AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmabhoomi Case: ಮಥುರಾದ ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಮಸೀದಿ ವಿವಾದ: ಮುಂದಿನ ವಿಚಾರಣೆ ಜುಲೈ 1ಕ್ಕೆ ಮುಂದೂಡಿಕೆ

ಮಥುರಾದ ಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಜುಲೈ 1ಕ್ಕೆ ಮುಂದೂಡಲಾಗಿದೆ.

Krishna Janmabhoomi Case: ಮಥುರಾದ ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಮಸೀದಿ ವಿವಾದ: ಮುಂದಿನ ವಿಚಾರಣೆ ಜುಲೈ 1ಕ್ಕೆ ಮುಂದೂಡಿಕೆ
ಕೃಷ್ಣಜನ್ಮಭೂಮಿ ವಿವಾದದ ಸ್ಥಳ
TV9 Web
| Edited By: |

Updated on:May 26, 2022 | 7:25 PM

Share

ಮಥುರಾ: ಉತ್ತರ ಪ್ರದೇಶದಲ್ಲಿ ಶ್ರೀಕೃಷ್ಣ ಜನ್ಮಭೂಮಿಗೆ (Krishna Janmabhoomi Case) ಹೊಂದಿಕೊಂಡಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮಥುರಾದ (Mathura) ಸಿವಿಲ್ ನ್ಯಾಯಾಧೀಶರು ಇಂದು ವಿಚಾರಣೆ ನಡೆಸಿದ್ದಾರೆ. 2020ರ ಸೆಪ್ಟೆಂಬರ್ ತಿಂಗಳಲ್ಲಿ ಈ ಮನವಿಯನ್ನು ಸಲ್ಲಿಸಲಾಯಿತು. ಜಿಲ್ಲಾ ನ್ಯಾಯಾಲಯದ ಆದೇಶವು ಸ್ವೀಕಾರಾರ್ಹ ಎಂದು ಹೇಳಿದ ಮರುದಿನವೇ ಮೊದಲ ಬಾರಿಗೆ ಅರ್ಜಿಯನ್ನು ಆಲಿಸಲಾಯಿತು. ಈ ಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿಯ ಮುಂದಿನ ವಿಚಾರಣೆ ಜುಲೈ 1ರಂದು ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ. ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕುವ ಮನವಿಯನ್ನು ಮೂಲತಃ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 2020ರ ಸೆಪ್ಟೆಂಬರ್ 25ರಂದು ಲಕ್ನೋ ಮೂಲದ ರಂಜನಾ ಅಗ್ನಿಹೋತ್ರಿ ಮತ್ತು ಇತರ ಆರು ಮಂದಿ ಈ ಕುರಿತು ಸಲ್ಲಿಸಿದ್ದರು.

ಶ್ರೀ ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕುವಂತೆ ಕೋರಿ ಸೆಪ್ಟೆಂಬರ್ 2020ರಲ್ಲಿ ಸಲ್ಲಿಸಲಾದ ಮನವಿಯ ವಿಚಾರಣೆಯನ್ನು ಮಥುರಾದ ನ್ಯಾಯಾಲಯದ ನ್ಯಾಯಾಧೀಶರು ಇಂದು ಮಾಡಿದ್ದಾರೆ. ಈ ಪ್ರಕರಣದ ತಾತ್ಕಾಲಿಕ ತಡೆಯಾಜ್ಞೆ ಅರ್ಜಿಗಳು ಸೇರಿದಂತೆ ಎಲ್ಲ ಬಾಕಿ ಪ್ರಕರಣಗಳನ್ನು 4 ತಿಂಗಳೊಳಗೆ ಇತ್ಯರ್ಥ ಮಾಡಬೇಕೆಂದು ಕೆಳ ನ್ಯಾಯಾಲಯಕ್ಕೆ ಮೇ 12ರಂದು ಅಲಹಾಬಾದ್ ಹೈಕೋರ್ಟ್​ ನಿರ್ದೇಶನ ನೀಡಿತ್ತು. ತಾನು ಶ್ರೀಕೃಷ್ಣನ ವಂಶಸ್ಥರೆಂದು ಹೇಳಿಕೊಂಡ ಲಕ್ನೋ ಮೂಲದ ಮನೀಶ್ ಯಾದವ್ ಕತ್ರಾ ಕೇಶವ ದೇವ್ ದೇವಸ್ಥಾನದ 13.37 ಎಕರೆ ಆವರಣದೊಳಗಿನ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಮಸೀದಿಯನ್ನು ಸ್ಥಳಾಂತರಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: Krishna Janmabhoomi case ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ ಪ್ರಕರಣ: 4 ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಸೂಚನೆ

ಇದನ್ನೂ ಓದಿ
Image
Krishna Janmabhoomi Case: ಮಥುರಾ ಕೋರ್ಟ್​ನಿಂದ ಇಂದು ಕೃಷ್ಣ ಜನ್ಮಭೂಮಿ ಪ್ರಕರಣದ ವಿಚಾರಣೆ
Image
Krishna Janmabhoomi Case: ಮಥುರಾ ಕೃಷ್ಣ ಜನ್ಮಭೂಮಿ ವಿವಾದ; ವಿಚಾರಣೆ ಮುಂದೂಡಿದ ನ್ಯಾಯಾಲಯ
Image
Krishna Janmabhoomi Case ಮಥುರಾದಲ್ಲಿ ‘ಕೃಷ್ಣ ಜನ್ಮ ಭೂಮಿಯಲ್ಲಿ ನಿರ್ಮಿಸಿರುವ ಮಸೀದಿ ತೆರವುಗೊಳಿಸಿ’ ಎಂಬ ಮನವಿ ಸ್ವೀಕರಿಸಿದ ನ್ಯಾಯಾಲಯ
Image
Krishna Janmabhoomi case ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ ಪ್ರಕರಣ: 4 ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಸೂಚನೆ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿಯನ್ನು ಅತಿಕ್ರಮಿಸಿ ಮಸೀದಿ ನಿರ್ಮಿಸಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಶುದ್ಧೀಕರಣ ವಿಧಿಗಳನ್ನು ನೆರವೇರಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಮಹಾಸಭಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿಯೇ ಶಾಹಿ ಈದ್ಗಾ ಮಸೀದಿಯೂ ಇದೆ. ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿತ್ತು. 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಈ ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೊಕದ್ದಮೆಯಲ್ಲಿ ಹೇಳಲಾಗಿದೆ.

ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯ ಬಳಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ಗೆ ಸೇರಿದ 13.37 ಎಕರೆ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದರು. ಅವರು ಮಸೀದಿಯನ್ನು ತೆಗೆದುಹಾಕಬೇಕು ಮತ್ತು ಟ್ರಸ್ಟ್‌ಗೆ ಭೂಮಿಯನ್ನು ಹಿಂದಿರುಗಿಸಬೇಕೆಂದು ಕೋರಿದ್ದರು. ಆದರೂ ಸಿವಿಲ್ ನ್ಯಾಯಾಧೀಶರು (ಹಿರಿಯ ವಿಭಾಗ) 2020ರ ಸೆಪ್ಟೆಂಬರ್ 30ರಂದು ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿರಸ್ಕರಿಸಿದರು. ಇದಾದ ಬಳಿಕ ಅರ್ಜಿದಾರರು ಆದೇಶವನ್ನು ಪರಿಷ್ಕರಿಸಬೇಕು ಎಂದು ಕೋರಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದ ಮೊರೆ ಹೋಗಿದ್ದರು. ಮೇ 19ರಂದು ಮಥುರಾ ಜಿಲ್ಲಾ ನ್ಯಾಯಾಲಯವು ಮನವಿಯನ್ನು ಮರುಸ್ಥಾಪಿಸಿತು. ಅರ್ಜಿದಾರರಿಗೆ ಈ ಕುರಿತು ಅರ್ಜಿ ಸಲ್ಲಿಸುವ ಹಕ್ಕಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:25 pm, Thu, 26 May 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ