Sign In

By signing in or creating an account, you agree with Associated Broadcasting Company's Terms & Conditions and Privacy Policy.

Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಇಂದು ಮುಂಜಾನೆ ಕಾಶ್ಮೀರದ ಕುಪ್ವಾರಾದಲ್ಲಿ ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ಎಲ್ಇಟಿ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.

Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 07, 2022 | 9:56 AM

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ (Kupwara) ಜಿಲ್ಲೆಯ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ (Terrorists Encounter) ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್​ಇಟಿ ಉಗ್ರರ (LeT Terrorist) ಹತ್ಯೆ ಮಾಡಲಾಗಿದೆ.

” ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಇಬ್ಬರು ಉಗ್ರರು ಹತರಾಗಿದ್ದಾರೆ. ಉಳಿದವರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇನ್​ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Terrorist Encounter: ಜಮ್ಮು ಕಾಶ್ಮೀರದ ಅನಂತ್​ನಾಗ್​ನಲ್ಲಿ ಎನ್​ಕೌಂಟರ್; ಹಿಜ್ಬ್ ಕಮಾಂಡರ್ ಹತ್ಯೆ
Image
Kashmir Encounter: ಕಾಶ್ಮೀರದ ಆವಂತಿಪೊರಾದಲ್ಲಿ ಭದ್ರತಾ ಪಡೆಯಿಂದ ಇಬ್ಬರು ಉಗ್ರರ ಎನ್​ಕೌಂಟರ್
Image
Terrorist Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ ಬೆನ್ನಲ್ಲೇ ಆವಂತಿಪೊರಾದಲ್ಲೂ ಎನ್​ಕೌಂಟರ್
Image
Srinagar Encounter: ಶ್ರೀನಗರದಲ್ಲಿ ಸಿಆರ್​​ಪಿಎಫ್ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಇಬ್ಬರು ಪಾಕಿಸ್ತಾನಿ ಉಗ್ರರ ಎನ್​ಕೌಂಟರ್​

ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಹತನಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಸರಣಿಗಳು ನಡೆಯುತ್ತಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಉಗ್ರ ಸಂಘಟನೆಗಳ ಕಮಾಂಡರ್‌ಗಳನ್ನು ಹೊಡೆದುರುಳಿಸಲಾಗಿದೆ.

ಇದನ್ನೂ ಓದಿ: Pulwama encounter ಪುಲ್ವಾಮಾ ಎನ್‌ಕೌಂಟರ್‌: ವಲಸೆ ಕಾರ್ಮಿಕರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಹತ್ಯೆ

ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ನಿಖರವಾದ ಮಾಹಿತಿಯ ಆಧಾರದ ಮೇಲೆ ಹೆಚ್ಚಿನ ಕಾರ್ಯಾಚರಣೆಗಳನ್ನು ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ನಡೆಸಿವೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 am, Tue, 7 June 22

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ