AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಅತ್ಯಾಚಾರ, ಕೊಲೆ ಪ್ರಕರಣ: ಪರ್ಸನಲ್ ಡೈರಿಯ ಹರಿದ ಹಾಳೆಯಲ್ಲಿ ಏನಿರಬಹುದು?

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಹಾಗೂ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದ್ದು, ಈ ಕುರಿತು ತನಿಖೆ ಮುಂದುವರೆದಿದೆ. ಮೃತ ವಿದ್ಯಾರ್ಥಿನಿ ಪಕ್ಕದಲ್ಲಿ ಪರ್ಸನಲ್ ಡೈರಿಯೊಂದು ಕಂಡುಬಂದಿದ್ದು, ಅದರ ಕೆಲವು ಹಾಳೆಗಳನ್ನು ಹರಿಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೋಲ್ಕತ್ತಾ ಅತ್ಯಾಚಾರ, ಕೊಲೆ ಪ್ರಕರಣ: ಪರ್ಸನಲ್ ಡೈರಿಯ ಹರಿದ ಹಾಳೆಯಲ್ಲಿ ಏನಿರಬಹುದು?
Image Credit source: Timesnow
ನಯನಾ ರಾಜೀವ್
|

Updated on: Aug 18, 2024 | 8:49 AM

Share

ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಎದ್ದಿವೆ. ಮೃತದೇಹದ ಬಳಿ ಬಿದ್ದಿರುವ ಡೈರಿ ಬಗ್ಗೆ ಅನುಮಾನ ಮೂಡಿದೆ, ಅದೇ ಪ್ರಮುಖ ಸಾಕ್ಷ್ಯವಾಗಬಹುದು ಎಂದು ಹೇಳಲಾಗುತ್ತಿದೆ.

ಈ ಡೈರಿಯ ಹಲವು ಪುಟಗಳು ಹರಿದಿದ್ದು, ಈ ಕಾರಣದಿಂದ ಡೈರಿಯ ಆ ಪುಟಗಳಲ್ಲಿ ಏನಾದರೂ ಗಹನ ರಹಸ್ಯ ಅಡಗಿದೆಯೇ, ಉದ್ದೇಶಪೂರ್ವಕವಾಗಿ ಹರಿದು ಹಾಕಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಡೈರಿಯ ಹರಿದ ಪುಟಗಳು ಹಲವು ಅನುಮಾನಗಳನ್ನು ಹುಟ್ಟುಹಾಕುತ್ತಿದ್ದು, ತನಿಖೆ ನಡೆಯುತ್ತಿದೆ.

ವಾಸ್ತವವಾಗಿ ಕೋಲ್ಕತ್ತಾ ಪೊಲೀಸರು ಸಿಬಿಐಗೆ ಡೈರಿಯನ್ನು ಹಸ್ತಾಂತರಿಸಿದ್ದಾರೆ. ಮೂಲಗಳ ಪ್ರಕಾರ, ಮಹಿಳಾ ವೈದ್ಯೆಯ ಮೃತದೇಹದ ಬಳಿ ಈ ಡೈರಿ ಪತ್ತೆಯಾಗಿದೆ. ಈ ಡೈರಿಯ ಹಲವು ಪುಟಗಳು ಹರಿದಿವೆ ಎಂದು ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಕರ್ತವ್ಯ ನಿರ್ವಹಿಸುವ ವೈದ್ಯರು ಡೈರಿಯಲ್ಲಿ ಔಷಧಿಗಳ ಹೆಸರು ಮತ್ತು ಇತರ ಪ್ರಮುಖ ವಿಷಯಗಳನ್ನು ಬರೆಯುತ್ತಾರೆ ಎಂದು ಹೇಳಲಾಗುತ್ತಿದೆ .

ಮತ್ತಷ್ಟು ಓದಿ: ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ರಾಜೀನಾಮೆಗೆ ನಿರ್ಭಯಾ ತಾಯಿ ಒತ್ತಾಯ

ಆದಾಗ್ಯೂ, ಸಿಬಿಐ ಈ ಬಗ್ಗೆ ಜಾಗೃತವಾಗಿದೆ ಮತ್ತು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದೆ. ಏತನ್ಮಧ್ಯೆ, ಈ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಆರೋಪಿ ಸಂಜಯ್ ರಾಯ್ ಅವರ ಮಾನಸಿಕ ವಿಶ್ಲೇಷಣೆಯನ್ನು ಸಿಬಿಐ ತಂಡ ಇಂದು ನಡೆಸಲಿದೆ. ಈ ಪ್ರಕರಣದಲ್ಲಿ ಆರ್‌ಜಿ ಕರ್‌ನ ಮಾಜಿ ಪ್ರಾಂಶುಪಾಲರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಕೋಲ್ಕತ್ತಾದ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ಸಿಜಿಒ ಕಾಂಪ್ಲೆಕ್ಸ್ ಕಚೇರಿಯಲ್ಲಿ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಂಸ್ಥೆ ಸತತ ಎರಡನೇ ದಿನ ವಿಚಾರಣೆ ನಡೆಸಿತು.

ವಾಸ್ತವವಾಗಿ, ಮಹಿಳಾ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಹೊರತಾಗಿಯೂ, ಆಸ್ಪತ್ರೆಯು ಆಕೆಯ ಕುಟುಂಬಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದು ಏಕೆ ಎಂಬುದಕ್ಕೆ ಸಿಬಿಐ ಉತ್ತರವನ್ನು ಹುಡುಕುತ್ತಿದೆ.

ಪೊಲೀಸರಿಗೆ ಕರೆ ಮಾಡಲು ವಿಳಂಬವಾಗಲು ಕಾರಣಗಳ ಬಗ್ಗೆ ಘೋಷ್ ಅವರನ್ನು ಪದೇ ಪದೇ ಪ್ರಶ್ನಿಸಲಾಗುತ್ತಿದೆ. ಮಾನಸಿಕ ತಜ್ಞರ ತಂಡ ಭಾನುವಾರ ಕೋಲ್ಕತ್ತಾ ತಲುಪಲಿದೆ. ಸಿಬಿಐ ತಂಡ ಶನಿವಾರ ರಾಯ್ ಅವರ ನಿವಾಸವನ್ನು ತಲುಪಿ ಕೆಲವು ವಸ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ