AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಸಾಧುಗಳ ನೋಡಿ ಬಟ್ಟೆ ಬಿಚ್ಚಿ ಮರಳಿನಲ್ಲಿ ಉರುಳಾಡಿದ್ದ ವಿದೇಶಿ ಮಹಿಳೆ

ಇದು 2001ರಲ್ಲಿ ನಡೆದ ಕುಂಭಮೇಳದಲ್ಲಿ ನಡೆದ ಘಟನೆ ಅಂದು ಎಲ್ಲಾ ವರ್ಷಗಳಂತೆ ನಾಗಾಸಾಧುಗಳು ಮೊದಲ ರಾಜಸ್ನಾನ ಮಾಡಲು ನಡಿ ಬಳಿ ಬಂದಿದ್ದರು. ಇದೇ ಸಮಯದಲ್ಲಿ ವಿದೇಶಿ ಮಹಿಳೆಯೊಬ್ಬರು ನಾಗಾಸಾಧುಗಳನ್ನು ನೋಡಿದ ತಕ್ಷಣ ತನ್ನ ಬಟ್ಟೆಗಳನ್ನೆಲ್ಲಾ ತೆಗೆದು ನದಿಗೆ ಹಾರಿದ್ದಳು. ಬಳಿಕ ಸ್ನಾನ ಮಾಡಿ ಬಂದು ಮರಳಿನಲ್ಲಿ ಉರುಳಾಡಿದ್ದಳು. ಈಗ ಮಹಾಕುಂಭದ ಸಮಯದಲ್ಲಿ ಈ ಮಹಿಳೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ನಾಗಾಸಾಧುಗಳ ನೋಡಿ ಬಟ್ಟೆ ಬಿಚ್ಚಿ ಮರಳಿನಲ್ಲಿ ಉರುಳಾಡಿದ್ದ ವಿದೇಶಿ ಮಹಿಳೆ
ನಾಗಾಸಾಧುಗಳುImage Credit source: NDTV
ನಯನಾ ರಾಜೀವ್
|

Updated on:Jan 22, 2025 | 11:39 AM

Share

ಮಹಾಕುಂಭದಲ್ಲಿ ನಾಗಾಸಾಧುಗಳು ಪವಿತ್ರ ಸ್ನಾನ ಮಾಡಿದ ಬಳಿಕವೇ ಉಳಿದ ಭಕ್ತರು ಪುಣ್ಯಸ್ನಾನ ಮಾಡಲು ಅವಕಾಶ ನೀಡುವುದು ವಾಡಿಕೆ. ಈ ಮಹಾಕುಂಭವಲ್ಲ 2001ರ ಕುಂಭಮೇಳದಲ್ಲಿ ನಡೆದ ಘಟನೆಯೊಂದು ಈಗ ಮತ್ತೆ ಸದ್ದು ಮಾಡುತ್ತಿದೆ. ಕುಂಭ ಮೇಳದ ಮೊದಲನೇ ದಿನ, ನಾಗಾಸಾಧುಗಳು ರಾಜಸ್ನಾನ ಮಾಡಲು ಆಗಮಿಸಿದ್ದರು.

ಹರಹರ ಮಹಾದೇವ್ ಎಂದು ಜಪಿಸುತ್ತಿದ್ದರು. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಇಳಿದ ತಕ್ಷಣ ಸುಮಾರು 25-30ರ ಆಸು ಪಾಸಿನ ವಿದೇಶಿ ಮಹಿಳೆ ಕೂಡ ತಕ್ಷಣ ತನ್ನ ಬಟ್ಟೆಗಳನ್ನು ತೆಗೆಯಲು ಆರಂಭಿಸಿದಳು, ಜನರು ಅರ್ಥಮಾಡಿಕೊಳ್ಳುವ ಮೊದಲೇ  ನೀರಿಗೆ ಹಾರಿದ್ದಳು.

ಸ್ವಲ್ಪ ಸಮಯದ ನಂತರ, ಮಹಿಳೆ ಸ್ನಾನ ಮುಗಿಸಿ ಹೊರಬಂದು ಸಂಗಮ ಬಳಿಯ ಮರಳಿನ ರಾಶಿಯ ಮೇಲೆ ಉರುಳಲು ಪ್ರಾರಂಭಿಸಿದಳು. ನಾಗಾಗಳನ್ನು ನೋಡಿದ ಅವಳು ತನ್ನ ಬೆತ್ತಲೆ ದೇಹಕ್ಕೆ ಮರಳನ್ನು ಉಜ್ಜಲು ಪ್ರಾರಂಭಿಸಿದಳು. ಅವಳನ್ನು ನೋಡಲು ಜನಸಾಗರವೇ ನೆರೆದಿತ್ತು. ನಂತರ ಕೆಲವು ಪೊಲೀಸ್ ಅಧಿಕಾರಿಗಳು ಅಲ್ಲಿಗೆ ಬಂದು ಆಕೆಗೆ ಕಂಬಳಿ ಹೊದಿಸಿ ತಮ್ಮೊಂದಿಗೆ ಕರೆದೊಯ್ದರು.

ಮತ್ತಷ್ಟು ಓದಿ: ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಸುಧಾಮೂರ್ತಿ

ಪತ್ರಿಕೆಯೊಂದು ತನ್ನ ಮುಖಪುಟದಲ್ಲಿ ಆ ಮಹಿಳೆಯ ಚಿತ್ರಗಳನ್ನು ಪ್ರಕಟಿಸಿದೆ. ಆಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿತ್ತು. ರಾಜನಾಥ್ ಸಿಂಗ್ ಸಿಎಂ ಆಗಿದ್ದು, ಲಾಲ್ಜಿ ಟಂಡನ್ ಅವರಿಗೆ ಕುಂಭಮೇಳದ ಜವಾಬ್ದಾರಿ ನೀಡಲಾಗಿತ್ತು. ಮಹಿಳೆಯ ಚಿತ್ರಗಳನ್ನು ಪ್ರಕಟಿಸಿದ್ದಕ್ಕಾಗಿ ಲಾಲ್ಜಿ ಟಂಡನ್ ಮಾಧ್ಯಮಗಳ ವಿರುದ್ಧ ಕೋಪಗೊಂಡರು.

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು 8.81 ಕೋಟಿಗೂ ಹೆಚ್ಚು ಭಕ್ತರು ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಮಹಾಕುಂಭ ಮೇಳದ ಕೇಂದ್ರಬಿಂದುವೆಂದರೆ ಪವಿತ್ರ ಸ್ನಾನ ಅಥವಾ ಅಮೃತ ಸ್ನಾನ.

ಉತ್ತರ ಪ್ರದೇಶದ ಪ್ರಯಾಗ್‌ನಲ್ಲಿ 144 ವರ್ಷಗಳಿಗೆ ಒಮ್ಮೆ ನಡೆಯುವ ಈ ಮೇಳದ ವಿಶೇಷವೆಂದರೆ ಅದು ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುವುದು ಒಂದಾಗಿದೆ. ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವುದು ವಿಶೇಷವಾಗಿದೆ. ಸಣ್ಣ ದೋಣಿಯ ಮೂಲಕ ಹಿಂದೂ ತೀರ್ಥಯಾತ್ರೆಗಳನ್ನು ಇಲ್ಲಿನ ತ್ರಿವೇಣಿ ಸಂಗಮಕ್ಕೆ ಕರೆದುಕೊಂಡು ಹೋಗುವುದಕ್ಕೆ ವ್ಯವಸ್ಥೆ ಇದೆ. ಪುರೋಹಿತರು ಸಹ ಇಲ್ಲಿ ವಿಶೇಷ ಪೂಜೆಗಳನ್ನು ಮಾಡುತ್ತಾರೆ. ಇಲ್ಲಿ ತ್ರಿವೇಣಿ ಸಂಗಮ ಎನ್ನುವುದು ಗಂಗಾ, ಯಮುನಾ ಮತ್ತು ಸರಸ್ವತಿ ನದಿಯ ಸಮಾಗಮವಾಗಿದೆ. ಈ ಸಂಗಮದಲ್ಲಿ ನೀವು ಸ್ನಾನ ಮಾಡುವುದರಿಂದ ಪುನರ್‌ಜನ್ಮಗಳ ಪಾಪ ಕಳೆಯುತ್ತದೆ ಎನ್ನುವುದು ನಂಬಿಕೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:36 am, Wed, 22 January 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು