AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumbalangi: ಕೇರಳದ ಕುಂಬಳಂಗಿ ದೇಶದ ಮೊಟ್ಟ ಮೊದಲ ಸ್ಯಾನಿಟರಿ ಪ್ಯಾಡ್ ಮುಕ್ತ ಗ್ರಾಮ!

Menstrual Cup: ಭಾರತದ ಮೊದಲ ಮಾದರಿ ಪ್ರವಾಸೋದ್ಯಮ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕುಂಬಳಂಗಿಯು ದೇಶದ ಮೊದಲ ಸ್ಯಾನಿಟರಿ ನ್ಯಾಪ್​ಕಿನ್ ಮುಕ್ತ ಪಂಚಾಯತ್ ಆಗಲಿದೆ.

Kumbalangi: ಕೇರಳದ ಕುಂಬಳಂಗಿ ದೇಶದ ಮೊಟ್ಟ ಮೊದಲ ಸ್ಯಾನಿಟರಿ ಪ್ಯಾಡ್ ಮುಕ್ತ ಗ್ರಾಮ!
ಮುಟ್ಟಿನ ಕಪ್
TV9 Web
| Edited By: |

Updated on: Jan 14, 2022 | 7:37 PM

Share

ಎರ್ನಾಕುಲಂ: ಕೇರಳದ ಎರ್ನಾಕುಲಂನಲ್ಲಿರುವ ಕುಂಬಳಂಗಿ (Kumbalangi) ದೇಶದಲ್ಲೇ ಮೊದಲ ಸ್ಯಾನಿಟರಿ ನ್ಯಾಪ್​ಕಿನ್ ಮುಕ್ತ ಗ್ರಾಮವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿನ್ನೆ (ಗುರುವಾರ) ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕುಂಬಳಂಗಿಯನ್ನು ಸ್ಯಾನಿಟರಿ ಪ್ಯಾಡ್​ ಮುಕ್ತ ಗ್ರಾಮವೆಂದು ಘೋಷಣೆ ಮಾಡಿದ್ದಾರೆ. ಎರ್ನಾಕುಲಂ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶಿಷ್ಟವಾದ ಪ್ರಚಾರದ ಭಾಗವಾಗಿ ಈ ಸಾಧನೆ ಮಾಡಲಾಗಿದೆ.

ಮಹಿಳೆಯರಲ್ಲಿ ಋತುಚಕ್ರದ ಸಂದರ್ಭದಲ್ಲಿ ಯಾವ ರೀತಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸುವ ಪ್ರಚಾರದ ಭಾಗವಾಗಿ, 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರಿಗೆ ಮುಟ್ಟಿನ ಕಪ್​ಗಳನ್ನು ವಿತರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಒಟ್ಟು 5,000 ಮುಟ್ಟಿನ ಕಪ್‌ಗಳನ್ನು ವಿತರಿಸಲಾಗುವುದು.

ಕೇರಳದ ಸಂಸದ ಹಿಬಿ ಈಡನ್ ಪ್ರಕಾರ, ಎರ್ನಾಕುಲಂ ಸಂಸದೀಯ ಕ್ಷೇತ್ರದಲ್ಲಿ ಜಾರಿಗೊಳಿಸಲಾಗುತ್ತಿರುವ ‘ಅವಲ್ಕೈ’ (ಅವಳಿಗಾಗಿ) ಯೋಜನೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಕೊಚ್ಚಿಯಲ್ಲಿರುವ ಪ್ರವಾಸಿಗರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಕುಂಬಳಂಗಿ ಕೂಡ ಹೊಸ ಪ್ರವಾಸಿ ಮಾಹಿತಿ ಕೇಂದ್ರವನ್ನು ಹೊಂದಿದೆ. ಇದು ಭಾರತದ ಮೊದಲ ಮಾದರಿ ಪ್ರವಾಸಿ ಗ್ರಾಮ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಭಾರತದ ಮೊದಲ ಮಾದರಿ ಪ್ರವಾಸೋದ್ಯಮ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕುಂಬಳಂಗಿಯು ದೇಶದ ಮೊದಲ ಸ್ಯಾನಿಟರಿ ನ್ಯಾಪ್​ಕಿನ್ ಮುಕ್ತ ಪಂಚಾಯತ್ ಆಗಲಿದೆ. ಎಚ್‌ಎಲ್‌ಎಲ್ ಮ್ಯಾನೇಜ್‌ಮೆಂಟ್ ಅಕಾಡೆಮಿಯ ‘ತಿಂಗಲ್’ ಯೋಜನೆ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನೊಂದಿಗಿನ ಒಪ್ಪಂದದ ನಂತರ ಎರ್ನಾಕುಲಂ ಸಂಸದೀಯ ಕ್ಷೇತ್ರದಲ್ಲಿ ಜಾರಿಗೊಳಿಸಲಾಗುತ್ತಿರುವ ‘ಅವಲ್ಕೈ’ ಎಂಬ ಉಪಕ್ರಮದ ಒಂದು ಭಾಗವಾಗಿ ಈ ಕ್ರಮವನ್ನು ಮಾಡಲಾಗಿದೆ ಎಂದು ಸಂಸದ ಹೈಬಿ ಈಡನ್ ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್‌ ಪ್ರಕರಣ ಏರಿಕೆ : ಕೇರಳದಲ್ಲಿ 1ರಿಂದ 9ನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ

ಕೇರಳ: ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ; ಆರೋಪಿ ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ ಎಂದ ಕೋರ್ಟ್

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ