AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳ ಅಂತ್ಯ; ಪ್ರಧಾನಿ ನರೇಂದ್ರ ಮೋದಿ ಮನವಿಗೆ ಸಾಧುಗಳ ಮನ್ನಣೆ

ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.

ಕುಂಭಮೇಳ ಅಂತ್ಯ; ಪ್ರಧಾನಿ ನರೇಂದ್ರ ಮೋದಿ ಮನವಿಗೆ ಸಾಧುಗಳ ಮನ್ನಣೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Apr 17, 2021 | 6:56 PM

Share

ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಹೆಚ್ಚುತ್ತಿದೆ. ಹೀಗಿರುವಾಗಲೇ ಉತ್ತರಾಖಂಡದ ಹರಿದ್ವಾರದ ಕುಂಭಮೇಳ ಆತಂಕ ಸೃಷ್ಟಿಸಿದೆ. ಹೀಗೆ ಕುಂಭಮೇಳ ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಮಿತಿಮೀರುತ್ತಿದೆ. ಕುಂಭಮೇಳದಲ್ಲಿ ಅನೇಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದು ಧರ್ಮ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್​ ಅವರೊಂದಿಗೆ ಫೋನ್​ ಮೂಲಕ ಚರ್ಚೆ ನಡೆಸಿದ್ದೇನೆ. ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿಯನ್ನೂ ಮಾಡಿದ್ದೇನೆ ಎಂದಿದ್ದರು.

ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಜುನಾ ಅಖಾಡದ ಅವಧೇಶಾನಂದ ಗಿರಿ ಜಿ ಮಹಾರಾಜ್, ಭಾರತದ ಜನರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆ. ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ಎಲ್ಲಾ ದೇವರುಗಳನ್ನು ಇಂದೇ (ಏಪ್ರಿಲ್​ 17) ವಿಸರ್ಜನೆ ಮಾಡಿದ್ದೇವೆ ಎಂದಿದ್ದಾರೆ.

ಏಪ್ರಿಲ್​ 1ರಂದು ಕುಂಭಮೇಳ ಆರಂಭವಾಗಿತ್ತು. ಈ ಸಮಯದಲ್ಲೇ ಕೊರೊನಾ ವೈರಸ್​ ಮಿತಿ ಮೀರಿ ಹರಡಿತ್ತು. ಕುಂಭಮೇಳದಿಂದ ಕೊರೊನಾ ವೈರಸ್​ ಹೆಚ್ಚುವ ಭೀತಿ ಕಾಡಿತ್ತು. ಈ ಬಗ್ಗೆ ಸಾಕಷ್ಟು ವಿರೋಧಗಳು ಕೂಡ ಕೇಳಿ ಬಂದಿದ್ದವು.

ಇದನ್ನೂ ಓದಿ: ಕುಂಭಮೇಳದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆಚರಣೆ ಸಾಂಕೇತಿಕವಾಗಿದ್ದರೆ ಸಾಕು ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ

Published On - 6:42 pm, Sat, 17 April 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ