AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಭೂಮಿ ವಿವಾದ: ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಅಲಹಾಬಾದ್ ಹೈಕೋರ್ಟ್ ನಮ್ಮ ಅರ್ಜಿಯನ್ನು ವಕೀಲ ಕಮಿಷನರ್ ಮೂಲಕ (ಶಾಹಿ ಈದ್ಗಾ ಮಸೀದಿ) ಸಮೀಕ್ಷೆಗೆ ಕೋರಿದ ಅರ್ಜಿಯನ್ನು ಅನುಮತಿಸಿದೆ. ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುತ್ತದೆ ಎಂದು ಕೃಷ್ಣ ಜನ್ಮಭೂಮಿ ಪ್ರಕರಣದ ಕುರಿತು ಮಾತನಾಡಿದ  ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಕೃಷ್ಣ ಜನ್ಮಭೂಮಿ ವಿವಾದ: ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ಮಥುರಾದ ಶಾಹಿ ಈದ್ಗಾ ಮಸೀದಿ
ರಶ್ಮಿ ಕಲ್ಲಕಟ್ಟ
|

Updated on:Dec 14, 2023 | 3:32 PM

Share

ಪ್ರಯಾಗರಾಜ್ ಡಿಸೆಂಬರ್ 14: ಮಥುರಾದ ಶ್ರೀಕೃಷ್ಣ ಜನ್ಮಭೂಮಿ ದೇಗುಲದ (Krishna Janam Bhoomi )ಪಕ್ಕದಲ್ಲಿರುವ ಶಾಹಿ ಈದ್ಗಾ ಆವರಣದ ಸಮೀಕ್ಷೆಗೆ ನ್ಯಾಯಾಲಯದ ನಿಗಾದಲ್ಲಿರುವ ಅಡ್ವೋಕೇಟ್ ಕಮಿಷನರ್‌ರನ್ನು ನೇಮಿಸುವಂತೆ ಕೋರಿ ಸಲ್ಲಿಸಿರುವ ಮನವಿಯ ಮೇರೆಗೆ ಮಥುರಾದ ಶಾಹಿ ಈದ್ಗಾ ಮಸೀದಿಯನ್ನು(Shahi Idagh Mosque) ಪರಿಶೀಲಿಸಲು ಆಯೋಗವನ್ನು ನೇಮಿಸಲು ಅಲಹಾಬಾದ್ ಹೈಕೋರ್ಟ್(Allahabad High Court) ಗುರುವಾರ ಅನುಮತಿ ನೀಡಿದೆ.

ಶ್ರೀ ಕೃಷ್ಣನ ಜನ್ಮಸ್ಥಳವು ಮಸೀದಿಯ ಕೆಳಗೆ ಇದೆ ಮತ್ತು ಮಸೀದಿಯು ಹಿಂದೂ ದೇವಾಲಯವಾಗಿದೆ ಎಂದು ಸ್ಥಾಪಿಸುವ ಹಲವಾರು ಚಿಹ್ನೆಗಳು ಅಸ್ತಿತ್ವದಲ್ಲಿವೆ ಎಂದು ಆರೋಪಿಸಿ ಭಗವಾನ್ ಶ್ರೀಕೃಷ್ಣ ವಿರಾಜಮಾನ ಮತ್ತು ಇತರ ಏಳು ಮಂದಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರು ಅನುಮತಿಸಿದರು.

ಈ ಹಿಂದೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಕೃಷ್ಣ ಜನ್ಮಭೂಮಿ ಪ್ರಕರಣದ ಕುರಿತು ಮಾತನಾಡಿದ  ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ,”ಅಲಹಾಬಾದ್ ಹೈಕೋರ್ಟ್ ನಮ್ಮ ಅರ್ಜಿಯನ್ನು ವಕೀಲ ಕಮಿಷನರ್ ಮೂಲಕ (ಶಾಹಿ ಈದ್ಗಾ ಮಸೀದಿ) ಸಮೀಕ್ಷೆಗೆ ಕೋರಿದ ಅರ್ಜಿಯನ್ನು ಅನುಮತಿಸಿದೆ. ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುತ್ತದೆ. ನ್ಯಾಯಾಲಯ ಶಾಹಿ ಈದ್ಗಾ ಮಸೀದಿಯ ವಾದವನ್ನು ತಳ್ಳಿಹಾಕಿದೆ.ಶಾಹಿ ಈದ್ಗಾ ಮಸೀದಿಯಲ್ಲಿ ಹಿಂದೂ ದೇವಾಲಯದ ಸಾಕಷ್ಟು ಚಿಹ್ನೆಗಳು ಮತ್ತು ಕುರುಹುಗಳು ಇವೆ ಎಂಬುದು ನನ್ನ ಬೇಡಿಕೆಯಾಗಿತ್ತು, ವಾಸ್ತವಿಕ ಸ್ಥಾನವನ್ನು ತಿಳಿಯಲು, ವಕೀಲ ಕಮಿಷನರ್ ಅಗತ್ಯವಿದೆ, ಇದು ನ್ಯಾಯಾಲಯದ ಮಹತ್ವದ ತೀರ್ಪು ಎಂದು ಹೇಳಿದ್ದಾರೆ.

ಅರ್ಜಿದಾರರು, ನ್ಯಾಯಾಲಯದ ಮೇಲ್ವಿಚಾರಣೆಯ ವಕೀಲ ಕಮಿಷನರ್ ನೇಮಕವನ್ನು ಕೋರಿ, ಹಿಂದೂ ದೇವಾಲಯಗಳ ವಿಶಿಷ್ಟವಾದ ಕಮಲದ ಆಕಾರದ ಸ್ತಂಭವಿದೆ ಮತ್ತು ಶ್ರೀಕೃಷ್ಣನನ್ನು ರಕ್ಷಿಸಿದ ಹಿಂದೂ ದೇವತೆಗಳಲ್ಲಿ ಒಂದಾದ ‘ಶೇಷನಾಗ್’ನ ಚಿತ್ರವಿದೆ ಎಂದು ಸಲ್ಲಿಸಿದರು. ಅವನ ಜನನದ ರಾತ್ರಿ ಮತ್ತು ಈ ಎಲ್ಲಾ ಚಿಹ್ನೆಗಳು ಹಿಂದೂ ದೇವಾಲಯವು ಅಸ್ತಿತ್ವದಲ್ಲಿದೆ ಎಂದು ಸ್ಥಾಪಿಸುತ್ತದೆ. ಮಸೀದಿಯ ಕಂಬದ ಬುಡದಲ್ಲಿ ಹಿಂದೂ ಧಾರ್ಮಿಕ ಚಿಹ್ನೆಗಳು ಮತ್ತು ಕೆತ್ತನೆಗಳು ಸಹ ಗೋಚರಿಸುತ್ತವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನಿಗದಿತ ಅವಧಿಯೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ನಿರ್ದಿಷ್ಟ ನಿರ್ದೇಶನಗಳೊಂದಿಗೆ ಆಯೋಗವನ್ನು ನೇಮಿಸಬೇಕು.ಸಮೀಕ್ಷೆಯ ಸಂಪೂರ್ಣ ಪ್ರಕ್ರಿಯೆಗಳ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ: Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಮೊಕದ್ದಮೆಯಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಪರಿಹಾರಗಳನ್ನು ಕೋರಿ ಮಥುರಾ ನ್ಯಾಯಾಲಯದ ಮುಂದೆ ಬಾಕಿ ಉಳಿದಿರುವ ಎಲ್ಲಾ ಮೊಕದ್ದಮೆಗಳನ್ನು ಈ ವರ್ಷದ ಮೇನಲ್ಲಿ ಹೈಕೋರ್ಟ್ ಸ್ವತಃ ವರ್ಗಾಯಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Thu, 14 December 23