AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ಹೆದ್ದಾರಿಯ ಹೋಟೆಲ್​ ಬಳಿ ಕೊಯ್ತಾ ಗ್ಯಾಂಗ್​ ಲೀಡರ್​ ಅವಿನಾಶ್​ ಧನ್ವೆಯನ್ನು ಗುಂಡಿಕ್ಕಿ ಹತ್ಯೆ

ಪುಣೆ-ಸೋಲಾಪುರ ಹೆದ್ದಾರಿಯ ಹೋಟೆಲ್​ ಬಳಿ ದುಷ್ಕರ್ಮಿಗಳು ಕೊಯ್ತಾ ಗ್ಯಾಂಗ್​ ಲೀಡರ್​ ಅವಿನಾಶ್​ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಊಟ ಮಾಡುತ್ತಿದ್ದಾಗ ಐವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಪುಣೆ: ಹೆದ್ದಾರಿಯ ಹೋಟೆಲ್​ ಬಳಿ ಕೊಯ್ತಾ ಗ್ಯಾಂಗ್​ ಲೀಡರ್​ ಅವಿನಾಶ್​ ಧನ್ವೆಯನ್ನು ಗುಂಡಿಕ್ಕಿ ಹತ್ಯೆ
ಕೊಯ್ತಾ ಗ್ಯಾಂಗ್​ ಲೀಡರ್ ಹತ್ಯೆ
ನಯನಾ ರಾಜೀವ್
|

Updated on: Mar 18, 2024 | 2:05 PM

Share

ಕೊಯ್ತಾ ಗ್ಯಾಂಗ್​ ಲೀಡರ್​ ಅವಿನಾಶ್​ ಧನ್ವೆಯನ್ನು ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಹೋಟೆಲ್​ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವಿನಾಶ್ ಇಂದಾಪುರ ಬಳಿಯ ಪುಣೆ-ಸೋಲಾಪುರ ಹೆದ್ದಾರಿಯಲ್ಲಿರುವ ರಸ್ತೆ ಬದಿಯ ಹೋಟೆಲ್​ನಲ್ಲಿ ಇತರ ಮೂವರೊಂದಿಗೆ ಊಟ ಮಾಡುತ್ತಿದ್ದಾಗ ಜನರ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ. ಮೃತರನ್ನು ಆಳಂದಿ ಮೂಲದ ಅವಿನಾಶ ಬಾಲು ಧನ್ವೆ (34) ಎಂದು ಗುರುತಿಸಲಾಗಿದೆ.

ನಗರದಿಂದ ಸುಮಾರು 150 ಕಿಮೀ ದೂರದಲ್ಲಿರುವ ಪುಣೆ-ಸೋಲಾಪುರ ರಸ್ತೆಯಲ್ಲಿರುವ ಜಗದಂಬಾ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಇಂದಾಪುರ ಪೊಲೀಸರ ಪ್ರಕಾರ, ಧನ್ವೆ ತನ್ನ ಮೂರ್ನಾಲ್ಕು ಸಹಚರರೊಂದಿಗೆ ಭೂ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಢರಪುರಕ್ಕೆ ತೆರಳುತ್ತಿದ್ದ.

ಸಂಜೆ ಇಂದಾಪುರ ಬಳಿಯ ಪುಣೆ-ಸೋಲಾಪುರ ರಸ್ತೆಯಲ್ಲಿರುವ ಜಗದಂಬಾ ಹೋಟೆಲ್‌ನಲ್ಲಿ ತಂಗಿದ್ದರು. ಇಬ್ಬರು ಆರೋಪಿಗಳು ಬಂದೂಕುಗಳನ್ನು ಮರೆಮಾಚುವ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಹೊಟೇಲ್ ಒಳಗೆ ಪ್ರವೇಶಿಸಿದ್ದಾರೆ. ಯಾವುದೇ ಭಯವಿಲ್ಲದೆ ಅವರು ಧನ್ವೆ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ.

ಮತ್ತಷ್ಟು ಓದಿ: ಜೋರು ಸೌಂಡ್​ ಇಟ್ಟು ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

ಗುಂಡು ಹಾರಿಸಿದ ನಂತರ ಐದರಿಂದ ಆರು ಮಂದಿ ಒಳ ನುಗ್ಗಿ ಕೊಯ್ತ ಮತ್ತಿತರ ಕಬ್ಬಿಣದ ಆಯುಧಗಳಿಂದ ಧನ್ವೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹೋಟೆಲ್ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ದಾಖಲಾಗಿದೆ.

ಪ್ರಕರಣದ ಆರೋಪಿಗಳ ಪತ್ತೆಗೆ ಪುಣೆ ಗ್ರಾಮಾಂತರ ಪೊಲೀಸರು ಐದು ತಂಡಗಳನ್ನು ರಚಿಸಿದ್ದಾರೆ. ಸಂಬಂಧಿತ ಸೆಕ್ಷನ್‌ಗಳಡಿ ಇಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ