AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು.

Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್
ಕೃಷ್ಣ ಜನ್ಮಭೂಮಿ
Follow us
ರಶ್ಮಿ ಕಲ್ಲಕಟ್ಟ
|

Updated on:Oct 11, 2023 | 4:13 PM

ದೆಹಲಿ ಅಕ್ಟೋಬರ್ 11: ಶಾಹಿ ಈದ್ಗಾ ಮಸೀದಿಯ (Shahi Idgah Masjid) ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಅಲಹಾಬಾದ್ ಹೈಕೋರ್ಟ್ (Allahabad HC) ಬುಧವಾರ ತಿರಸ್ಕರಿಸಿದೆ. ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ. ಇಂದು ಬುಧವಾರ ಮಧ್ಯಾಹ್ನ 2 ಗಂಟೆ ನ್ಯಾಯಾಲಯದ ತೀರ್ಪು ಬಂದಿದೆ.

ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಕೀಲ ಮೆಹಕ್ ಮಹೇಶ್ವರಿ ಅವರು 2020ರಲ್ಲಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಹಿಂದೂಗಳು ವಿವಾದಿತ ಸ್ಥಳದಲ್ಲಿ ಪೂಜೆ ಸಲ್ಲಿಸಬೇಕು. ಪಿಐಎಲ್ ಅದರ ಪ್ರಸ್ತುತ ರೂಪದಲ್ಲಿ ವಿವಾದಿತ ಆವರಣದ ವೈಜ್ಞಾನಿಕ ತನಿಖೆಯನ್ನು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ನಡೆಸಬೇಕು ಎಂದು ಒತ್ತಾಯಿಸಿದೆ.

ಹಿಂದೂ ಕಡೆಯವರ ವಾದವೇನು?

ಈ ಹಿಂದೆ ವಿವಾದಿತ ಸ್ಥಳದಲ್ಲಿ ದೇವಸ್ಥಾನವಿದ್ದು, ಅದನ್ನು ಕೆಡವಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಪರ ಇರುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೇಳಲಾಗಿದೆ. ಈಗ ಮಸೀದಿ ಇರುವ ಸ್ಥಳದಲ್ಲಿ ದ್ವಾಪರ ಯುಗದಲ್ಲಿ ಕಂಸನ ಕಾರಾಗೃಹವಿದ್ದು, ಇಲ್ಲಿ ಕಂಸನು ಶ್ರೀಕೃಷ್ಣನ ತಂದೆ-ತಾಯಿಗಳನ್ನು ಬಂಧಿಸಿದ್ದನು . ಈ ಜೈಲಿನಲ್ಲಿಯೇ ಶ್ರೀಕೃಷ್ಣನ ಹುಟ್ಟಿದ್ದಾನೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.  ಆದ್ದರಿಂದ ಇದು ದೇವರ ನಿಜವಾದ ಜನ್ಮಸ್ಥಳವಾಗಿದೆ.

ಇದನ್ನೂ ಓದಿ: ಹೃದಯ ಬಡಿತವಿರುವ ಭ್ರೂಣವನ್ನು ತೆಗೆಯಲು ಯಾರು ಬಯಸುತ್ತಾರೆ?: ಸುಪ್ರೀಂಕೋರ್ಟ್

ಒಮ್ಮೆ ಅರ್ಜಿ ತಿರಸ್ಕೃತಗೊಂಡಿತ್ತು

ವಿಚಾರಣೆ ವೇಳೆ ವಕೀಲರು ಗೈರು ಹಾಜರಾದ ಕಾರಣ ಈ ಅರ್ಜಿಯನ್ನು ಈಗಾಗಲೇ ಒಮ್ಮೆ ತಿರಸ್ಕರಿಸಲಾಗಿದೆ. ಈ ಪಿಐಎಲ್ ಅನ್ನು 19 ಜನವರಿ 2021 ರಂದು ತಿರಸ್ಕರಿಸಲಾಯಿತು. ಹೈಕೋರ್ಟ್ ಈ PIL ಅನ್ನು ಮಾರ್ಚ್ 2022 ರಲ್ಲಿ ಮರು-ಸಂಗ್ರಹಿಸಿತ್ತು. ಅದನ್ನು ಮತ್ತೊಮ್ಮೆ ವಿಚಾರಣೆಗೆ ಹಾಜರುಪಡಿಸಲು ಹೈಕೋರ್ಟ್ ಸೂಚನೆಗಳನ್ನು ನೀಡಿತ್ತು.

ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಈ ಹಿಂದೆ, ಶ್ರೀ ಕೃಷ್ಣ ಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆಯನ್ನು ಮುಂದುವರಿಸಲು ಅನುಕೂಲವಾಗುವ ಮಹತ್ವದ ಬೆಳವಣಿಗೆಯಲ್ಲಿ, ಅಲಹಾಬಾದ್ ಹೈಕೋರ್ಟ್, ಮೇ 1, 2023 ರಂದು ಯುಪಿ ಸುನ್ನಿ ವಕ್ಫ್ ಬೋರ್ಡ್ ಮತ್ತು ಶಾಹಿ ಈದ್ಗಾ ಟ್ರಸ್ಟ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು. ಅರ್ಜಿಯು ಮಥುರಾ ಜಿಲ್ಲಾ ನ್ಯಾಯಾಧೀಶರ ಮೇ 2022 ರ ತೀರ್ಪನ್ನು ವಿರೋಧಿಸಿತು, ಇದು ಅರ್ಜಿದಾರ ದೇವತೆ ಸಲ್ಲಿಸಿದ ಮೊಕದ್ದಮೆಯ ನಿರ್ವಹಣೆಯನ್ನು ದೃಢಪಡಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Wed, 11 October 23

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್