AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ, ಎಲ್ಲಿಯವರೆಗೆ?

ಕೇಂದ್ರ ಜಲಶಕ್ತಿ ಸಚಿವಾಲಯವು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರಗಳ ನಡುವಿನ ಕೃಷ್ಣಾ ನದಿ ನೀರಿನ ವಿವಾದ ಪರಿಹರಿಸಲು ರಚಿಸಲಾದ ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಧಿಕಾರಾವಧಿಯನ್ನು ವಿಸ್ತರಿಸಿದೆ. ನ್ಯಾಯಮಂಡಳಿಯು ತನ್ನ ಕೆಲಸ ಮುಗಿಸಲು ಹೆಚ್ಚಿನ ಸಮಯ ಕೋರಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಂತರ-ರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಅಡಿಯಲ್ಲಿ ಈ ವಿಸ್ತರಣೆ ಮಾಡಲಾಗಿದೆ.

ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ, ಎಲ್ಲಿಯವರೆಗೆ?
ಕೃಷ್ಣಾ ನದಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 16, 2025 | 6:30 PM

Share

ನವದೆಹಲಿ, ಜುಲೈ 16: ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ನಡುವಿನ ಕೃಷ್ಣಾ ನದಿ (Krishna River) ವಿವಾದ ಪರಿಹಾರಕ್ಕಾಗಿ ಸೃಷ್ಟಿಸಲಾಗಿರುವ ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ (Krishna Water Disputes Tribunal) ಅಧಿಕಾರದ ಅವಧಿಯನ್ನು ಕೇಂದ್ರ ಜಲಶಕ್ತಿ ಸಚಿವಾಲಯವು 2026ರ ಜುಲೈ 31 ರವರೆಗೆ ವಿಸ್ತರಿಸಿದೆ. ತನ್ನ ಕೆಲಸವನ್ನು ಪೂರ್ಣಗೊಳಿಸಲು ನ್ಯಾಯಮಂಡಳಿ ಹೆಚ್ಚಿನ ಸಮಯ ಕೋರಿದ ಹಿನ್ನೆಲೆಯಲ್ಲಿ ಜಲಶಕ್ತಿ ಸಚಿವಾಲಯ ಅಂತರ-ರಾಜ್ಯ ನದಿ ನೀರು ವಿವಾದ ಕಾಯ್ದೆ 1956 ರ ಅಧಿಕಾರಗಳ ಅಡಿಯಲ್ಲಿ ವಿಸ್ತರಣೆ ಮಾಡಿದೆ.

ಸಚಿವಾಲಯವು ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆಯ ಸೆಕ್ಷನ್ 5(3) ಅನ್ನು ಉಲ್ಲೇಖಿಸಿ, “ಸಾರ್ವಜನಿಕ ಹಿತಾಸಕ್ತಿಗಾಗಿ ಮತ್ತು ರಾಜ್ಯಗಳ ಕಳವಳಗಳನ್ನು ಪರಿಹರಿಸಲು” ಹೆಚ್ಚಿನ ಸಮಯವನ್ನು ನೀಡಿದೆ. ಜಲಶಕ್ತಿ ಸಚಿವಾಲಯ ಈ ಹಿಂದೆ ನ್ಯಾಯಮಂಡಳಿಯ ಅಧಿಕಾರಾವಧಿಯನ್ನು 2024 ರ ಮಾರ್ಚ್ ಅಧಿಸೂಚನೆಯ ಮೂಲಕ 2025ರ ಜುಲೈ 31 ರವರೆಗೆ ವಿಸ್ತರಿಸಿತ್ತು.

ಏನಿದು ಕೃಷ್ಣ ಜಲವಿವಾದ ನ್ಯಾಯಮಂಡಳಿ

ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಕೃಷ್ಣಾ ನದಿ ನೀರು ಹಂಚಿಕೆ ವಿವಾದವನ್ನು ನಿರ್ಣಯಿಸಲು ಕೇಂದ್ರ ಸರ್ಕಾರವು 2004ರ ಏಪ್ರಿಲ್​ನಲ್ಲಿ ಕೃಷ್ಣ ಜಲವಿವಾದ ನ್ಯಾಯಮಂಡಳಿ ರಚನೆ ಮಾಡಿತು. ನ್ಯಾಯಮಂಡಳಿಯು 2010ರ ಡಿಸೆಂಬರ್​ನಲ್ಲಿ ತನ್ನ ಆರಂಭಿಕ ವರದಿಯನ್ನು ಸಲ್ಲಿಸಿತ್ತು.

ಇದನ್ನೂ ಓದಿ
Image
ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ
Image
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
Image
ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾ ಸಿಎಂಗೆ ಸಿದ್ದರಾಮಯ್ಯ ಪತ್ರ
Image
ಮಳೆಗೆ ಉಕ್ಕಿ ಹರಿಯುತಿದೆ ಕೃಷ್ಣಾ: ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಜ್ಜು

ಇದನ್ನೂ ನೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸತತ ಮಳೆ, ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಳ

ಆದರೆ, ರಾಜ್ಯಗಳು ಎತ್ತಿದ ಉಲ್ಲೇಖಗಳು ಮತ್ತು ಆಕ್ಷೇಪಣೆಗಳಿಗೆ ಹೆಚ್ಚಿನ ವಿಚಾರಣೆಗಳು ಮತ್ತು ನಿರ್ಧಾರಗಳು ಅಗತ್ಯವಾಗಿದ್ದವು. 2014 ರಲ್ಲಿ ಆಂಧ್ರ ಪ್ರದೇಶ ರಾಜ್ಯ ವಿಭಜನೆಯು ಈ ಸಮಸ್ಯೆಯನ್ನು ಮತ್ತಷ್ಟು ಜಟಿಲವಾಗಿಸಿತು. ನಂತರ ಹೊಸದಾಗಿ ರೂಪುಗೊಂಡ ತೆಲಂಗಾಣ ರಾಜ್ಯವು ಕೃಷ್ಣಾ ನದಿ ನೀರು ಹಂಚಿಕೆಯಲ್ಲಿ ತನಗೂ ಪಾಲು ಬೇಕೆಂದು ಕೇಳಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Wed, 16 July 25

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ