AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ
ಸಾಂದರ್ಭಿಕ ಚಿತ್ರImage Credit source: Free Press Journal
TV9 Web
| Edited By: |

Updated on:Jun 11, 2022 | 10:02 AM

Share

ಕುಲ್ಗಾಮ್: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್-ಮುಜಾಹಿದ್ದೀನ್ (HM)ನ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬ್- ಉಲ್ -ಮುಜಾಹಿದ್ದೀನ್​ನ ಓರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇಂದು (ಶನಿವಾರ) ಮುಂಜಾನೆ ಖಂಡಿಪೋರಾ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಖಂಡಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಇದಾದ ನಂತರ ಎನ್‌ಕೌಂಟರ್ ನಡೆಸಲಾಗಿದೆ.

ಇದನ್ನೂ ಓದಿ
Image
Prophet Row: ಜಾರ್ಖಂಡ್​ನಲ್ಲಿ ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ; ಇಬ್ಬರು ಸಾವು, ಹಲವರಿಗೆ ಗಾಯ
Image
Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ
Image
Karnataka Rain: ಕರ್ನಾಟಕ, ತಮಿಳುನಾಡು, ಆಂಧ್ರದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

ಇದನ್ನೂ ಓದಿ: Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ

ಅಡಗಿದ್ದ ಭಯೋತ್ಪಾದಕರು ಸೇನಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಸತ್ತವನು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿಸಿದ್ದಾರೆ.

ಇದರ ನಡುವೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ಬರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಅಬ್ದುಲ್ ರೆಹಮಾನ್ ಮಿರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂಬ ಇಬ್ಬರನ್ನು ಬರಾಮುಲ್ಲಾದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 11 June 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ