AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳ ಅಂತ್ಯ; ಪ್ರಧಾನಿ ನರೇಂದ್ರ ಮೋದಿ ಮನವಿಗೆ ಸಾಧುಗಳ ಮನ್ನಣೆ

ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.

ಕುಂಭಮೇಳ ಅಂತ್ಯ; ಪ್ರಧಾನಿ ನರೇಂದ್ರ ಮೋದಿ ಮನವಿಗೆ ಸಾಧುಗಳ ಮನ್ನಣೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Apr 17, 2021 | 6:56 PM

Share

ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಹೆಚ್ಚುತ್ತಿದೆ. ಹೀಗಿರುವಾಗಲೇ ಉತ್ತರಾಖಂಡದ ಹರಿದ್ವಾರದ ಕುಂಭಮೇಳ ಆತಂಕ ಸೃಷ್ಟಿಸಿದೆ. ಹೀಗೆ ಕುಂಭಮೇಳ ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಮಿತಿಮೀರುತ್ತಿದೆ. ಕುಂಭಮೇಳದಲ್ಲಿ ಅನೇಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದು ಧರ್ಮ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್​ ಅವರೊಂದಿಗೆ ಫೋನ್​ ಮೂಲಕ ಚರ್ಚೆ ನಡೆಸಿದ್ದೇನೆ. ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿಯನ್ನೂ ಮಾಡಿದ್ದೇನೆ ಎಂದಿದ್ದರು.

ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಜುನಾ ಅಖಾಡದ ಅವಧೇಶಾನಂದ ಗಿರಿ ಜಿ ಮಹಾರಾಜ್, ಭಾರತದ ಜನರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆ. ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ಎಲ್ಲಾ ದೇವರುಗಳನ್ನು ಇಂದೇ (ಏಪ್ರಿಲ್​ 17) ವಿಸರ್ಜನೆ ಮಾಡಿದ್ದೇವೆ ಎಂದಿದ್ದಾರೆ.

ಏಪ್ರಿಲ್​ 1ರಂದು ಕುಂಭಮೇಳ ಆರಂಭವಾಗಿತ್ತು. ಈ ಸಮಯದಲ್ಲೇ ಕೊರೊನಾ ವೈರಸ್​ ಮಿತಿ ಮೀರಿ ಹರಡಿತ್ತು. ಕುಂಭಮೇಳದಿಂದ ಕೊರೊನಾ ವೈರಸ್​ ಹೆಚ್ಚುವ ಭೀತಿ ಕಾಡಿತ್ತು. ಈ ಬಗ್ಗೆ ಸಾಕಷ್ಟು ವಿರೋಧಗಳು ಕೂಡ ಕೇಳಿ ಬಂದಿದ್ದವು.

ಇದನ್ನೂ ಓದಿ: ಕುಂಭಮೇಳದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆಚರಣೆ ಸಾಂಕೇತಿಕವಾಗಿದ್ದರೆ ಸಾಕು ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ

Published On - 6:42 pm, Sat, 17 April 21

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು