AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koovagam Festival: ಮದುವೆಯಾಗಿ ಅದೇ ದಿನ ವಿಧವೆಯರಾಗ್ತಾರೆ ಈ ಮಂಗಳಮುಖಿಯರು, ಏನಿದು ಸಂಪ್ರದಾಯ?

ತಮಿಳುನಾಡಿನ ಕೂವಾಗಂನಲ್ಲಿ ಅರವಾನ್‌ ಎಂಬ ಮಂಗಳಮುಖಿಯರ ವರ್ಷದ ಏಕೈಕ ಧಾರ್ಮಿಕ ವಿಶೇಷ ಆಚರಣೆ ನಡೆಯುತ್ತೆ. ಈ ಹಬ್ಬ ಹಿಂದೆ 18 ದಿನಗಳ ಕಾಲ ನಡೆಯುತ್ತಿತ್ತು. ಆದರೆ ಈಗ ಮೂರು ದಿನಕ್ಕೆ ಸೀಮಿತವಾಗಿದೆ. ಈ ಹಬ್ಬದ ಆಚರಣೆಯ ಕೊನೆಯ ದಿನ ಮಂಗಳಮುಖಿಯರಿಗೆ ಪೂಜಾರಿ ತಾಳಿ ಕಟ್ಟುತ್ತಾರೆ. ಅದೇ ದಿನ ಸಂಜೆ ತಾಳಿಯನ್ನು ತೆಗೆದು ವಿಧವೆ ಮಾಡಲಾಗುತ್ತೆ. ಈ ಹಬ್ಬದಲ್ಲಿ ಭಾಗವಹಿಸಲು ದೇಶ-ವಿದೇಶದಿಂದ ಮಂಗಳಮುಖಿಯರ ದಂಡೇ ಇಲ್ಲಿಗೆ ಹರಿದುಬರುತ್ತೆ.

Koovagam Festival: ಮದುವೆಯಾಗಿ ಅದೇ ದಿನ ವಿಧವೆಯರಾಗ್ತಾರೆ ಈ ಮಂಗಳಮುಖಿಯರು, ಏನಿದು ಸಂಪ್ರದಾಯ?
ಮದುವೆಯಾಗಿ ಅದೇ ದಿನ ವಿಧವೆಯರಾಗ್ತಾರೆ ಈ ಮಂಗಳಮುಖಿಯರು, ಏನಿದು ಸಂಪ್ರದಾಯ?
ಆಯೇಷಾ ಬಾನು
ಆಯೇಷಾ ಬಾನು|

Updated on: May 12, 2024 | 11:41 AM

Share

ಇತ್ತ ಸಂಪೂರ್ಣ ಪುರುಷರೂ ಅಲ್ಲದೆ, ಸ್ತ್ರೀಯೂ ಅಲ್ಲದೆ ಅವಮಾನ, ತಿರಸ್ಕಾರ, ಸಮಾಜದಿಂದಲೇ ಪ್ರತ್ಯೇಕವಾಗಿ ಬದುಕುತ್ತಿರುವ ಮಂಗಳಮುಖಿಯರ ಜೀವನದ ಬಗ್ಗೆ ಯಾರೂ ಊಹಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಆಚಾರ-ವಿಚಾರಗಳಲ್ಲಿ ಬಹಳಷ್ಟು ನಿಗೂಢತೆಯನ್ನು ಕಾಪಾಡಿಕೊಂಡು ಬಂದಿರುವ ಇವರ ಬಗ್ಗೆ ಜನರಲ್ಲಿ ಅನೇಕ ಗೊಂದಲ, ಕುತೂಹಲಗಳಿವೆ. ಸಾಕ್ಷಾತ್ ಪರಶಿವನ ಅವತಾರ ಎನ್ನಲಾಗುವ ಮಂಗಳಮುಖಿಯರನ್ನು ಸಮಾಜ ತೀರಾ ಹೀನಾಯವಾಗಿ ನಡೆಸಿಕೊಳ್ಳುತ್ತೆ. ನಪುಂಸಕ, ಚಕ್ಕ, ಕೋಜಾ, ಹಿಜ್ರಾ, ದ್ವಿಲಿಂಗಿ, ಶಿಖಂಡಿ ಹೀಗೆ ನಾನಾ ಹೆಸರುಗಳಿಂದ ಕರೆದು ಅವಮಾನಿಸುವುದನ್ನು ನಾವು ಕಂಡಿದ್ದೇವೆ. ಆದರೆ ಇಲ್ಲೊಂದು ಸ್ಥಳದಲ್ಲಿ ಮಾತ್ರ ಮಂಗಳಮುಖಿಯರಿಗೆ ಯಾವುದೇ ನಿರ್ಬಂಧನೆಗಳು, ಕಟ್ಟುಪಾಡುಗಳಿರುವುದಿಲ್ಲ. ಹೆಣ್ಮಕ್ಕಳನ್ನೇ ಮೀರಿಸುವಂತೆ ಅಲಂಕಾರ ಮಾಡಿಕೊಂಡು ಜಪ್ಪಾಳೆ ತಟ್ಟುತ್ತ, ಹಾಡು ಹಾಡುತ್ತ ನಲಿದು ಕುಪ್ಪಳಿಸುತ್ತಾರೆ. ಮಾಂಗಲ್ಯ ಕಟ್ಟಿಸಿಕೊಂಡು ಮದುವೆಯಾಗಿ ಸಂಭ್ರಮಿಸುತ್ತಾರೆ. ಆದರೆ ಅದೇ ದಿನ ತಾಳಿ ಕಿತ್ತು ವಿಧವೆಯರಾಗಿ ಶೋಕದಲ್ಲಿ ಮುಳುಗಿ ಮಿಂದೇಳುತ್ತಾರೆ. ಇಡೀ ಊರಲ್ಲಿ ಜಾತ್ರೆಯ ವಾತಾವರಣ ಕಳೆಗಟ್ಟಿರುತ್ತೆ. ತಮಟೆ, ವಾಲಗದ ಸದ್ದು ಮೇಲೈಸುತ್ತಿರುತ್ತೆ. ಬಣ್ಣ ಬಣ್ಣದ ಸೀರೆ ತೊಟ್ಟು ಡಜನ್ ಗಟ್ಟಲೆ ಬಳೆ, ಹೂ ಮುಡಿದು, ಕಣ್ಣನ್ನು ಕುಕ್ಕುವಂತೆ ಆಭರಣ ಧರಿಸಿ, ಕಣ್ಣಿಗೆ ಗೂಲಿಂಗ್ ಕ್ಲಾಸ್ ಹಾಕಿಕೊಂಡು ನಡು ಬೀದಿಯಲ್ಲೇ ಚಪ್ಪಾಳೆ ತಟ್ಟುತ್ತ ಹೆಜ್ಜೆ ಹಾಕುವ ಮಂಗಳಮುಖಿಯರು. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಈ ರೀತಿಯ ದೃಶ್ಯ ಕಾಣಲು ಸಿಗೋದು ತಮಿಳುನಾಡಿನ ಕೂವಾಗಂನಲ್ಲಿ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ 25 ಕಿ.ಮೀ ದೂರದಲ್ಲಿರುವ ಚಿಕ್ಕ ಗ್ರಾಮ ಕೂವಾಗಂ. ಈ ಗ್ರಾಮವನ್ನು ನಿದ್ದೆಯ ಊರು ಎಂದು ಕರೆಯಲಾಗುತ್ತೆ. ಈ ಗ್ರಾಮಕ್ಕೆ ಜೀವಕಳೆ ಬರುವುದೇ ಮಂಗಳಮುಖಿಯರ ಅರವಾನ್ ಹಬ್ಬ ಶುರುವಾದಾಗ. ಇಲ್ಲಿ ಮಂಗಳಮುಖಿಯರು ವರ್ಷದ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ