AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumbalangi: ಕೇರಳದ ಕುಂಬಳಂಗಿ ದೇಶದ ಮೊಟ್ಟ ಮೊದಲ ಸ್ಯಾನಿಟರಿ ಪ್ಯಾಡ್ ಮುಕ್ತ ಗ್ರಾಮ!

Menstrual Cup: ಭಾರತದ ಮೊದಲ ಮಾದರಿ ಪ್ರವಾಸೋದ್ಯಮ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕುಂಬಳಂಗಿಯು ದೇಶದ ಮೊದಲ ಸ್ಯಾನಿಟರಿ ನ್ಯಾಪ್​ಕಿನ್ ಮುಕ್ತ ಪಂಚಾಯತ್ ಆಗಲಿದೆ.

Kumbalangi: ಕೇರಳದ ಕುಂಬಳಂಗಿ ದೇಶದ ಮೊಟ್ಟ ಮೊದಲ ಸ್ಯಾನಿಟರಿ ಪ್ಯಾಡ್ ಮುಕ್ತ ಗ್ರಾಮ!
ಮುಟ್ಟಿನ ಕಪ್
TV9 Web
| Updated By: ಸುಷ್ಮಾ ಚಕ್ರೆ|

Updated on: Jan 14, 2022 | 7:37 PM

Share

ಎರ್ನಾಕುಲಂ: ಕೇರಳದ ಎರ್ನಾಕುಲಂನಲ್ಲಿರುವ ಕುಂಬಳಂಗಿ (Kumbalangi) ದೇಶದಲ್ಲೇ ಮೊದಲ ಸ್ಯಾನಿಟರಿ ನ್ಯಾಪ್​ಕಿನ್ ಮುಕ್ತ ಗ್ರಾಮವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿನ್ನೆ (ಗುರುವಾರ) ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕುಂಬಳಂಗಿಯನ್ನು ಸ್ಯಾನಿಟರಿ ಪ್ಯಾಡ್​ ಮುಕ್ತ ಗ್ರಾಮವೆಂದು ಘೋಷಣೆ ಮಾಡಿದ್ದಾರೆ. ಎರ್ನಾಕುಲಂ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶಿಷ್ಟವಾದ ಪ್ರಚಾರದ ಭಾಗವಾಗಿ ಈ ಸಾಧನೆ ಮಾಡಲಾಗಿದೆ.

ಮಹಿಳೆಯರಲ್ಲಿ ಋತುಚಕ್ರದ ಸಂದರ್ಭದಲ್ಲಿ ಯಾವ ರೀತಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸುವ ಪ್ರಚಾರದ ಭಾಗವಾಗಿ, 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರಿಗೆ ಮುಟ್ಟಿನ ಕಪ್​ಗಳನ್ನು ವಿತರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಒಟ್ಟು 5,000 ಮುಟ್ಟಿನ ಕಪ್‌ಗಳನ್ನು ವಿತರಿಸಲಾಗುವುದು.

ಕೇರಳದ ಸಂಸದ ಹಿಬಿ ಈಡನ್ ಪ್ರಕಾರ, ಎರ್ನಾಕುಲಂ ಸಂಸದೀಯ ಕ್ಷೇತ್ರದಲ್ಲಿ ಜಾರಿಗೊಳಿಸಲಾಗುತ್ತಿರುವ ‘ಅವಲ್ಕೈ’ (ಅವಳಿಗಾಗಿ) ಯೋಜನೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಕೊಚ್ಚಿಯಲ್ಲಿರುವ ಪ್ರವಾಸಿಗರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಕುಂಬಳಂಗಿ ಕೂಡ ಹೊಸ ಪ್ರವಾಸಿ ಮಾಹಿತಿ ಕೇಂದ್ರವನ್ನು ಹೊಂದಿದೆ. ಇದು ಭಾರತದ ಮೊದಲ ಮಾದರಿ ಪ್ರವಾಸಿ ಗ್ರಾಮ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಭಾರತದ ಮೊದಲ ಮಾದರಿ ಪ್ರವಾಸೋದ್ಯಮ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕುಂಬಳಂಗಿಯು ದೇಶದ ಮೊದಲ ಸ್ಯಾನಿಟರಿ ನ್ಯಾಪ್​ಕಿನ್ ಮುಕ್ತ ಪಂಚಾಯತ್ ಆಗಲಿದೆ. ಎಚ್‌ಎಲ್‌ಎಲ್ ಮ್ಯಾನೇಜ್‌ಮೆಂಟ್ ಅಕಾಡೆಮಿಯ ‘ತಿಂಗಲ್’ ಯೋಜನೆ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನೊಂದಿಗಿನ ಒಪ್ಪಂದದ ನಂತರ ಎರ್ನಾಕುಲಂ ಸಂಸದೀಯ ಕ್ಷೇತ್ರದಲ್ಲಿ ಜಾರಿಗೊಳಿಸಲಾಗುತ್ತಿರುವ ‘ಅವಲ್ಕೈ’ ಎಂಬ ಉಪಕ್ರಮದ ಒಂದು ಭಾಗವಾಗಿ ಈ ಕ್ರಮವನ್ನು ಮಾಡಲಾಗಿದೆ ಎಂದು ಸಂಸದ ಹೈಬಿ ಈಡನ್ ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್‌ ಪ್ರಕರಣ ಏರಿಕೆ : ಕೇರಳದಲ್ಲಿ 1ರಿಂದ 9ನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ

ಕೇರಳ: ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ; ಆರೋಪಿ ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ ಎಂದ ಕೋರ್ಟ್

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ