AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kullu Accident: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಟೆಂಪೋ ಪ್ರಪಾತಕ್ಕೆ ಬಿದ್ದು 7 ಪ್ರವಾಸಿಗರು ಸಾವು

ಕುಲುವಿನ ಬಂಜಾರ್ ಕಣಿವೆಯ ಘಿಯಾಗಿ ಪ್ರದೇಶದಲ್ಲಿ ಭಾನುವಾರ ರಾತ್ರಿ 8.30ಕ್ಕೆ ಪ್ರವಾಸಿ ವಾಹನವೊಂದು ಬಂಡೆಯ ಮೇಲಿಂದ ಪ್ರಪಾತಕ್ಕೆ ಉರುಳಿದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ

Kullu Accident: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಟೆಂಪೋ ಪ್ರಪಾತಕ್ಕೆ ಬಿದ್ದು 7 ಪ್ರವಾಸಿಗರು ಸಾವು
ಕುಲು ಜಿಲ್ಲೆಯಲ್ಲಿ ಅಪಘಾತ
TV9 Web
| Edited By: |

Updated on: Sep 26, 2022 | 9:12 AM

Share

ಕುಲು: ಹಿಮಾಚಲ ಪ್ರದೇಶದ ಕುಲು (Kullu) ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಟೆಂಪೋ ಟ್ರಾವೆಲರ್ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಮಾಚಲ ಪ್ರದೇಶದ (Himachal Pradesh) ಬಂಜಾರ್ ಉಪವಿಭಾಗದ ಘಿಯಾಘಿ ಬಳಿ ಈ ಅಪಘಾತ (Accident) ಸಂಭವಿಸಿದೆ.

ಕುಲುವಿನ ಬಂಜಾರ್ ಕಣಿವೆಯ ಘಿಯಾಗಿ ಪ್ರದೇಶದಲ್ಲಿ ಭಾನುವಾರ ರಾತ್ರಿ 8.30ಕ್ಕೆ ಪ್ರವಾಸಿ ವಾಹನವೊಂದು ಬಂಡೆಯ ಮೇಲಿಂದ ಪ್ರಪಾತಕ್ಕೆ ಉರುಳಿದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಐವರು ಗಾಯಾಳುಗಳನ್ನು ಕುಲು ವಲಯದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಮತ್ತು 5 ಮಂದಿಯನ್ನು ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಲು ಎಸ್‌ಪಿ ಗುರುದೇವ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Accident: ಛತ್ತೀಸ್​ಗಢದ ಜಶ್ಪುರದಲ್ಲಿ ಬಸ್ ಪಲ್ಟಿ ಹೊಡೆದು ಮೂವರು ಸಾವು, 6 ಜನರಿಗೆ ಗಾಯ

ಬಂಜಾರ್‌ನ ಬಿಜೆಪಿ ಶಾಸಕ ಸುರೇಂದ್ರ ಶೌರಿ ಕೂಡ ಟ್ವೀಟ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಮೊದಲು ಬಂಜಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಕುಲು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತ ಪ್ರವಾಸಿಗರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳವರಾಗಿದ್ದು, ಅವರ ಕುರಿತ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾತ್ರಿ ವೇಳೆಯಲ್ಲಿ ಪ್ರಪಾತಕ್ಕೆ ಇಳಿದು ತಮ್ಮ ಜೀವವನ್ನು ಪಣಕ್ಕಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಮತ್ತು ಸ್ಥಳೀಯರಿಗೆ ಶಾಸಕ ಸುರೇಂದ್ರ ಶೌರಿ ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ