AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಕೊಲೆ ಪ್ರಕರಣ: ನ್ಯಾಯದ ವಿಷಯ ಸುಪ್ರೀಂಕೋರ್ಟಿಗೆ ಬಿಟ್ಟುಬಿಡಿ; ಪ್ರತಿಭಟನಾನಿರತ ವೈದ್ಯರಿಗೆ ಐಎಂಎ ಒತ್ತಾಯ

ವೈದ್ಯಕೀಯ ವೃತ್ತಿಪರರು ಆಕ್ರೋಶಗೊಂಡಿದ್ದಾರೆ. ರೆಸಿಡೆಂಡ್ ವೈದ್ಯರು ಕೋಪ ಮತ್ತು ತೀವ್ರ ದುಃಖದಿಂದ ರಸ್ತೆಗಿಳಿದರು. 24 ಗಂಟೆಗಳ ಕಾಲ ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿ ಸೇವೆಗಳನ್ನು ಹಿಂಪಡೆಯಲು ಐಎಂಎ ಕರೆ ನೀಡಿದೆ. ತರುವಾಯ, ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದ್ದು ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿದೆ

ಕೋಲ್ಕತ್ತಾ ಕೊಲೆ ಪ್ರಕರಣ: ನ್ಯಾಯದ ವಿಷಯ ಸುಪ್ರೀಂಕೋರ್ಟಿಗೆ ಬಿಟ್ಟುಬಿಡಿ; ಪ್ರತಿಭಟನಾನಿರತ ವೈದ್ಯರಿಗೆ ಐಎಂಎ ಒತ್ತಾಯ
ವೈದ್ಯರ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on: Sep 04, 2024 | 6:25 PM

Share

ದೆಹಲಿ ಸೆಪ್ಟೆಂಬರ್ 04: ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ (Kolkata’s RG Kar Hospital) ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟಿಸುತ್ತಿರುವ ವೈದ್ಯರು ತಮ್ಮ ಕರ್ತವ್ಯವನ್ನು ಪುನರಾರಂಭಿಸುವಂತೆ ಮತ್ತು ನ್ಯಾಯದ ಅನ್ವೇಷಣೆಯನ್ನು ಸುಪ್ರೀಂಕೋರ್ಟ್‌ಗೆ (Supreme Court)  ಬಿಡುವಂತೆ ಭಾರತೀಯ ವೈದ್ಯಕೀಯ ಸಂಘದ (IMA) ಅಧ್ಯಕ್ಷರು ಒತ್ತಾಯಿಸಿದ್ದಾರೆ. “ಆರ್‌ಜಿ ಕರ್‌ನ ವೈದ್ಯೆಯ ತ್ಯಾಗವು ರಾಷ್ಟ್ರದ ಆತ್ಮಸಾಕ್ಷಿಯನ್ನು ಕದಲಿಸಿದೆ. ಅವಳು ಉದಯೋನ್ಮುಖ ವೈದ್ಯೆಯಾಗಿದ್ದಳು. ಕೆಳಮಧ್ಯಮ-ವರ್ಗದ ಪೋಷಕರ ಏಕೈಕ ಹೆಣ್ಣು ಮಗುವಾಗಿದ್ದಳು ಎಂಬ ಅಂಶದ ಮೇಲೆ ಇಡೀ ರಾಷ್ಟ್ರದ ಕೋಪ ಮತ್ತು ಹತಾಶೆಯು ಸಮಾನವಾಗಿದೆ. ಇಡೀ ರಾಷ್ಟ್ರವು ಆಕೆಯನ್ನು ತಮ್ಮ ಮಗಳಾಗಿ ದತ್ತು ತೆಗೆದುಕೊಂಡಿದೆ” ಎಂದು ಐಎಂಎ ಪತ್ರವನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಐಎಂಎ ಅಧ್ಯಕ್ಷರು ಸುಪ್ರೀಂಕೋರ್ಟ್‌ನ ಪ್ರತಿಕ್ರಿಯೆಯ ಮಹತ್ವವನ್ನು ಒತ್ತಿ ಹೇಳಿದ್ದು, ಇಡೀ ವೈದ್ಯಕೀಯ ಸಮುದಾಯವು ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧವಾಗಿರಬೇಕು ಎಂದು ಹೇಳಿದರು.

“ವೈದ್ಯಕೀಯ ವೃತ್ತಿಪರರು ಆಕ್ರೋಶಗೊಂಡಿದ್ದಾರೆ. ರೆಸಿಡೆಂಡ್ ವೈದ್ಯರು ಕೋಪ ಮತ್ತು ತೀವ್ರ ದುಃಖದಿಂದ ರಸ್ತೆಗಿಳಿದರು. 24 ಗಂಟೆಗಳ ಕಾಲ ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿ ಸೇವೆಗಳನ್ನು ಹಿಂಪಡೆಯಲು ಐಎಂಎ ಕರೆ ನೀಡಿದೆ. ತರುವಾಯ, ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದ್ದು ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿದೆ. ಗೌರವಾನ್ವಿತ ನ್ಯಾಯಾಲಯವು ವೈದ್ಯರಿಗೆ ‘ನಮ್ಮನ್ನು ನಂಬಿರಿ. ನ್ಯಾಯ ಮತ್ತು ಔಷಧ ನಿಲ್ಲಬಾರದು’ ಎಂದು ಹೇಳಿರುವುದಾಗಿ ಐಎಂಎ ಪತ್ರದಲ್ಲಿ ಹೇಳಿದೆ.

“ಭಾರತದ ನಾಗರಿಕರಾಗಿ, ಗೌರವಾನ್ವಿತ ನ್ಯಾಯಾಲಯವು ನೀಡಿದ ಮಾತಿಗೆ ಇಡೀ ವೈದ್ಯ ಸಮೂಹ ಬದ್ಧವಾಗಿರಬೇಕು. ರೋಗಿಗಳ ಆರೈಕೆ ಮತ್ತು ಸುರಕ್ಷತೆಯು ವೈದ್ಯಕೀಯ ವೃತ್ತಿಯ ಪ್ರಧಾನ ಕಾಳಜಿಯಾಗಿದೆ. ಆಧುನಿಕ ಔಷಧದ ಎಲ್ಲಾ ವೈದ್ಯರು ನ್ಯಾಯದ ವಿಷಯವನ್ನು ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್‌ಗೆ ಬಿಟ್ಟು ರೋಗಿಗಳ ಆರೈಕೆಗೆ ಮರಳಬೇಕು ”ಎಂದು ಪತ್ರ ಹೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ ಮುನ್ನ ಎಂವಿಎ ಸಿಎಂ ಅಭ್ಯರ್ಥಿಯನ್ನು ಘೋಷಿಸುತ್ತಿಲ್ಲ: ಶರದ್ ಪವಾರ್

ಸಂತ್ರಸ್ತರಿಗೆ ನ್ಯಾಯ ಮತ್ತು ಆರೋಗ್ಯ ವೃತ್ತಿಪರರಿಗೆ ಸುಧಾರಿತ ಭದ್ರತಾ ಕ್ರಮಗಳನ್ನು ಒತ್ತಾಯಿಸಿ ವಿವಿಧ ರಾಜ್ಯಗಳಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.  ಈ ಘಟನೆಯಿಂದ ಬಿಜೆಪಿ ಮತ್ತು ರಾಜ್ಯ ಸರ್ಕಾರದ ನಡುವೆ ಘರ್ಷಣೆ ಉಂಟಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಕರೆ ನೀಡಿದೆ.

ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ, ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!