲಾಗುವುದು ಎಂದ ಮಮತಾ

ಅಪರಾಧ ಎಸಗಿದ ನಂತರ ಆರೋಪಿಯು ಪೊಲೀಸ್ ಬ್ಯಾರಕ್‌ಗೆ ಹೋಗಿ ಶುಕ್ರವಾರ ಬೆಳಗಿನ ಜಾವದವರೆಗೂ ಮಲಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಸಂದರ್ಭದಲ್ಲಿ ಆತ ತನ್ನ ಪತ್ನಿ ಮೇಲೆಯೂ ಹಲ್ಲೆ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತ ಮೂರು ಮದುವೆಯಾಗಿದ್ದಾನೆ. ಆದರೆ ಆ ಸಂಬಂಧ ಕೂಡ ಹೆಚ್ಚು ಕಾಲ ಉಳಿದಿರಲಿಲ್ಲ. ಅವರ ತಾಯಿ ಮಾಲತಿ ರಾಯ್ ಅವರು ಆರೋಪಗಳನ್ನು ತಳ್ಳಿಹಾಕಿದರು, ತಮ್ಮ ಮಗ ಮುಗ್ಧ ಎಂದು ವಾದಿಸಿದ್ದಾರೆ.

ಈ ಪ್ರಕರಣದ ಕುರಿತು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿನ ನಿವಾಸಿ ವೈದ್ಯರು ಸೋಮವಾರ ಪ್ರತಿಭಟನೆ ನಡೆಸಿದರು, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿನವರು ಅನಿರ್ದಿಷ್ಟ ಮುಷ್ಕರ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us